ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ರಾಜಣ್ಣ ಬೆಂಬಲಿಗ.

ಸಚಿವ ಕೆಎನ್​ ರಾಜಣ್ಣ ಅವರನ್ನು ಸಂಪುಟದಿಂದ ವಜಾ ಮಾಡಿದ್ದಕ್ಕೆ ಅವರ ಅಭಿಮಾನಿಗಳು ರೊಚ್ಚಿಗೆದ್ದಿದ್ದಾರೆ. ಮಧುಗಿರಿ ಬಂದ್​​ಗೆ ಕರೆ ನೀಡಿ ಆಕ್ರೋಶ ಹೊರಹಾಕಿದ್ದಾರೆ. ಇನ್ನು ರಾಜಣ್ಣರನ್ನು ವಜಾ ಮಾಡಿದ್ದನ್ನೇ ಅಸ್ತ್ರ ಮಾಡಿಕೊಂಡಿರುವ ಪ್ರತಿಪಕ್ಷ ಬಿಜೆಪಿ, ಸದನದ ಹೊರಗೂ ಒಳಗೂ ಕಾಂಗ್ರೆಸ್ ನಾಯಕರನ್ನು ಮಾತಿನಲ್ಲೇ ಕಟ್ಟಿ ಹಾಕುವ ಯತ್ನ ಮಾಡಿದೆ.

ಸಚಿವ ಸ್ಥಾನದಿಂದ ಕೆಎನ್ ರಾಜಣ್ಣ ಅವರನ್ನು ವಜಾ ಮಾಡಿದ್ದನ್ನು ಖಂಡಿಸಿ ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣದಲ್ಲಿ ರಾಜಣ್ಣ ಬೆಂಬಲಿಗರು, ಅಭಿಮಾನಿಗಳು ಮಂಗಳವಾರ ಬೃಹತ್​​ ಪ್ರತಿಭಟನೆ ನಡೆಸಿದರು. ಮಧುಗಿರಿ ಬಂದ್​ಗೆ ಕರೆ ನೀಡಿ ಆಕ್ರೋಶ ಹೊರಹಾಕಿದರು. ಪ್ರತಿಭಟನೆಯಲ್ಲಿ ಸಾವಿರಾರು ಕಾರ್ಯಕರ್ತರು, ಅಭಿಮಾನಿಗಳು ಭಾಗಿಯಾದರು. ಈ ವೇಳೆ ರಾಜಣ್ಣ ಅಭಿಮಾನಿಯೊಬ್ಬ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸುವಂತೆ ಹೈಡ್ರಾಮಾ ಮಾಡಿದ. ಕೂಡಲೇ ಸ್ಥಳದಲ್ಲಿದ್ದವರು ಆತನ ಮೇಲೆ ನೀರು ಸುರಿದು ರಕ್ಷಿಸಿದರು.

ನಾಟಿ ಹೋರಿಗಳ ಕತ್ತು ಕೊಯ್ದು ಕಟುಕರು ! ಅಕ್ರಮ ಸಾಗಣೆಯ ಅನುಮಾನ!

 

ಸಾಮೂಹಿಕ ರಾಜೀನಾಮೆಗೆ ಮುಂದಾದ ರಾಜಣ್ಣ ಬೆಂಬಲಿಗರು
ಮಧುಗಿರಿಯ ಪುರಸಭೆ ವಾರ್ಡ್​ ಸಂಖ್ಯೆ 22 ರ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಸಾಮೂಹಿಕ ರಾಜೀನಾಮೆಗೆ ಮುಂದಾಗಿದ್ದಾರೆ. 10ನೇ ವಾರ್ಡ್ ಸದಸ್ಯೆ ಗಿರಿಜಾ ಮಂಜುನಾಥ್ ಉಪ ವಿಭಾಗಾಧಿಕಾರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಅತ್ತ ರಾಜಣ್ಣ ಅಭಿಮಾನಿಗಳು ಪ್ರತಿಭಟನೆ ಹಾದಿ ತುಳಿದಿದ್ದರೆ, ಇತ್ತ ಬಿಜೆಪಿಗೆ ರಾಜಣ್ಣರನ್ನು ವಜಾ ಮಾಡಿದ್ದೇ ಅಸ್ತ್ರವಾಗಿ ಸಿಕ್ಕಿದೆ.

