ಸಂಜು ಸ್ಯಾಮ್ಸನ್ ರಾಜಸ್ಥಾನ್ ರಾಯಲ್ಸ್ ತೊರೆಯಲು ಕಾರಣ ಯಾರು.?

ಸಂಜು ಸ್ಯಾಮ್ಸನ್ ಐಪಿಎಲ್ 2026 ರಲ್ಲಿ ಕೇವಲ 9 ಪಂದ್ಯಗಳಲ್ಲಿ ಮಾತ್ರ ಕಣಕ್ಕಿಳಿದಿದ್ದರು. ಈ ವೇಳೆ 35.62 ಸರಾಸರಿಯಲ್ಲಿ 285 ರನ್ ಗಳಿಸಿದ್ದಾರೆ. ಹಾಗೆಯೇ ಐಪಿಎಲ್​ನಲ್ಲಿ 177 ಪಂದ್ಯಗಳಲ್ಲಿ ಬ್ಯಾಟ್ ಬೀಸಿರುವ ಸ್ಯಾಮ್ಸನ್ 139.04 ಸ್ಟ್ರೈಕ್ ರೇಟ್‌ನಲ್ಲಿ ಈವರೆಗೆ 4704 ರನ್‌ಗಳನ್ನು ಗಳಿಸಿದ್ದಾರೆ. ಇದರ ನಡುವೆ 3 ಶತಕಗಳು ಮತ್ತು 26 ಅರ್ಧಶತಕಗಳನ್ನು ಸಹ ಬಾರಿಸಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಮಿನಿ ಹರಾಜಿಗೂ ಮುನ್ನ ಸಂಜು ಸ್ಯಾಮ್ಸನ್ ರಾಜಸ್ಥಾನ್ ರಾಯಲ್ಸ್ ತಂಡದಿಂದ ಹೊರಬರುವುದು ಬಹುತೇಕ ಖಚಿತವಾಗಿದೆ. ಈಗಾಗಲೇ ಸ್ಯಾಮ್ಸನ್, ತನ್ನನ್ನು ಟ್ರೇಡ್ ಮಾಡಿಕೊಳ್ಳಲು ಅಥವಾ ರಿಲೀಸ್ ಮಾಡಲು ಆರ್​ಆರ್ ಫ್ರಾಂಚೈಸಿಗೆ ತಿಳಿಸಿದ್ದಾರೆ. ಇದಾಗ್ಯೂ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಇನ್ನೂ ಯಾವುದೇ ದೃಢ ನಿರ್ಧಾರ ತೆಗೆದುಕೊಂಡಿಲ್ಲ. ಅತ್ತ ಕಳೆದ ಕೆಲ ವರ್ಷಗಳಿಂದ ಆರ್​ಆರ್ ತಂಡದಲ್ಲಿದ್ದರೂ ಇದೀಗ ದಿಢೀರ್ ಸ್ಯಾಮ್ಸನ್ ಹೊರಬರಲು ಕಾರಣವೇನು? ಎಂಬ ಪ್ರಶ್ನೆ ಮೂಡುವುದು ಸಹಜ.

ಕೊಡಗಿನಲ್ಲೂ ವಿಶ್ವ ಆನೆ ದಿನಾಚರಣೆ ಸಂಭ್ರಮ.

ಈ ಪ್ರಶ್ನೆಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ಆಟಗಾರ ಎಸ್. ಬದ್ರಿನಾಥ್ ಉತ್ತರ ನೀಡಿದ್ದಾರೆ. ಬದ್ರಿನಾಥ್ ಅವರ ಪ್ರಕಾರ, ಸಂಜು ಸ್ಯಾಮ್ಸನ್ ರಾಜಸ್ಥಾನ್ ರಾಯಲ್ಸ್ ತಂಡವನ್ನು ತೊರೆಯಲು ಮುಖ್ಯ ಕಾರಣ ರಿಯಾನ್ ಪರಾಗ್. ಈ ಬಗ್ಗೆ ಯೂಟ್ಯೂಬ್ ಚಾನೆಲ್​ನಲ್ಲಿ ಮಾತನಾಡಿದ ಎಸ್​ ಬದ್ರಿನಾಥ್, ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಕಳೆದ ಸೀಸನ್​ನಲ್ಲಿ ತೆಗೆದುಕೊಂಡ ನಿರ್ಧಾರದಿಂದ ಸ್ಯಾಮ್ಸನ್ ಬೇಸರಗೊಂಡಿರುವ ಸಾಧ್ಯತೆಯಿದೆ.

