ಯಶ್ ತಾಯಿ ಪುಷ್ಪಾ ಎಚ್ಚರಿಕೆ ? ಮುಖ್ಯಮಂತ್ರಿ ಎದುರು ಹೋಗ್ತೀನಿ ದೂರು ಸ್ವೀಕರಿಸದ್ದಿದ್ದರೆ ಉಗ್ರ ಹೋರಾಟ ಮಾಡುತ್ತೇವೆ !

ಪುಷ್ಪಾ ಅರುಣ್ ಕುಮಾರ್ ನಿರ್ಮಾಣದ ‘ಕೊತ್ತಲವಾಡಿ’ ಚಿತ್ರ ಆಗಸ್ಟ್ 1ರಂದು ಬಿಡುಗಡೆಯಾಯಿತು. ಸಿನಿಮಾವನ್ನು ನೋಡದೆ ನೆಗೆಟಿವ್ ವಿಮರ್ಶೆಗಳನ್ನು ಹಂಚಿಕೊಳ್ಳುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಕೋರಿದ್ದಾರೆ. ಅವರು ಸಾಮಾಜಿಕ ಜಾಲತಾಣಗಳಲ್ಲಿನ ಈ ರೀತಿಯ ನಕಾರಾತ್ಮಕ ಪ್ರಚಾರದಿಂದ ಕನ್ನಡ ಚಿತ್ರರಂಗಕ್ಕೆ ಆಗುತ್ತಿರುವ ಹಾನಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಪುಷ್ಪಾ ಅರುಣ್ ಕುಮಾರ್ ನಿರ್ಮಾಣದ ‘ಕೊತ್ತಲವಾಡಿ’ ಸಿನಿಮಾ ಆಗಸ್ಟ್ 1ರಂದು ರಿಲೀಸ್ ಆಯಿತು. ಈ ಸಿನಿಮಾಗೆ ಪೃಥ್ವಿ ಅಂಬರ್ ಹೀರೋ. ಗೋಪಾಲ್ ದೇಶಪಾಂಡೆ, ರಾಜೇಶ್ ನಟರಂಗ ಸೇರಿದಂತೆ ಅನೇಕರು ಈ ಚಿತ್ರದ ಭಾಗ ಆಗಿದ್ದಾರೆ. ಈ ಸಿನಿಮಾ ರಿಲೀಸ್​ಗೂ ಮೊದಲೇ ಪುಷ್ಪಾ ಅವರು ಸಾಕಷ್ಟು ಸಂದರ್ಶನ ನೀಡಿದ್ದರು. ಸಿನಿಮಾ ರಿಲೀಸ್ ಬಳಿಕವೂ ಇದನ್ನು ಮುಂದುವರಿಸಿದ್ದಾರೆ. ಅನೇಕ ಕಡೆಗಳಲ್ಲಿ ಪುಷ್ಪಾ ಸಂದರ್ಶನ ನೀಡುತ್ತಿದ್ದಾರೆ. ಈ ವೇಳೆ ಅವರು ಸರ್ಕಾರಕ್ಕೆ ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ.

ಎಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧೆ ಹಾಗೂ ವೈರತ್ವ ಇದ್ದೇ ಇದೆ. ಸಿನಿಮಾ ರಂಗ ಕೂಡ ಇದಕ್ಕೆ ಹೊರತಾಗಿಲ್ಲ. ಚಿತ್ರವನ್ನು ನೋಡದೇ ಕೆಲವರು ಸೋಶಿಯಲ್ ಮೀಡಿಯಾದಲ್ಲಿ ನೆಗೆಟಿವ್ ವಿಮರ್ಶೆ ಹಂಚುವ ಕೆಲಸ ಮಾಡುತ್ತಿದ್ದಾರಂತೆ. ಈ ರೀತಿಯ ಆರೋಪವನ್ನು ಪುಷ್ಪಾ ಮಾಡಿದ್ದಾರೆ. ಜೊತೆಗೆ ಇಂಥವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬುದು ಪುಷ್ಪಾ ಕೋರಿಕೆ.

