ಮೈಸೂರು ಅಭಿವೃದ್ಧಿ ಪ್ರಾಧಿಕಾರದ ನಾಲ್ಕು ಕಾರುಗಳನ್ನು ಜಪ್ತಿ ಮಾಡಲು ಕೋರ್ಟ್ ಆದೇಶ.

ಮೈಸೂರು : ಭೂ ಸ್ವಾಧೀನದ ಬಾಕಿ ಪರಿಹಾರ ಹಣ ಪಾವತಿಸದ ಹಿನ್ನೆಲೆಯಲ್ಲಿ ಮೈಸೂರು ಅಭಿವೃದ್ಧಿ ಪ್ರಾಧಿಕಾರಕೆ ಸೇರಿದ ನಾಲ್ಕು ಕಾರುಗಳ ಜಪ್ತಿಗೆ ಮೈಸೂರಿನ ನಾಲ್ಕನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಆದೇಶಿಸಿದೆ.

ಮೈಸೂರಿನ ಹೃದಯ ಭಾಗದಲ್ಲಿರುವ ಡಿ.ದೇವರಾಜ ಅರಸು ರಸ್ತೆಯ ಅಗಲೀಕರಣಕ್ಕಾಗಿ 1979ರಲ್ಲಿ ಗುಣಾಂಬ ಮ್ಯಾಟೆರ್ನಿಟಿ ಆಂಡ್ ಚೈಲ್ಡ್ ವೇಲ್‌ಫೇ‌ರ್ ಟ್ರಸ್ಟ್‌ಗೆ ಸೇರಿದ ಜಾಗವನ್ನು ಅಂದಿನ ಸಿಐಟಿಐ (ಇಂದಿನ ಎಂಡಿಎ) ಭೂಸ್ವಾಧೀನಪಡಿಸಿ ಕೊಂಡಿತ್ತು. ಈ ಸಂಬಂಧ ನಿಗದಿಪಡಿಸಿದ ಪರಿಹಾರ ನ್ಯಾಯಸಮ್ಮತವಲ್ಲವೆಂದು ಟ್ರಸ್ಟ್ ನ್ಯಾಯಾಲಯದ ಮೊರೆ ಹೋಗಿತ್ತು.

ಇದೀಗ ಕೋರ್ಟ್ ಆದೇಶದಂತೆ ಬಾಕಿ ಪರಿಹಾರ ಪಾವತಿಸದ ಕಾರಣ ಎಂಡಿಎಗೆ ಸೇರಿದ ನಾಲ್ಕು ಕಾರುಗಳನ್ನು ಜಪ್ತಿ ಮಾಡಿಕೊಳ್ಳುವಂತೆ 4ನೇ ಹೆಚ್ಚುವರಿ ಸಿವಿಲ್ ಕೋರ್ಟ್ ಆದೇಶ ನೀಡಿದೆ. ಅದರಂತೆ ಮಂಗಳವಾರ ಟ್ರಸ್ಟ್ ಪರ ವಕೀಲ ಬಿ.ಎಸ್.ಚಂದ್ರಶೇಖರ್, ಕೋರ್ಟ್ ಅಮೀನ್ ಬರಿಗೈಯಲ್ಲಿ ಹಿಂತಿರುಗಿದರು.

ಈ ಸಂಬಂಧ ‘ಮೈಸೂರು ಮಿತ್ರ’ನೊಂದಿಗೆ ಮಾತನಾಡಿದ ವಕೀಲ ಬಿ.ಎಸ್.ಚಂದ್ರಶೇಖರ್, ಬಾಕಿ ಪರಿಹಾರ ಹಣ ಮತ್ತು ಅದರ ಮೇಲಿನ ಬಡ್ಡಿ ಹಣವನ್ನು ಪಾವತಿ ಮಾಡದ ಹಿನ್ನೆಲೆಯಲ್ಲಿ ಎಂಡಿಎಗೆ ಸೇರಿದ ನಾಲ್ಕು ಕಾರುಗಳ ವಶಕ್ಕೆ ಕೋರ್ಟ್ ಜಪ್ತಿ ವಾರಂಟ್ ಹೊರಡಿಸಿದೆ ಎಂದು ತಿಳಿಸಿದರು.