ಏಕೆಂದರೆ ಕಳೆದ ಸೀಸನ್​ನಲ್ಲಿ ಸಂಜು ಸ್ಯಾಮ್ಸನ್ ಅವರ ಬದಲಿಗೆ ರಿಯಾನ್ ಪರಾಗ್ ಕೆಲ ಮ್ಯಾಚ್​ಗಳಲ್ಲಿ ನಾಯಕರಾಗಿ ಕಾಣಿಸಿಕೊಂಡಿದ್ದರು. ಸಾಧಾರಣ ಆಟಗಾರನಿಗೆ ನಾಯಕತ್ವ ನೀಡಿದರೆ, ಸ್ಯಾಮ್ಸನ್‌ನಂತಹ ಆಟಗಾರರು ತಂಡದಲ್ಲಿ ಹೇಗೆ ಉಳಿಯಲು ಸಾಧ್ಯ?. ಇದೇ ಕಾರಣದಿಂದಾಗಿ ಸಂಜು ಸ್ಯಾಮ್ಸನ್ ಆರ್​ಆರ್ ತಂಡವನ್ನು ತೊರೆಯಲು ನಿರ್ಧರಿಸಿರುವ ಸಾಧ್ಯತೆಯಿದೆ ಎಂದು ಎಸ್. ಬದ್ರಿನಾಥ್ ಹೇಳಿದ್ದಾರೆ.

ಕಳೆದ ಸೀಸನ್​ನ ಆರಂಭದಲ್ಲಿ ಸಂಜು ಸ್ಯಾಮ್ಸನ್ ಸಂಪೂರ್ಣ ಫಿಟ್ ಆಗಿರಲಿಲ್ಲ. ಹೀಗಾಗಿ ರಿಯಾನ್ ಪರಾಗ್ ತಂಡವನ್ನು ಮುನ್ನಡೆಸಿದ್ದರು. ಅತ್ತ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿ ಅನೇಕ ಅನುಭವಿ ಆಟಗಾರರಿದ್ದರೂ ಪರಾಗ್​ಗೆ ಕ್ಯಾಪ್ಟನ್ ಪಟ್ಟ ನೀಡಿದ್ದು ಚರ್ಚೆಗೆ ಕಾರಣವಾಗಿತ್ತು. ಇದರಿಂದ ತಂಡದಲ್ಲೂ ವೈಮನಸ್ಸು ಮೂಡಿದೆ ಎಂಬ ಮಾತುಗಳು ಕೇಳಿ ಬಂದಿದ್ದವು.

ಇದೀಗ ಅದರ ಮುಂದುವರೆದ ಭಾಗವಾಗಿ ಸಂಜು ಸ್ಯಾಮ್ಸನ್ ರಾಜಸ್ಥಾನ್ ರಾಯಲ್ಸ್ ತಂಡವನ್ನು ತೊರೆಯಲಿದ್ದಾರೆ ಎಂಬ ಸುದ್ದಿಯೊಂದು ಮಹತ್ವ ಪಡೆದುಕೊಂಡಿದೆ. ಇತ್ತ ಸ್ಯಾಮ್ಸನ್ ರಿಲೀಸ್ ಆಗುವ ಮುನ್ನವೇ ಟ್ರೇಡ್ ಮಾಡಿಕೊಳ್ಳಲು ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಆಸಕ್ತಿ ತೋರಿದೆ. ಹೀಗಾಗಿ ಐಪಿಎಲ್ 2026 ರಲ್ಲಿ ಸಂಜು ಸ್ಯಾಮ್ಸನ್ ಸಿಎಸ್​ಕೆ ಪರ ಕಣಕ್ಕಿಳಿದರೂ ಅಚ್ಚರಿಪಡಬೇಕಿಲ್ಲ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಸ್ಟಾರ್ ಅಥ್ಲೀಟ್ ಮೊದಲಿಂದಲೂ RCB ಅಭಿಮಾನಿ….

ವಿಶ್ವದ ಅತಿ ವೇಗದ ಅಥ್ಲೀಟ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿ ಬಳಗಕ್ಕೆ ಸೇರಿದ್ದಾರೆ. RCB ಜೆರ್ಸಿ ಧರಿಸಿ ಫೋಟೋ ಪೋಸ್ಟ್ ಮಾಡಿ, ತಂಡಕ್ಕೆ ಬೆಂಬಲ ಸೂಚಿಸಿದ್ದಾರೆ. ಇದರಿಂದ ವಿಶ್ವಾದ್ಯಂತ ಇರುವ RCB ಫ್ಯಾನ್ಸ್ ಸಂತಸಗೊಂಡಿದ್ದು, ಫ್ರಾಂಚೈಸಿಯ ಜನಪ್ರಿಯತೆ ಮತ್ತಷ್ಟು ಹೆಚ್ಚಿಸಿದೆ. ಕೇವಲ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು