ಸಂಜು ಸ್ಯಾಮ್ಸನ್ ರಾಜಸ್ಥಾನ್ ರಾಯಲ್ಸ್ ತೊರೆಯಲು ಕಾರಣ ಯಾರು.?

ಸಂಜು ಸ್ಯಾಮ್ಸನ್ ಐಪಿಎಲ್ 2026 ರಲ್ಲಿ ಕೇವಲ 9 ಪಂದ್ಯಗಳಲ್ಲಿ ಮಾತ್ರ ಕಣಕ್ಕಿಳಿದಿದ್ದರು. ಈ ವೇಳೆ 35.62 ಸರಾಸರಿಯಲ್ಲಿ 285 ರನ್ ಗಳಿಸಿದ್ದಾರೆ. ಹಾಗೆಯೇ ಐಪಿಎಲ್​ನಲ್ಲಿ 177 ಪಂದ್ಯಗಳಲ್ಲಿ ಬ್ಯಾಟ್ ಬೀಸಿರುವ ಸ್ಯಾಮ್ಸನ್ 139.04 ಸ್ಟ್ರೈಕ್ ರೇಟ್‌ನಲ್ಲಿ ಈವರೆಗೆ 4704 ರನ್‌ಗಳನ್ನು ಗಳಿಸಿದ್ದಾರೆ. ಇದರ ನಡುವೆ 3 ಶತಕಗಳು ಮತ್ತು 26 ಅರ್ಧಶತಕಗಳನ್ನು ಸಹ ಬಾರಿಸಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಮಿನಿ ಹರಾಜಿಗೂ ಮುನ್ನ ಸಂಜು ಸ್ಯಾಮ್ಸನ್ ರಾಜಸ್ಥಾನ್ ರಾಯಲ್ಸ್ ತಂಡದಿಂದ ಹೊರಬರುವುದು ಬಹುತೇಕ ಖಚಿತವಾಗಿದೆ. ಈಗಾಗಲೇ ಸ್ಯಾಮ್ಸನ್, ತನ್ನನ್ನು ಟ್ರೇಡ್ ಮಾಡಿಕೊಳ್ಳಲು ಅಥವಾ ರಿಲೀಸ್ ಮಾಡಲು ಆರ್​ಆರ್ ಫ್ರಾಂಚೈಸಿಗೆ ತಿಳಿಸಿದ್ದಾರೆ. ಇದಾಗ್ಯೂ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಇನ್ನೂ ಯಾವುದೇ ದೃಢ ನಿರ್ಧಾರ ತೆಗೆದುಕೊಂಡಿಲ್ಲ. ಅತ್ತ ಕಳೆದ ಕೆಲ ವರ್ಷಗಳಿಂದ ಆರ್​ಆರ್ ತಂಡದಲ್ಲಿದ್ದರೂ ಇದೀಗ ದಿಢೀರ್ ಸ್ಯಾಮ್ಸನ್ ಹೊರಬರಲು ಕಾರಣವೇನು? ಎಂಬ ಪ್ರಶ್ನೆ ಮೂಡುವುದು ಸಹಜ.

ಕೊಡಗಿನಲ್ಲೂ ವಿಶ್ವ ಆನೆ ದಿನಾಚರಣೆ ಸಂಭ್ರಮ.

ಈ ಪ್ರಶ್ನೆಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ಆಟಗಾರ ಎಸ್. ಬದ್ರಿನಾಥ್ ಉತ್ತರ ನೀಡಿದ್ದಾರೆ. ಬದ್ರಿನಾಥ್ ಅವರ ಪ್ರಕಾರ, ಸಂಜು ಸ್ಯಾಮ್ಸನ್ ರಾಜಸ್ಥಾನ್ ರಾಯಲ್ಸ್ ತಂಡವನ್ನು ತೊರೆಯಲು ಮುಖ್ಯ ಕಾರಣ ರಿಯಾನ್ ಪರಾಗ್. ಈ ಬಗ್ಗೆ ಯೂಟ್ಯೂಬ್ ಚಾನೆಲ್​ನಲ್ಲಿ ಮಾತನಾಡಿದ ಎಸ್​ ಬದ್ರಿನಾಥ್, ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಕಳೆದ ಸೀಸನ್​ನಲ್ಲಿ ತೆಗೆದುಕೊಂಡ ನಿರ್ಧಾರದಿಂದ ಸ್ಯಾಮ್ಸನ್ ಬೇಸರಗೊಂಡಿರುವ ಸಾಧ್ಯತೆಯಿದೆ.

