ಸೆಪ್ಟೆಂಬರ್​​ನಲ್ಲಿ ಪ್ರಧಾನಿ ಮೋದಿ ಅಮೆರಿಕ ಭೇಟಿ : ಸುಂಕ ಸಮರಕ್ಕೆ ಹಾಕ್ತಾರಾ ಬ್ರೇಕ್ ?

ವಾಷಿಂಗ್ಟನ್, ಆಗಸ್ಟ್​ 13 : ಸುಂಕದ ಬಗ್ಗೆ ಭಾರತ ಮತ್ತು ಅಮೆರಿಕ ನಡುವೆ ವಿವಾದವಿದೆ. ವ್ಯಾಪಾರ ಒಪ್ಪಂದದ ಬಗ್ಗೆಯೂ ಮಾತುಕತೆ ನಡೆಯುತ್ತಿದೆ. ಈ ಮಧ್ಯೆ, ಪ್ರಧಾನಿ ಮೋದಿ ಅವರ ಅಮೆರಿಕ ಭೇಟಿ ಬಗ್ಗೆ ಪ್ರಮುಖ ಮಾಹಿತಿ ಹೊರಬಿದ್ದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ತಿಂಗಳು ಅಂದರೆ ಸೆಪ್ಟೆಂಬರ್‌ನಲ್ಲಿ ಅಮೆರಿಕಕ್ಕೆ ಭೇಟಿ ನೀಡಬಹುದು ಎನ್ನುವ ಮಾಹಿತಿ ಲಭ್ಯವಾಗಿದೆ . ಡೊನಾಲ್ಡ್ ಟ್ರಂಪ್ ಪ್ರಧಾನಿ ಮೋದಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆಯೂ ನಡೆಯಲಿದೆ ಎಂದು ಹೇಳಲಾಗುತ್ತಿದೆ.

ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಪ್ರಕಾರ, ಪ್ರಧಾನಿ ಮೋದಿಯವರ ಮುಂಬರುವ ಅಮೆರಿಕ ಭೇಟಿಗೆ ಸಿದ್ಧತೆಗಳು ನಡೆಯುತ್ತಿವೆ. ಸೆಪ್ಟೆಂಬರ್ ಕೊನೆಯ ವಾರದಲ್ಲಿ ನಡೆಯಲಿರುವ ವಿಶ್ವಸಂಸ್ಥೆ ಸಾಮಾನ್ಯ ಸಭೆಗಾಗಿ ಪ್ರಧಾನಿ ಮೋದಿ ಅಮೆರಿಕದಲ್ಲಿ ಇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವಿಶ್ವಸಂಸ್ಥೆ ಸಾಮಾನ್ಯ ಸಭೆಯ ಹೊರತಾಗಿ, ಪ್ರಧಾನಿ ಮೋದಿ ಮತ್ತು ಡೊನಾಲ್ಡ್ ಟ್ರಂಪ್ ನಡುವೆ ಸಭೆ ನಡೆಯಲಿದೆ. ಈ ಸಮಯದಲ್ಲಿ, ಎರಡೂ ದೇಶಗಳ ನಡುವಿನ ವ್ಯಾಪಾರ ಸಮಸ್ಯೆಗಳನ್ನು ಪರಿಹರಿಸಲು ಮತ್ತು ಸುಂಕದ ಕುರಿತು ಸಾಮಾನ್ಯ ಒಪ್ಪಂದಕ್ಕೆ ಬರಲು ಪ್ರಯತ್ನ ನಡೆಯಲಿದೆ. ಪ್ರಧಾನಿ ಮೋದಿಯವರ ಭೇಟಿಯ ಸಮಯದಲ್ಲಿ ವ್ಯಾಪಾರ ಒಪ್ಪಂದ ಮಾಡಿಕೊಳ್ಳಬಹುದು ಎಂದು ಅಂದಾಜಿಸಲಾಗಿದೆ.