ನಿಗದಿಪಡಿಸಿದ ಪರಿಹಾರ ಹಣ ಸೂಕ್ತವಲ್ಲ ವೆಂದು ಟ್ರಸ್ಟ್‌ನಿಂದ ತಕಾರರು ಅರ್ಜಿ ಸಲ್ಲಿಸಲಾಗಿತ್ತು. ಈ ಸಂಬಂಧ ಕಡತವನ್ನು ನ್ಯಾಯಾಲಯಕ್ಕೆ ಎಂಡಿಎ ಸಲ್ಲಿಸಿತ್ತು. ಭೂ ಸ್ವಾಧೀನ ಕಾಯ್ದೆ ಕಲಂ 18ರ ಅಡಿಯಲ್ಲಿ 4ನೇ ಹೆಚ್ಚುವರಿ ಸಿವಿಲ್ ಕೋರ್ಟ್, ಹೆಚ್ಚಿನ ಪರಿಹಾರ ನೀಡುವಂತೆ ತೀರ್ಪು ನೀಡಿತ್ತು. ಆ ಬಳಿಕ ಕೋರ್ಟ್ ಸೂಚಿಸಿದ ಒಟ್ಟು 8 ಕೋಟಿ ಪರಿಹಾರದ ಹಣದಲ್ಲಿ ಹಂತ ಹಂತವಾಗಿ 5 ಕೋಟಿ ರೂ. ಅನ್ನು ಎಂಡಿಎಯಿಂದ ಸದರಿ ಟ್ರಸ್ಟ್‌ಗೆ ಪಾವತಿ ಮಾಡಲಾಗಿದೆ. ಆದರೆ ಬಾಕಿ ಇರುವ 3 ಕೋಟಿ ರೂ.ಗೂ ಅಧಿಕ ಪರಿಹಾರದ ವನ್ನು ಪಾವತಿಸದೇ ವಿಳಂಬ ಮಾಡುತ್ತಿರುವ ಪ ಯಲ್ಲಿ ಡಿಕ್ಕಿದಾರರಾದ ಟ್ರಸ್ಟ್ನವರು ಕೋರ್ಟ್‌ನಲ್ಲಿ ಅರ್ಜಿ ಪ್ರಕರಣ ದಾಖಲಿಸಿದ್ದರು ಎಂದು ಹೇಳಿದರು.

ಈ ಹಿನ್ನೆಲೆಯಲ್ಲಿ ಕೋರ್ಟ್ ಎಂ ಡಿ ಎ ಆಯುಕ್ತರ ಕಾರು ಸೇರಿದಂತೆ ನಾಲ್ಕು ಕಾದ ಜಪ್ತಿಗೆ ಆದೇಶಿಸಿದೆ. ಹೀಗಾಗಿ ಕೋರ್ಟ್ ಅಮೀನ್ ಸುರೇಶ್ ಜಪ್ತಿ ವಾರಂಟ್ಅನ್ನು ಎಂ ಡಿ ಎ. ಅಧಿಕಾರಿಗಳ ಮುಂದೆ ಹಾಜರುಪಡಿಸಿದರೂ ಪ್ರಯೋಜನವಾಗಿಲಿಲ್ಲ. ಜಪ್ತಿಗೆ ಸಂಬಂಧಿಸಿದ ಕಾರುಗಳು ಎಂ ಡಿ ಎ ಕಜೇರಿ ಆವರಣದಲ್ಲಿ ಇರಲಿಲ್ಲ ಎಂದರು.

Related Posts

ಮೆಲೋಡಿ ಡಿಪ್ಲೊಮಸಿ: “ನಾವು ಜಗದ್ವಿಖ್ಯಾತ ಜೋಡಿ” ಎಂದ ಇಟಲಿ ಪ್ರಧಾನಿ ಮೆಲೋನಿ

ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ನಡುವಿನ ಆತ್ಮೀಯ ಸ್ನೇಹ ಇಡೀ ವಿಶ್ವದ ಗಮನ ಸೆಳೆದಿದೆ. ಇವರಿಬ್ಬರ ರಾಜತಾಂತ್ರಿಕ ಒಡನಾಟವು ಭಾರತ ಮತ್ತು ಇಟಲಿ ನಡುವಿನ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುತ್ತಿದೆ. ಪ್ರಸ್ತುತ ನಡೆಯುತ್ತಿರುವ ಜಿ7…

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

You Missed

ಮೆಲೋಡಿ ಡಿಪ್ಲೊಮಸಿ: “ನಾವು ಜಗದ್ವಿಖ್ಯಾತ ಜೋಡಿ” ಎಂದ ಇಟಲಿ ಪ್ರಧಾನಿ ಮೆಲೋನಿ

ಮೆಲೋಡಿ ಡಿಪ್ಲೊಮಸಿ: “ನಾವು ಜಗದ್ವಿಖ್ಯಾತ ಜೋಡಿ” ಎಂದ ಇಟಲಿ ಪ್ರಧಾನಿ ಮೆಲೋನಿ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!