ಏಕೆಂದರೆ ಕಳೆದ ಸೀಸನ್​ನಲ್ಲಿ ಸಂಜು ಸ್ಯಾಮ್ಸನ್ ಅವರ ಬದಲಿಗೆ ರಿಯಾನ್ ಪರಾಗ್ ಕೆಲ ಮ್ಯಾಚ್​ಗಳಲ್ಲಿ ನಾಯಕರಾಗಿ ಕಾಣಿಸಿಕೊಂಡಿದ್ದರು. ಸಾಧಾರಣ ಆಟಗಾರನಿಗೆ ನಾಯಕತ್ವ ನೀಡಿದರೆ, ಸ್ಯಾಮ್ಸನ್‌ನಂತಹ ಆಟಗಾರರು ತಂಡದಲ್ಲಿ ಹೇಗೆ ಉಳಿಯಲು ಸಾಧ್ಯ?. ಇದೇ ಕಾರಣದಿಂದಾಗಿ ಸಂಜು ಸ್ಯಾಮ್ಸನ್ ಆರ್​ಆರ್ ತಂಡವನ್ನು ತೊರೆಯಲು ನಿರ್ಧರಿಸಿರುವ ಸಾಧ್ಯತೆಯಿದೆ ಎಂದು ಎಸ್. ಬದ್ರಿನಾಥ್ ಹೇಳಿದ್ದಾರೆ.

ಕಳೆದ ಸೀಸನ್​ನ ಆರಂಭದಲ್ಲಿ ಸಂಜು ಸ್ಯಾಮ್ಸನ್ ಸಂಪೂರ್ಣ ಫಿಟ್ ಆಗಿರಲಿಲ್ಲ. ಹೀಗಾಗಿ ರಿಯಾನ್ ಪರಾಗ್ ತಂಡವನ್ನು ಮುನ್ನಡೆಸಿದ್ದರು. ಅತ್ತ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿ ಅನೇಕ ಅನುಭವಿ ಆಟಗಾರರಿದ್ದರೂ ಪರಾಗ್​ಗೆ ಕ್ಯಾಪ್ಟನ್ ಪಟ್ಟ ನೀಡಿದ್ದು ಚರ್ಚೆಗೆ ಕಾರಣವಾಗಿತ್ತು. ಇದರಿಂದ ತಂಡದಲ್ಲೂ ವೈಮನಸ್ಸು ಮೂಡಿದೆ ಎಂಬ ಮಾತುಗಳು ಕೇಳಿ ಬಂದಿದ್ದವು.

ಇದೀಗ ಅದರ ಮುಂದುವರೆದ ಭಾಗವಾಗಿ ಸಂಜು ಸ್ಯಾಮ್ಸನ್ ರಾಜಸ್ಥಾನ್ ರಾಯಲ್ಸ್ ತಂಡವನ್ನು ತೊರೆಯಲಿದ್ದಾರೆ ಎಂಬ ಸುದ್ದಿಯೊಂದು ಮಹತ್ವ ಪಡೆದುಕೊಂಡಿದೆ. ಇತ್ತ ಸ್ಯಾಮ್ಸನ್ ರಿಲೀಸ್ ಆಗುವ ಮುನ್ನವೇ ಟ್ರೇಡ್ ಮಾಡಿಕೊಳ್ಳಲು ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಆಸಕ್ತಿ ತೋರಿದೆ. ಹೀಗಾಗಿ ಐಪಿಎಲ್ 2026 ರಲ್ಲಿ ಸಂಜು ಸ್ಯಾಮ್ಸನ್ ಸಿಎಸ್​ಕೆ ಪರ ಕಣಕ್ಕಿಳಿದರೂ ಅಚ್ಚರಿಪಡಬೇಕಿಲ್ಲ.

Related Posts

ಬಿಸಿಸಿಐಗೆ ಸ್ಪಾನ್ಸರ್ ಶಿಪ್ ಬಿಸಿ: ದುಬಾರಿ ಬೆಲೆಯಿಂದ ಹಿಂದೆ ಸರಿದ ಕಂಪನಿಗಳು!

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಭಾರತ ಕ್ರಿಕೆಟ್ ತಂಡದ ತವರಿನ ಪಂದ್ಯಗಳಿಗೆ ಹೊಸ ಟೈಟಲ್ ಸ್ಪಾನ್ಸರ್ ಹುಡುಕಲು ತೀವ್ರ ಹರಸಾಹಸ ಪಡುತ್ತಿದೆ. ಆಗಸ್ಟ್ 13ರ ಅಂತಿಮ ಗಡುವು ಮುಗಿದಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಬಿಡ್‌ಗಳು ಬಾರದಿರುವುದು ಜಗತ್ತಿನ ಅತಿ ಶ್ರೀಮಂತ ಕ್ರಿಕೆಟ್…

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

  ಸೌತ್ ಆಫ್ರಿಕಾ, ನಮೀಬಿಯಾ ಮತ್ತು ಝಿಂಬಾಬ್ವೆ ಜಂಟಿಯಾಗಿ ಆಯೋಜಿಸಲಿರುವ 2027ರ ಏಕದಿನ ವಿಶ್ವಕಪ್​ಗೆ ಟೀಮ್ ಇಂಡಿಯಾದ ಸಿದ್ಧತೆಗಳು ಶುರುವಾಗಿದೆ. ಈ ಸಿದ್ಧತೆಗಳ ನಡುವೆ ಭಾರತ ತಂಡದ ನಾಯಕ ಶುಭ್​ಮನ್ ಗಿಲ್ ನೀಡಿರುವ ಹೇಳಿಕೆಗಳು ಇದೀಗ ಭಾರೀ ವೈರಲ್ ಆಗಿದೆ. ಭಾರತೀಯ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!