ಭಾರತದ ಮೇಲೆ ಅಮೆರಿಕ ಶೇ. 50 ರಷ್ಟು ಸುಂಕ ವಿಧಿಸಿರುವ ಸಮಯದಲ್ಲಿ ಪ್ರಧಾನಿ ಮೋದಿ ಅವರ ಅಮೆರಿಕ ಭೇಟಿಯ ಮಹತ್ವದ್ದಾಗಿದೆ. ಪ್ರಸ್ತುತ ಶೇ. 25 ರಷ್ಟು ಸುಂಕ ಜಾರಿಯಲ್ಲಿದ್ದು, ಕೆಲವೇ ದಿನಗಳಲ್ಲಿ ಹೆಚ್ಚುವರಿಯಾಗಿ ಶೇ. 25 ರಷ್ಟು ಸುಂಕ ಜಾರಿಗೆ ಬರಲಿದೆ. ಭಾರತ ಅಮೆರಿಕದ ಸುಂಕವನ್ನು ವಿರೋಧಿಸಿದೆ. ಪ್ರಧಾನಿ ಮೋದಿ ಅವರು ವೈಯಕ್ತಿಕವಾಗಿ ಯಾವುದೇ ಬೆಲೆ ತೆರಲು ಸಿದ್ಧನಿದ್ದೇನೆ, ಆದರೆ ರೈತರ ಹಿತಾಸಕ್ತಿಗಳ ಬಗ್ಗೆ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು.

ಈ ವರ್ಷದ ಫೆಬ್ರವರಿ ಆರಂಭದಲ್ಲಿ ಪ್ರಧಾನಿ ಮೋದಿ ಅಮೆರಿಕಕ್ಕೆ ಭೇಟಿ ನೀಡಿದ್ದರು. ಪ್ರಧಾನಿ ಮೋದಿ ಅವರ ಭಾಷಣಕ್ಕಾಗಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಅವಕಾಶ ನೀಡುವಂತೆ ಭಾರತವು ವಿಶ್ವಸಂಸ್ಥೆಯ ಪ್ರಧಾನ ಕಚೇರಿಯನ್ನು ಸಂಪರ್ಕಿಸಿದೆ ಎಂದು ಮೂಲಗಳು ತಿಳಿಸಿವೆ.

ಸೆಪ್ಟೆಂಬರ್ 26 ರ ಬೆಳಗ್ಗೆ ಭಾಷಣ ಮಾಡಲು ನಿರ್ಧರಿಸಲಾಗಿದೆ. ಡೊನಾಲ್ಡ್ ಟ್ರಂಪ್ ಸೆಪ್ಟೆಂಬರ್ 23 ರಂದು ಮಾತನಾಡಲಿದ್ದಾರೆ. ಪ್ರಸ್ತುತ, ಪ್ರಧಾನಿ ಮೋದಿ ಅವರ ಕಾರ್ಯಕ್ರಮದ ಕುರಿತು ಅಧಿಕೃತ ಹೇಳಿಕೆಗಾಗಿ ಕಾಯಲಾಗುತ್ತಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ನೇಪಾಳ ಪ್ರವಾಹ: ಕನ್ನಡಿಗರು ಸುರಕ್ಷಿತ, ಧೈರ್ಯ ತುಂಬಿದ ಸಿಎಂ

ನೇಪಾಳ ಹಾಗೂ ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ಮೂಲಸೌಕರ್ಯಗಳಿಗೆ ಅಪಾರ ಹಾನಿಯಾಗಿದೆ. ಈ ನೈಸರ್ಗಿಕ ವಿಕೋಪದ ನಡುವೆ ಸಿಲುಕಿದ್ದ ಕರ್ನಾಟಕದ 3 ಮಂದಿ ಸೇರಿದಂತೆ ಒಟ್ಟು 23 ಭಾರತೀಯರು…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!