‘ಟಾಕಿಂಗ್ ಪ್ಯಾರಟ್’ ಹೆಸರಿನ ಯೂಟ್ಯೂಬ್ ಚಾನೆಲ್​ಗೆ ಪುಷ್ಪಾ ಸಂದರ್ಶನ ನೀಡಿದ್ದಾರೆ. ‘ನಮ್ಮ ಸಿನಿಮಾದ ಪ್ರಚಾರ ನೋಡಿ ಕೆಲವರು ನೆಗೆಟಿವ್ ಟಾಕ್​ ಹಬ್ಬಿಸಿದ್ದರು. ಸಿನಿಮಾ ಮಾಡುವವರಿಗೆ ನಿಜಕ್ಕೂ ಕಷ್ಟ ಇದೆ. ಇಲ್ಲಿ ನೂರು ತೊಂದರೆ ಇದೆ. ಮುಖ್ಯಮಂತ್ರಿ ಎದುರು ಹೋಗ್ತೀನಿ. ಇದನ್ನು ತಡೆಯಿರಿ ಎಂದು ಕೇಳುತ್ತೇನೆ. ಇದು ಸರ್ಕಾರದ ಕೆಲಸ’ ಎಂದು ಪುಷ್ಪಾ ಹೇಳಿದ್ದಾರೆ.

‘ಸಿನಿಮಾ ನೋಡಿ ಬಂದರೆ ತೊಂದರೆ ಇಲ್ಲ. ಆದರೆ, ಸುಮಾರು ಜನರು ಸಿನಿಮಾ ನೋಡದೇ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಳ್ಳುತ್ತಿದ್ದಾರೆ. ಇದರಿಂದ ಅನೇಕರಿಗೆ ತೊಂದರೆ ಆಗುತ್ತಿದೆ. ನಾವು ದೂರು ತೆಗೆದುಕೊಂಡು ಬಂದಾಗ ಇದನ್ನು ಸ್ವೀಕರಿಸಬೇಕು. ಇಲ್ಲವಾದಲ್ಲಿ ರಾಕ್​ಲೈನ್​ ವೆಂಕಟೇಶ್​ಗೆ ಹೇಳಿ ಉಗ್ರ ಹೋರಾಟ ಮಾಡುತ್ತೇವೆ’ ಎಂದು ಪುಷ್ಪಾ ಅವರು ಹೇಳಿದ್ದಾರೆ.

‘ಕನ್ನಡ ಚಿತ್ರರಂಗದಲ್ಲಿ ಸಿನಿಮಾಗಳು ಏಕೆ ಓಡುತ್ತಿಲ್ಲ ಎಂಬುದಕ್ಕೆ ಈ ರೀತಿಯ ಕುತಂತ್ರಗಳೇ ಕಾರಣ. ನನ್ನ ದುಡ್ಡು ನಾನು ತಡೆದುಕೊಳ್ಳುತ್ತೇನೆ. ಆದರೆ, ಇನ್ನೊಬ್ಬರಿಗೆ ಕಷ್ಟ ಆಗಬಹುದು. ನಾವು ಒಂದು ನಿರ್ಧಾರಕ್ಕೆ ಬರಲೇಬೇಕು. ಮುಂದಿನ ದಿನಗಳಲ್ಲಿ ಅದನ್ನು ಮಾಡಿಯೇ ಮಾಡುತ್ತೇನೆ’ ಎಂದು ಅವರು ಹೇಳಿದ್ದಾರೆ.

Related Posts

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

Yash: ಮುಂಬೈನಲ್ಲಿ ಪತ್ನಿ ರಾಧಿಕಾ ಪಂಡಿತ್ ಜೊತೆ ಕಾಣಿಸಿಕೊಂಡ ಯಶ್ ಅವರ ಹೊಸ ಅವತಾರ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ. ಯಶ್ ಭಾರತೀಯ ಸಿನೆಮಾ ಲೋಕವೇ ಹಿಂತಿರುಗಿ ನೋಡುವಂತೆ ಮಾಡಿದ ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್ ಸಿನಿಮಾದ ಬಳಿಕ…

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ ಮೈಸೂರು ಜಿಲ್ಲೆಯ ಕಣಗಾಲ್‌ ಗ್ರಾಮದಲ್ಲಿರುವ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ಮನೆಯನ್ನು ಮ್ಯೂಸಿಯಂ ಆಗಿ ಪರಿವರ್ತಿಸುತ್ತಿರುವುದು ಇದೇ ಮೊದಲು. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!