ಮೈಸೂರಲ್ಲಿ ಬಾಲ್ಯವಿವಾಹ ತಡೆಗೆ ನಾಳೆಯಿಂದ ಫೀಲ್ಡ್‌ಗಿಳಿಯಲಿದೆ ಅಕ್ಕ ಪಡೆ!

ಮೈಸೂರು ಸೇರಿ ಮೂರು ಜಿಲ್ಲೆಯಲ್ಲಿ ಬಾಲ್ಯ ವಿವಾಹ ತಡೆಗೆ ಆ.15ರಿಂದ ‘ಅಕ್ಕ ಪಡೆ’ ಫೀಲ್ಡ್ ಗಿಳಿಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಾಕಿವೆ ಲಕ್ಷ್ಮಿ ಆರ್.ಹೆಬ್ಬಾಳ್ವರ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.
ಪ್ರಶೋತ್ತರ ವೇಳೆಯಲ್ಲಿ ಸಿ.ಬಿ . ಸುರೇಶ್ ಬಾಬು ಪ್ರಸ್ತಾವಕ್ಕೆ ಉತ್ತರಿಸಿದ ಅವರು, ಆಗಸ್ಟ್ 15ರಂದು ಮೈಸೂರು. ಬೆಳಗಾವಿ, ಮಂಗಳೂರಿನಲ್ಲಿ ‘ಅಕ್ಕ ಪಡೆ’ ಕಾರ್ಯ ಆರಂಭವಾಗಲಿದೆ. ಪಡೆಯಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿ, ಎನ್ ಸಿಸಿ ಹಿರಿಯ ಕೇಡರ್ ಇರಲಿದ್ದು, ಇಲಾಖೆ ವಾಹನ ನೀಡಲಾಗುವುದು, ತಂಡ ಮೊದಲ ಹಂತದಲ್ಲಿ ಕಾಲೇಜು ಬಿಟ್ಟವರ ಮಾಹಿತಿ ಪಡೆಯಲಿದೆ ಎಂದರು.

ಸಾಮಾಜಿಕ ಪಿಡುಗಾಗಿರುವ ಬಾಲ್ಯ ವಿವಾಹವನ್ನು ಪರಿಣಾಮಕಾರಿಯಾಗಿ ತಡೆಯಲು ಹತ್ತು ಇಲಾಖೆಗಳನ್ನು ಒಳಗೊಂಡ ಸಮಿತಿ ರಚಿಸಲಾಗಿದೆ. ಇದನ್ನು ಬೇರು ಕಿತ್ತೊಗೆಯಬೇಕಿದೆ. ಬಾಲ್ಯ ವಿವಾಹ ತಡೆ ತಿದ್ದುಪಡಿ ವಿಧೇಯಕ ತರುತ್ತಿದ್ದೇವೆ ಎಂದರು. ರಾಜ್ಯದಲ್ಲಿ ಬಾಲಗರ್ಭಿಣಿ ಪ್ರಕರಣಗಳು 2022-23ರಲ್ಲಿ 405, 2023-24ರಲ್ಲಿ 709, 2024-25ರಲ್ಲಿ 685 ಸರ್ಕಾರದ ಗಮನಕ್ಕೆ ಬಂದಿದೆ. ಜಿಲ್ಲೆಗೊಂದು ಮಕ್ಕಳ ರಕ್ಷಣಾ ಸಮಿತಿ ಇರಲಿದೆ, ಸಾಮಾಜಿಕ ಮಾಧ್ಯಮಕ್ಕೂ ಕಡಿವಾಣ ಹಾಕಬೇಕಿದೆ, ಕೆಲವು ಸಮುದಾಯಗಳಲ್ಲಿ ಬಾಲ್ಯ ವಿವಾಹ ಆಚರಣೆಯಲ್ಲಿದ್ದು, ಕಡಿವಾಣ ಹಾಕಲಾಗುತ್ತಿದೆ.

66% ಮಕ್ಕಳ ಸಹಾಯವಾಣಿ 1098, 24 ಗಂಟೆ ಕಾರ್ಯನಿರ್ವಹಿಸಲ್ಲಿದೆ . ಸಂಕಷ್ಟದಲ್ಲಿರುವ ಮಕ್ಕಳು ಹಾಗೂ ಸಂತ್ರಸ್ತರು ಯಾವುದೇ ಸಮಯದಲ್ಲಿ ಕರೆ ಮಾಡಿದರೂ ಮಕ್ಕಳ ರಕ್ಷಣೆಗೆ ಇಲಾಖೆ ಮುಂದಾಗಲಿದೆ . ರಾಜ್ಯದಲ್ಲಿ 26 ಸಾವಿರ ಬಾಲ ಗರ್ಭಿಣಿಯರು ಇರುವ ಮಾಹಿತಿ ಇದೆ . 4 ತಿಂಗಳಲ್ಲಿ 900ಕ್ಕೂ ಹೆಚ್ಚು ಬಾಲಕಿಯರ ಮೇಲೆ ಅತ್ಯಾಚಾರವಾಗಿದೆ. ಆರೋಗ್ಯ, ಪೊಲೀಸ್, ಶಿಕ್ಷಣ, ಮಹಿಳಾ-ಮಕ್ಕಳ ಅಭಿವೃದ್ಧಿ ಇಲಾಖೆ ಸಮನ್ವಯತೆಯಿಂದ ಈ ಪಿಡುಗನ್ನು ನಿಯಂತ್ರಿಸಬೇಕಿದೆ. ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು .

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!