ರಾಜಣ್ಣ ವಜಾ ಮಾಡಿದ್ದೇಕೆ? ಸದನದಲ್ಲಿ ಉತ್ತರಕ್ಕೆ ಬಿಜೆಪಿ ಪಟ್ಟು
ವಿಧಾನಸಭೆ ಕಲಾಪದ ಆರಂಭದಲ್ಲಿ, ಅಂದರೆ ಪ್ರಶ್ನೋತ್ತರ ವೇಳೆ ಶುರುವಾಗುವ ಮುನ್ನ ವಿಪಕ್ಷ ನಾಯಕ ಆರ್​ ಅಶೋಕ್ ಮಾತನಾಡಿ, ರಾಜಣ್ಣರನ್ನು ವಜಾ ಮಾಡಿದ್ದೇಕೆ? ಸರ್ಕಾರ ಇದಕ್ಕೆ ಉತ್ತರ ಕೊಡಬೇಕೆಂದು ಆಗ್ರಹಿಸಿದರು. ಈ ವೇಳೆ, ಸ್ಪೀಕರ್ ಖಾದರ್ ಇದು ಅವರ ಪಕ್ಷದ ಆಂತರಿಕ ವಿಚಾರ ಎಂದಿದ್ದಕ್ಕೆ ಬಿಜೆಪಿ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.
ಇಷ್ಟಕ್ಕೆ ಸುಮ್ಮನಾಗದ ಆರ್​.ಅಶೋಕ್, ಮತ ಕಳ್ಳತನದ ಕುರಿತು ರಾಜಣ್ಣ ಸತ್ಯ ಹೇಳಿದ್ದಾರೆ. ಸತ್ಯ ಹೇಳಿದ್ದಕ್ಕೆ ಅವರನ್ನು ಬಲಿ ಪಡೆದುಕೊಂಡಿದ್ದಾರೆಯೇ ಎಂದು ಪ್ರಶ್ನಿಸಿದರು.

ಇತ್ತ ವಿಧಾನ ಪರಿಷತ್​ನಲ್ಲೂ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪತ್ರವನ್ನು ಓದಿದರು. ಇದಕ್ಕೆ ಕಾಂಗ್ರೆಸ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಸಭಾಪತಿ ಹೊರಟ್ಟಿ, ಪ್ರಶ್ನೋತ್ತರ ಕಲಾಪದ ಬಳಿಕ ಬಳಿಕ ಪ್ರಸ್ತಾಪಿಸುವಂತೆ ಸೂಚನೆ ನೀಡಿದರು. ಆಗ ಬಿಜೆಪಿ ಸದಸ್ಯರು ಈಗಲೇ ಸರ್ಕಾರ ಸ್ಪಷ್ಟನೆ ನೀಡಬೇಕೆಂದು ಆಗ್ರಹಿಸಿದರು.

ವಿಧಾನಸಭೆಯಲ್ಲಿ ಡಿಸಿಎಂ ಡಿಕೆ ಕೆಮ್ಮಿದ್ದಕ್ಕೆ ಕಿಚಾಯಿಸಿದ ಬಿಜೆಪಿ
ಇದೆಲ್ಲದರ ನಡುವೆ ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪ ನಡೆಯುತ್ತಿರುವಾಗ ಉತ್ತರ ನೀಡಲು ಎದ್ದು ನಿಂತ ಡಿಸಿಎಂ ಡಿಕೆ ಶಿವಕುಮಾರ್ ಜೋರಾಗಿ ಕೆಮ್ಮತೊಡಗಿದರು. ಈ ವೇಳೆ, ಬಿಜೆಪಿ ಶಾಸಕ ಸುನಿಲ್ ಕುಮಾರ್, ‘ನೀವು ಕೆಮ್ಮಿದರೆ ಯಾರಿಗೆ ಅಪಾಯ ಕಾದಿದೆಯೋ ಗೊತ್ತಿಲ್ಲ’ ಎಂದು ಕಾಲೆಳೆದರು. ಸುನೀಲ್ ಕುಮಾರ್ ಮಾತಿಗೆ ಸದನ ನಗೆ ಗಡಲಲ್ಲಿ ತೇಲಿತು. ಏನೂ ಪ್ರತಿಕ್ರಿಯೆ ನೀಡದ ಡಿಕೆ ಶಿವಕುಮಾರ್ ಉತ್ತರ ಮುಂದುವರಿಸಿದರು.
ಸದನದ ಹೊರಗೂ ಮಾತನಾಡಿರುವ ಬಿಜೆಪಿ ನಾಯಕರು, ರಾಜಣ್ಣ ವಜಾ ಮಾಡುವಂಥ ಅಪರಾಧ ಏನು ಮಾಡಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಕೇಂದ್ರ ಸಚಿವ ಸಂಪುಟ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಪುನರ್‌ರಚನೆ: ಫಡ್ನವೀಸ್ ಸೇರಿದಂತೆ ನಾಲ್ವರು ಸಿಎಂಗಳಿಗೆ ಉನ್ನತ ಸ್ಥಾನ ಸಾಧ್ಯತೆ

ಮುಂಬರುವ 2027-28ರ ರಾಜ್ಯ ವಿಧಾನಸಭಾ ಚುನಾವಣೆಗಳು ಹಾಗೂ 2029ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸಚಿವ ಸಂಪುಟ ಮತ್ತು ಬಿಜೆಪಿಯ 12 ಸದಸ್ಯರ ಸಂಸದೀಯ ಮಂಡಳಿಯನ್ನು ಶೀಘ್ರದಲ್ಲೇ ಪುನರ್‌ರಚಿಸಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಈ ಉನ್ನತ ಮಟ್ಟದ ಬದಲಾವಣೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!