‘Thalapathy 69’ ವಿಜಯ್ ಕೊನೆಯ ಸಿನಿಮಾ

ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆ ಮೂಲಕ ‘Thalapathy 69’ ಚಿತ್ರ ಸಿದ್ಧವಾಗಲಿದೆ. ಈ ಚಿತ್ರದ ಬಗ್ಗೆ ಇಂದು (ಸೆಪ್ಟೆಂಬ್ 14) ಸಂಜೆ 5 ಗಂಟೆಗೆ ಅಪ್​ಡೇಟ್ ಕೊಡೋದಾಗಿ ಕೆವಿಎನ್ ಸಂಸ್ಥೆ ತಿಳಿಸಿದೆ.

ದಳಪತಿ ವಿಜಯ್ ಅವರು ತಮ್ಮ 69ನೇ ಸಿನಿಮಾಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಇದು ವಿಜಯ್ ಅವರ ಕೊನೆಯ ಸಿನಿಮಾ ಆಗಿರಲಿದೆ. ಇತ್ತೀಚೆಗಷ್ಟೇ ರಿಲೀಸ್ ಆದ ‘ಉಔಂಖಿ’ ಸಿನಿಮಾ ಫ್ಲಾಪ್ ಆಗಿದೆ. ಈ ಕಾರಣಕ್ಕೆ ಅವರ ಮುಂದಿನ ಚಿತ್ರದ ಬಗ್ಗೆ ಫ್ಯಾನ್ಸ್ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾ ದಳಪತಿ ವಿಜಯ್ ಅವರ ಕೊನೆಯ ಸಿನಿಮಾ ಎಂದು ‘ಕೆವಿಎನ್ ಪ್ರೊಡಕ್ಷನ್ಸ್’ ಖಚಿತಪಡಿಸಿದೆ.

 

 

ದಳಪತಿ ವಿಜಯ್ ಅವರು ರಾಜಕೀಯದಲ್ಲಿ ಬ್ಯುಸಿ ಆಗುತ್ತಿದ್ದಾರೆ. ಈ ಕಾರಣಕ್ಕೆ ‘Thalapathy 69’ ಅವರ ಕೊನೆಯ ಸಿನಿಮಾ ಆಗಲಿದೆ ಎಂದು ಹೇಳಲಾಗಿತ್ತು. ಇದಾದ ಬಳಿಕವೂ ಅವರು ಕೆಲವು ಸಿನಿಮಾ ಒಪ್ಪಿಕೊಳ್ಳುತ್ತಾರೆ ಎಂದು ವರದಿ ಆಗಿತ್ತು. ಆದರೆ, ಆ ರೀತಿ ಇಲ್ಲ ಎಂಬುದು ಸ್ಪಷ್ಟವಾಗಿದೆ. ಈಗ ರಿಲೀಸ್ ಆಗಿರೋ ವಿಡಿಯೋದಲ್ಲಿ ಈ ಬಗ್ಗೆ ಮಾಹಿತಿ ನೀಡಲಾಗಿದೆ.

ಕನ್ನಡದ ಕೆವಿಎನ್ ಪ್ರೊಡಕ್ಷನ್ಸ್ ಸಂಸ್ಥೆ ‘Thalapathy 69’ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ. ಈ ಚಿತ್ರದ ಅಪ್​​ಡೇಟ್ ಇಂದು (ಸೆಪ್ಟೆಂಬರ್ 14) ಸಿಗಲಿದೆ. ಈ ಮೊದಲು ವಿಜಯ್ ಸಿನಿಮಾ ರಿಲೀಸ್ ಆದಾಗ ಫ್ಯಾನ್ಸ್ ಹೇಗೆ ಸಂಭ್ರಮಿಸಿದ್ದರು ಎನ್ನುವುದರ ಫೋಟೋ ಹಂಚಿಕೊಳ್ಳಲಾಗಿದೆ. ವಿಡಿಯೋದ ಕೊನೆಯಲ್ಲಿ ‘ಕೊನೆಯ ಬಾರಿ ಖಿhಚಿಟಚಿಠಿಚಿಣhಥಿ 69’ ಎಂದು ಬರೆಯಲಾಗಿದೆ. ಈ ಮೂಲಕ ಇದು ವಿಜಯ್ ಕೊನೆಯ ಸಿನಿಮಾ ಎಂಬುದನ್ನು ಖಚಿತಪಡಿಸಿದ್ದಾರೆ.

