ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ರಾಜಣ್ಣ ಬೆಂಬಲಿಗ.

ಸಚಿವ ಕೆಎನ್​ ರಾಜಣ್ಣ ಅವರನ್ನು ಸಂಪುಟದಿಂದ ವಜಾ ಮಾಡಿದ್ದಕ್ಕೆ ಅವರ ಅಭಿಮಾನಿಗಳು ರೊಚ್ಚಿಗೆದ್ದಿದ್ದಾರೆ. ಮಧುಗಿರಿ ಬಂದ್​​ಗೆ ಕರೆ ನೀಡಿ ಆಕ್ರೋಶ ಹೊರಹಾಕಿದ್ದಾರೆ. ಇನ್ನು ರಾಜಣ್ಣರನ್ನು ವಜಾ ಮಾಡಿದ್ದನ್ನೇ ಅಸ್ತ್ರ ಮಾಡಿಕೊಂಡಿರುವ ಪ್ರತಿಪಕ್ಷ ಬಿಜೆಪಿ, ಸದನದ ಹೊರಗೂ ಒಳಗೂ ಕಾಂಗ್ರೆಸ್ ನಾಯಕರನ್ನು ಮಾತಿನಲ್ಲೇ ಕಟ್ಟಿ ಹಾಕುವ ಯತ್ನ ಮಾಡಿದೆ.

ಸಚಿವ ಸ್ಥಾನದಿಂದ ಕೆಎನ್ ರಾಜಣ್ಣ ಅವರನ್ನು ವಜಾ ಮಾಡಿದ್ದನ್ನು ಖಂಡಿಸಿ ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣದಲ್ಲಿ ರಾಜಣ್ಣ ಬೆಂಬಲಿಗರು, ಅಭಿಮಾನಿಗಳು ಮಂಗಳವಾರ ಬೃಹತ್​​ ಪ್ರತಿಭಟನೆ ನಡೆಸಿದರು. ಮಧುಗಿರಿ ಬಂದ್​ಗೆ ಕರೆ ನೀಡಿ ಆಕ್ರೋಶ ಹೊರಹಾಕಿದರು. ಪ್ರತಿಭಟನೆಯಲ್ಲಿ ಸಾವಿರಾರು ಕಾರ್ಯಕರ್ತರು, ಅಭಿಮಾನಿಗಳು ಭಾಗಿಯಾದರು. ಈ ವೇಳೆ ರಾಜಣ್ಣ ಅಭಿಮಾನಿಯೊಬ್ಬ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸುವಂತೆ ಹೈಡ್ರಾಮಾ ಮಾಡಿದ. ಕೂಡಲೇ ಸ್ಥಳದಲ್ಲಿದ್ದವರು ಆತನ ಮೇಲೆ ನೀರು ಸುರಿದು ರಕ್ಷಿಸಿದರು.

ನಾಟಿ ಹೋರಿಗಳ ಕತ್ತು ಕೊಯ್ದು ಕಟುಕರು ! ಅಕ್ರಮ ಸಾಗಣೆಯ ಅನುಮಾನ!

 

ಸಾಮೂಹಿಕ ರಾಜೀನಾಮೆಗೆ ಮುಂದಾದ ರಾಜಣ್ಣ ಬೆಂಬಲಿಗರು
ಮಧುಗಿರಿಯ ಪುರಸಭೆ ವಾರ್ಡ್​ ಸಂಖ್ಯೆ 22 ರ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಸಾಮೂಹಿಕ ರಾಜೀನಾಮೆಗೆ ಮುಂದಾಗಿದ್ದಾರೆ. 10ನೇ ವಾರ್ಡ್ ಸದಸ್ಯೆ ಗಿರಿಜಾ ಮಂಜುನಾಥ್ ಉಪ ವಿಭಾಗಾಧಿಕಾರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಅತ್ತ ರಾಜಣ್ಣ ಅಭಿಮಾನಿಗಳು ಪ್ರತಿಭಟನೆ ಹಾದಿ ತುಳಿದಿದ್ದರೆ, ಇತ್ತ ಬಿಜೆಪಿಗೆ ರಾಜಣ್ಣರನ್ನು ವಜಾ ಮಾಡಿದ್ದೇ ಅಸ್ತ್ರವಾಗಿ ಸಿಕ್ಕಿದೆ.

ರಾಜಣ್ಣ ವಜಾ ಮಾಡಿದ್ದೇಕೆ? ಸದನದಲ್ಲಿ ಉತ್ತರಕ್ಕೆ ಬಿಜೆಪಿ ಪಟ್ಟು
ವಿಧಾನಸಭೆ ಕಲಾಪದ ಆರಂಭದಲ್ಲಿ, ಅಂದರೆ ಪ್ರಶ್ನೋತ್ತರ ವೇಳೆ ಶುರುವಾಗುವ ಮುನ್ನ ವಿಪಕ್ಷ ನಾಯಕ ಆರ್​ ಅಶೋಕ್ ಮಾತನಾಡಿ, ರಾಜಣ್ಣರನ್ನು ವಜಾ ಮಾಡಿದ್ದೇಕೆ? ಸರ್ಕಾರ ಇದಕ್ಕೆ ಉತ್ತರ ಕೊಡಬೇಕೆಂದು ಆಗ್ರಹಿಸಿದರು. ಈ ವೇಳೆ, ಸ್ಪೀಕರ್ ಖಾದರ್ ಇದು ಅವರ ಪಕ್ಷದ ಆಂತರಿಕ ವಿಚಾರ ಎಂದಿದ್ದಕ್ಕೆ ಬಿಜೆಪಿ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.
ಇಷ್ಟಕ್ಕೆ ಸುಮ್ಮನಾಗದ ಆರ್​.ಅಶೋಕ್, ಮತ ಕಳ್ಳತನದ ಕುರಿತು ರಾಜಣ್ಣ ಸತ್ಯ ಹೇಳಿದ್ದಾರೆ. ಸತ್ಯ ಹೇಳಿದ್ದಕ್ಕೆ ಅವರನ್ನು ಬಲಿ ಪಡೆದುಕೊಂಡಿದ್ದಾರೆಯೇ ಎಂದು ಪ್ರಶ್ನಿಸಿದರು.

ಇತ್ತ ವಿಧಾನ ಪರಿಷತ್​ನಲ್ಲೂ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪತ್ರವನ್ನು ಓದಿದರು. ಇದಕ್ಕೆ ಕಾಂಗ್ರೆಸ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಸಭಾಪತಿ ಹೊರಟ್ಟಿ, ಪ್ರಶ್ನೋತ್ತರ ಕಲಾಪದ ಬಳಿಕ ಬಳಿಕ ಪ್ರಸ್ತಾಪಿಸುವಂತೆ ಸೂಚನೆ ನೀಡಿದರು. ಆಗ ಬಿಜೆಪಿ ಸದಸ್ಯರು ಈಗಲೇ ಸರ್ಕಾರ ಸ್ಪಷ್ಟನೆ ನೀಡಬೇಕೆಂದು ಆಗ್ರಹಿಸಿದರು.

ವಿಧಾನಸಭೆಯಲ್ಲಿ ಡಿಸಿಎಂ ಡಿಕೆ ಕೆಮ್ಮಿದ್ದಕ್ಕೆ ಕಿಚಾಯಿಸಿದ ಬಿಜೆಪಿ
ಇದೆಲ್ಲದರ ನಡುವೆ ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪ ನಡೆಯುತ್ತಿರುವಾಗ ಉತ್ತರ ನೀಡಲು ಎದ್ದು ನಿಂತ ಡಿಸಿಎಂ ಡಿಕೆ ಶಿವಕುಮಾರ್ ಜೋರಾಗಿ ಕೆಮ್ಮತೊಡಗಿದರು. ಈ ವೇಳೆ, ಬಿಜೆಪಿ ಶಾಸಕ ಸುನಿಲ್ ಕುಮಾರ್, ‘ನೀವು ಕೆಮ್ಮಿದರೆ ಯಾರಿಗೆ ಅಪಾಯ ಕಾದಿದೆಯೋ ಗೊತ್ತಿಲ್ಲ’ ಎಂದು ಕಾಲೆಳೆದರು. ಸುನೀಲ್ ಕುಮಾರ್ ಮಾತಿಗೆ ಸದನ ನಗೆ ಗಡಲಲ್ಲಿ ತೇಲಿತು. ಏನೂ ಪ್ರತಿಕ್ರಿಯೆ ನೀಡದ ಡಿಕೆ ಶಿವಕುಮಾರ್ ಉತ್ತರ ಮುಂದುವರಿಸಿದರು.
ಸದನದ ಹೊರಗೂ ಮಾತನಾಡಿರುವ ಬಿಜೆಪಿ ನಾಯಕರು, ರಾಜಣ್ಣ ವಜಾ ಮಾಡುವಂಥ ಅಪರಾಧ ಏನು ಮಾಡಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!