ಇಂದು ಕೋರ್ಟ್ಗೆ ಹಾಜರಾಗಲಿರುವ ‘ಡಿ’ ಗ್ಯಾಂಗ್ : ಈ ವಾರದಲ್ಲೇ ತೀರ್ಪು ಪ್ರಕಟವಾಗುವ ಸಾಧ್ಯತೆ !
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಪ್ರಮುಖ ಆರೋಪಿಗಳು ಇಂದು (ಆ.12) ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ಗೆ ಹಾಜರಾಗಲಿದ್ದಾರೆ.
ವಿಚಾರಣೆಗೆ ಹಾಜರಾಗುತ್ತಿರುವ ಆರೋಪಿಗಳ ವಿರುದ್ಧದ ಟ್ರಯಲ್ ಆರಂಭಿಸಲು ಇಂದು ದಿನಾಂಕ ನಿಗದಿಯಾಗುವ ಸಾಧ್ಯತೆ ಇದೆ. ಈ ಪ್ರಕರಣವನ್ನು ಆರು ತಿಂಗಳೊಳಗೆ ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್ಗೆ ಸರ್ಕಾರಿ ವಕೀಲರು ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ, 17 ಆರೋಪಿಗಳು, ದರ್ಶನ್ ಸಹಿತ, ಕೋರ್ಟ್ ಮುಂದೆ ಹಾಜರಾಗಿ ವಿಚಾರಣೆಗೆ ಒಳಗಾಗಲಿದ್ದಾರೆ.
ಇನ್ನೊಂದೆಡೆ, ರಾಜ್ಯ ಸರ್ಕಾರವು ದರ್ಶನ್, ಪವಿತ್ರ ಗೌಡ, ರಾಘವೇಂದ್ರ, ಪವನ್, ಜಗದೀಶ್, ಅನುಕುಮಾರ್ ಹಾಗೂ ರವಿಶಂಕರ್ ಸೇರಿದಂತೆ ಹಲವರ ಜಾಮೀನು ರದ್ದುಪಡಿಸಲು ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ಪೂರ್ಣಗೊಂಡಿದ್ದು, ಈ ವಾರದಲ್ಲೇ ತೀರ್ಪು ಪ್ರಕಟವಾಗುವ ಸಾಧ್ಯತೆ ಇದೆ.
ಸುರಕ್ಷತಾ ಕಾರಣಗಳಿಂದಾಗಿ ಸರ್ಕಾರ ಜಾಮೀನು ರದ್ದತಿಗೆ ಒತ್ತಾಯಿಸಿದ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್ ಆರೋಪಿಗಳ ಪರ ವಕೀಲರಿಗೆ ಲಿಖಿತ ವಾದ ಸಲ್ಲಿಸಲು ಸೂಚನೆ ನೀಡಿತ್ತು. ಅದರಂತೆ, ಕಳೆದ ವಾರವಷ್ಟೇ ಲಿಖಿತ ವಾದ ಸಲ್ಲಿಕೆ ನಡೆದಿದೆ. ಜಾಮೀನು ರದ್ದಾದರೆ, ಎಲ್ಲ ಆರೋಪಿಗಳನ್ನೂ ಪುನಃ ಜೈಲಿಗೆ ಕಳಿಸುವ ನಿರೀಕ್ಷೆಯಿದೆ.