‘ತಮಿಳಗ ವೆಟ್ರಿ ಕಳಗಂ’ ಅನ್ನೋದು ವಿಜಯ್ ಪಕ್ಷದ ಹೆಸರು. ಅವರು ಮುಂದಿನ ದಿನಗಳಲ್ಲಿ ಪಕ್ಷ ಕಟ್ಟು ಕೆಲಸದಲ್ಲಿ ಬ್ಯುಸಿ ಆಗಲಿದ್ದಾರೆ. 2026ರ ವಿಧಾನಸಭೆ ಚುನಾವಣೆಯಲ್ಲಿ ಅವರು ಸ್ಪರ್ಧೆ ಮಾಡಲಿದ್ದಾರೆ. ಇದಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ.

  • Related Posts

    ಹೊಸ ದಾಖಲೆಯೊಂದಿಗೆ ಉಳಿದವರು ಕಂಡಂತೆ ಸಿನಿಮಾಗೆ 12 ವರ್ಷ; ನೆನಪು ಹಂಚಿಕೊಂಡ ರಕ್ಷಿತ್ ಶೆಟ್ಟಿ

    Ulidavaru Kandanathe: ಕನ್ನಡದ ಕಲ್ಟ್ ಸಿನಿಮಾಗಳಲ್ಲಿ ಒಂದು. ರಕ್ಷಿತ್ ಶೆಟ್ಟಿಯ ನಿರ್ದೇಶನ ಪ್ರತಿಭೆಯನ್ನು ಭಾರತೀಯ ಚಿತ್ರರಂಗಕ್ಕೆ ತೋರಿಸಿದ ಸಿನಿಮಾ ಅದು. ‘ಉಳಿದವರು ಕಂಡಂತೆ’ ಬಿಡುಗಡೆ ಆಗಿ ಇಂದಿಗೆ ಬರೋಬ್ಬರಿ 12 ವರ್ಷ. ರಕ್ಷಿತ್ ಶೆಟ್ಟಿ, ‘ಉಳಿದವರು ಕಂಡಂತೆ’ ಸಿನಿಮಾದ ಪೋಸ್ಟರ್ ಹಂಚಿಕೊಂಡಿದ್ದು,…

    ಮತ್ತೊಮ್ಮೆ ಪವನ್ ಕಲ್ಯಾಣ್ ಮತ್ತು ಮಹೇಶ್ ಬಾಬು ಅಭಿಮಾನಿಗಳ ನಡುವೆ ಕಿರಿಕ್!

    ಪವನ್ ಕಲ್ಯಾಣ್ ಮತ್ತು ಮಹೇಶ್ ಬಾಬು ಅಭಿಮಾನಿಗಳ ನಡುವೆ ಕಿರಿಕ್ ಶುರುವಾಗಿದೆ. ಇದಕ್ಕೆ ಕಾರಣ ಆಗಿರುವುದು ಪವನ್ ಕಲ್ಯಾಣ್ ಅವರ ಆಪ್ತ ನಿರ್ದೇಶಕರೊಬ್ಬರ ಟ್ವೀಟ್. ಬಿಡುಗಡೆ ಆಗಲಿರುವ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾದ ನಿರ್ದೇಶಕ ಮಾಡಿರುವ ಟ್ವೀಟ್​​ನಿಂದಾಗಿ ಮಹೇಶ್ ಬಾಬು ಅಭಿಮಾನಿಗಳು…

    You Missed

    ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

    ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

    ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

    ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

    ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

    ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

    ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

    ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

    ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

    ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

    ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

    ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು