ಮೈಸೂರು ಅಭಿವೃದ್ಧಿ ಪ್ರಾಧಿಕಾರದ ನಾಲ್ಕು ಕಾರುಗಳನ್ನು ಜಪ್ತಿ ಮಾಡಲು ಕೋರ್ಟ್ ಆದೇಶ.

ಮೈಸೂರು : ಭೂ ಸ್ವಾಧೀನದ ಬಾಕಿ ಪರಿಹಾರ ಹಣ ಪಾವತಿಸದ ಹಿನ್ನೆಲೆಯಲ್ಲಿ ಮೈಸೂರು ಅಭಿವೃದ್ಧಿ ಪ್ರಾಧಿಕಾರಕೆ ಸೇರಿದ ನಾಲ್ಕು ಕಾರುಗಳ ಜಪ್ತಿಗೆ ಮೈಸೂರಿನ ನಾಲ್ಕನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಆದೇಶಿಸಿದೆ.

ಮೈಸೂರಿನ ಹೃದಯ ಭಾಗದಲ್ಲಿರುವ ಡಿ.ದೇವರಾಜ ಅರಸು ರಸ್ತೆಯ ಅಗಲೀಕರಣಕ್ಕಾಗಿ 1979ರಲ್ಲಿ ಗುಣಾಂಬ ಮ್ಯಾಟೆರ್ನಿಟಿ ಆಂಡ್ ಚೈಲ್ಡ್ ವೇಲ್‌ಫೇ‌ರ್ ಟ್ರಸ್ಟ್‌ಗೆ ಸೇರಿದ ಜಾಗವನ್ನು ಅಂದಿನ ಸಿಐಟಿಐ (ಇಂದಿನ ಎಂಡಿಎ) ಭೂಸ್ವಾಧೀನಪಡಿಸಿ ಕೊಂಡಿತ್ತು. ಈ ಸಂಬಂಧ ನಿಗದಿಪಡಿಸಿದ ಪರಿಹಾರ ನ್ಯಾಯಸಮ್ಮತವಲ್ಲವೆಂದು ಟ್ರಸ್ಟ್ ನ್ಯಾಯಾಲಯದ ಮೊರೆ ಹೋಗಿತ್ತು.

ಇದೀಗ ಕೋರ್ಟ್ ಆದೇಶದಂತೆ ಬಾಕಿ ಪರಿಹಾರ ಪಾವತಿಸದ ಕಾರಣ ಎಂಡಿಎಗೆ ಸೇರಿದ ನಾಲ್ಕು ಕಾರುಗಳನ್ನು ಜಪ್ತಿ ಮಾಡಿಕೊಳ್ಳುವಂತೆ 4ನೇ ಹೆಚ್ಚುವರಿ ಸಿವಿಲ್ ಕೋರ್ಟ್ ಆದೇಶ ನೀಡಿದೆ. ಅದರಂತೆ ಮಂಗಳವಾರ ಟ್ರಸ್ಟ್ ಪರ ವಕೀಲ ಬಿ.ಎಸ್.ಚಂದ್ರಶೇಖರ್, ಕೋರ್ಟ್ ಅಮೀನ್ ಬರಿಗೈಯಲ್ಲಿ ಹಿಂತಿರುಗಿದರು.

ಈ ಸಂಬಂಧ ‘ಮೈಸೂರು ಮಿತ್ರ’ನೊಂದಿಗೆ ಮಾತನಾಡಿದ ವಕೀಲ ಬಿ.ಎಸ್.ಚಂದ್ರಶೇಖರ್, ಬಾಕಿ ಪರಿಹಾರ ಹಣ ಮತ್ತು ಅದರ ಮೇಲಿನ ಬಡ್ಡಿ ಹಣವನ್ನು ಪಾವತಿ ಮಾಡದ ಹಿನ್ನೆಲೆಯಲ್ಲಿ ಎಂಡಿಎಗೆ ಸೇರಿದ ನಾಲ್ಕು ಕಾರುಗಳ ವಶಕ್ಕೆ ಕೋರ್ಟ್ ಜಪ್ತಿ ವಾರಂಟ್ ಹೊರಡಿಸಿದೆ ಎಂದು ತಿಳಿಸಿದರು.

ನಿಗದಿಪಡಿಸಿದ ಪರಿಹಾರ ಹಣ ಸೂಕ್ತವಲ್ಲ ವೆಂದು ಟ್ರಸ್ಟ್‌ನಿಂದ ತಕಾರರು ಅರ್ಜಿ ಸಲ್ಲಿಸಲಾಗಿತ್ತು. ಈ ಸಂಬಂಧ ಕಡತವನ್ನು ನ್ಯಾಯಾಲಯಕ್ಕೆ ಎಂಡಿಎ ಸಲ್ಲಿಸಿತ್ತು. ಭೂ ಸ್ವಾಧೀನ ಕಾಯ್ದೆ ಕಲಂ 18ರ ಅಡಿಯಲ್ಲಿ 4ನೇ ಹೆಚ್ಚುವರಿ ಸಿವಿಲ್ ಕೋರ್ಟ್, ಹೆಚ್ಚಿನ ಪರಿಹಾರ ನೀಡುವಂತೆ ತೀರ್ಪು ನೀಡಿತ್ತು. ಆ ಬಳಿಕ ಕೋರ್ಟ್ ಸೂಚಿಸಿದ ಒಟ್ಟು 8 ಕೋಟಿ ಪರಿಹಾರದ ಹಣದಲ್ಲಿ ಹಂತ ಹಂತವಾಗಿ 5 ಕೋಟಿ ರೂ. ಅನ್ನು ಎಂಡಿಎಯಿಂದ ಸದರಿ ಟ್ರಸ್ಟ್‌ಗೆ ಪಾವತಿ ಮಾಡಲಾಗಿದೆ. ಆದರೆ ಬಾಕಿ ಇರುವ 3 ಕೋಟಿ ರೂ.ಗೂ ಅಧಿಕ ಪರಿಹಾರದ ವನ್ನು ಪಾವತಿಸದೇ ವಿಳಂಬ ಮಾಡುತ್ತಿರುವ ಪ ಯಲ್ಲಿ ಡಿಕ್ಕಿದಾರರಾದ ಟ್ರಸ್ಟ್ನವರು ಕೋರ್ಟ್‌ನಲ್ಲಿ ಅರ್ಜಿ ಪ್ರಕರಣ ದಾಖಲಿಸಿದ್ದರು ಎಂದು ಹೇಳಿದರು.

ಈ ಹಿನ್ನೆಲೆಯಲ್ಲಿ ಕೋರ್ಟ್ ಎಂ ಡಿ ಎ ಆಯುಕ್ತರ ಕಾರು ಸೇರಿದಂತೆ ನಾಲ್ಕು ಕಾದ ಜಪ್ತಿಗೆ ಆದೇಶಿಸಿದೆ. ಹೀಗಾಗಿ ಕೋರ್ಟ್ ಅಮೀನ್ ಸುರೇಶ್ ಜಪ್ತಿ ವಾರಂಟ್ಅನ್ನು ಎಂ ಡಿ ಎ. ಅಧಿಕಾರಿಗಳ ಮುಂದೆ ಹಾಜರುಪಡಿಸಿದರೂ ಪ್ರಯೋಜನವಾಗಿಲಿಲ್ಲ. ಜಪ್ತಿಗೆ ಸಂಬಂಧಿಸಿದ ಕಾರುಗಳು ಎಂ ಡಿ ಎ ಕಜೇರಿ ಆವರಣದಲ್ಲಿ ಇರಲಿಲ್ಲ ಎಂದರು.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!