ಪ್ರೀ ಬುಕ್ಕಿಂಗ್​ ನಲ್ಲಿ ದಾಖಲೆ ಮಾಡಿದ ರಜನಿ​ಯ ”ಕೂಲಿ” ! ನಾಳೆ ತಲೈವಾ ಅಭಿಮಾನಿಗಳಿಗೆ ಹಬ್ಬದ ಸಂಭ್ರಮ.

ನಾಳೆ ತಲೈವಾ ಅಭಿಮಾನಿಗಳಿಗೆ ಹಬ್ಬದ ಸಂಭ್ರಮ. ಸೂಪರ್ ಸ್ಟಾರ್ ರಜನಿಕಾಂತ್ ಅವರ ಸಿನಿಮಾಗಳು ಎಂದರೆ ಎಲ್ಲರಿಗೂ ಸಿಕ್ಕಾಪಟ್ಟೆ ಇಷ್ಟ. ರಜನಿಕಾಂತ್ ಹೊಸ ಸಿನಿಮಾ ಅನೌನ್ಸ್ ಆದ್ರೆ ಸಾಕು ಅಭಿಮಾನಿಗಳ ಖುಷಿಗೆ ಪಾರವೇ ಇಲ್ಲದಂತೆ ಆಗುತ್ತೆ. ಅಷ್ಟರ ಮಟ್ಟಿಗೆ ಥಿಯೇಟರ್​ಗಳಲ್ಲಿ ಅವರ ಅಭಿಮಾನಿಗಳಂತೂ ರಜನಿಯವರ ಸ್ಟೈಲ್, ಡೈಲಾಗ್​ಗೆ ಕುಣಿದು ಕುಪ್ಪಳಿಸುತ್ತಿರುತ್ತಾರೆ.

ಇದಕ್ಕೆ ಸಾಕ್ಷಿ ಎಂಬಂತೆ ನಾಳೆ ರಜನಿಕಾಂತ್ ನಟನೆಯಲ್ಲಿ ಬಹುನಿರೀಕ್ಷಿತ ಕೂಲಿ ಸಿನಿಮಾ ರಿಲೀಸ್​ ಆಗುತ್ತಿದೆ. ಸ್ಟಾರ್​ ಹೀರೋನನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ತುದಿಗಾಲಿನ ಮೇಲೆ ನಿಂತಿದ್ದಾರೆ. ಹೌದು, ಲೋಕೇಶ್ ಕನಗರಾಜ್ ನಿರ್ದೇಶನದಲ್ಲಿ ಮೂಡಿ ಬರುತ್ತಿರೋ ಸಿನಿಮಾ ಆಗಸ್ಟ್​ 14ರಂದು ವಿಶ್ವದಾದ್ಯಂತ ರಿಲೀಸ್​ ಆಗುತ್ತಿದೆ.

ರಜನಿಕಾಂತ್​ ನಾಯಕನಾಗಿ ದಕ್ಷಿಣ ಹಾಗೂ ಉತ್ತರ ಭಾರತದ ಕಲಾವಿದರು ಅಭಿನಯಿಸಿರೋ ಕೂಲಿ ಸಿನಿಮಾ ತೆರೆಗೆ ಅಪ್ಪಳಿಸೋದಕ್ಕೆ ಸಜ್ಜಾಗಿದೆ. ಸದ್ಯ ಎಲ್ಲೆಡೆ ಕೂಲಿ ಮೇನಿಯಾ ಕಂಡು ಬಂದಿದೆ. ವಿಶೇಷ ಏನೆಂದರೆ ಕೂಲಿ ಸಿನಿಮಾದಲ್ಲಿ ಸ್ಯಾಂಡಲ್​ವುಡ್​ ಸ್ಟಾರ್ ನಟ ಉಪೇಂದ್ರ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್​ ನಟಿಸಿದ್ದಾರೆ.

ಈಗಾಗಲೇ ಚೆನ್ನೈನಲ್ಲಿ ಫಸ್ಟ್​ ಡೇ ಫಸ್ಟ್​ ಶೋಗಳು ಕಂಪ್ಲೀಟ್ ಸೋಲ್ಡ್​ ಔಟ್​ ಆಗಿವೆ. ಮಲ್ಟಿಪ್ಲೆಕ್ಸ್​​ವೊಂದರಲ್ಲೇ ಮೊದಲ ದಿನ ಒಟ್ಟು 56 ಶೋಗಳನ್ನು ಇಡಲಾಗಿದ್ದು, ಅಂದರೆ ಅಷ್ಟು ಶೋಗಳ ಟಿಕೆಟ್​ ಮಾರಾಟವಾಗಿದೆ. ಇನ್ನೂ, ತಮಿಳುನಾಡು ಸರ್ಕಾರ ಥೇಟರ್​ಗಳಲ್ಲಿ ಗರಿಷ್ಠ 150ರೂ, ಮಲ್ಟಿಪ್ಲೆಕ್ಸ್​ಗಳಲ್ಲಿ 160ರೂ ಹಾಗೂ ಐಮ್ಯಾಕ್ಸ್​ಗಳಲ್ಲಿ 480 ರೂ ಟಿಕೆಟ್​​ ದರವನ್ನು ನಿಗದಿ ಪಡಿಸಲಾಗಿದೆ.

ಅಮೆರಿಕಾದಲ್ಲಿ ಕೂಲಿ ಪ್ರೀ ಬುಕ್ಕಿಂಗ್​ ದಾಖಲೆ
ತಮಿಳು ಸಿನಿಮಾ ಇತಿಹಾಸದಲ್ಲೇ ಮೊದಲ ಬಾರಿಗೆ ಅಮೆರಿಕಾದಲ್ಲಿ ಕೂಲಿ ಸಿನಿಮಾ ಪ್ರಿ ಬುಕ್ಕಿಂಗ್​ನಿಂದಲೇ 2 ಮಿಲಿಯನ್​ ಡಾಲರ್​ ಅಂದರೆ 17.55 ಕೋಟಿಗೂ ಅಧಿಕ ಗಳಿಕೆ ಮಾಡಿದೆ. ಇದನ್ನೂ ನಿರ್ಮಾಣ ಸಂಸ್ಥೆ ಸನ್​ ಪಿಕ್ಚರ್ಸ್​ ಅಧಿಕೃತವಾಗಿ ಘೋಷಣೆ ಮಾಡಿದೆ.

 

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!