ಮೈಸೂರಲ್ಲಿ ಬಾಲ್ಯವಿವಾಹ ತಡೆಗೆ ನಾಳೆಯಿಂದ ಫೀಲ್ಡ್‌ಗಿಳಿಯಲಿದೆ ಅಕ್ಕ ಪಡೆ!

ಮೈಸೂರು ಸೇರಿ ಮೂರು ಜಿಲ್ಲೆಯಲ್ಲಿ ಬಾಲ್ಯ ವಿವಾಹ ತಡೆಗೆ ಆ.15ರಿಂದ ‘ಅಕ್ಕ ಪಡೆ’ ಫೀಲ್ಡ್ ಗಿಳಿಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಾಕಿವೆ ಲಕ್ಷ್ಮಿ ಆರ್.ಹೆಬ್ಬಾಳ್ವರ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.
ಪ್ರಶೋತ್ತರ ವೇಳೆಯಲ್ಲಿ ಸಿ.ಬಿ . ಸುರೇಶ್ ಬಾಬು ಪ್ರಸ್ತಾವಕ್ಕೆ ಉತ್ತರಿಸಿದ ಅವರು, ಆಗಸ್ಟ್ 15ರಂದು ಮೈಸೂರು. ಬೆಳಗಾವಿ, ಮಂಗಳೂರಿನಲ್ಲಿ ‘ಅಕ್ಕ ಪಡೆ’ ಕಾರ್ಯ ಆರಂಭವಾಗಲಿದೆ. ಪಡೆಯಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿ, ಎನ್ ಸಿಸಿ ಹಿರಿಯ ಕೇಡರ್ ಇರಲಿದ್ದು, ಇಲಾಖೆ ವಾಹನ ನೀಡಲಾಗುವುದು, ತಂಡ ಮೊದಲ ಹಂತದಲ್ಲಿ ಕಾಲೇಜು ಬಿಟ್ಟವರ ಮಾಹಿತಿ ಪಡೆಯಲಿದೆ ಎಂದರು.

ಸಾಮಾಜಿಕ ಪಿಡುಗಾಗಿರುವ ಬಾಲ್ಯ ವಿವಾಹವನ್ನು ಪರಿಣಾಮಕಾರಿಯಾಗಿ ತಡೆಯಲು ಹತ್ತು ಇಲಾಖೆಗಳನ್ನು ಒಳಗೊಂಡ ಸಮಿತಿ ರಚಿಸಲಾಗಿದೆ. ಇದನ್ನು ಬೇರು ಕಿತ್ತೊಗೆಯಬೇಕಿದೆ. ಬಾಲ್ಯ ವಿವಾಹ ತಡೆ ತಿದ್ದುಪಡಿ ವಿಧೇಯಕ ತರುತ್ತಿದ್ದೇವೆ ಎಂದರು. ರಾಜ್ಯದಲ್ಲಿ ಬಾಲಗರ್ಭಿಣಿ ಪ್ರಕರಣಗಳು 2022-23ರಲ್ಲಿ 405, 2023-24ರಲ್ಲಿ 709, 2024-25ರಲ್ಲಿ 685 ಸರ್ಕಾರದ ಗಮನಕ್ಕೆ ಬಂದಿದೆ. ಜಿಲ್ಲೆಗೊಂದು ಮಕ್ಕಳ ರಕ್ಷಣಾ ಸಮಿತಿ ಇರಲಿದೆ, ಸಾಮಾಜಿಕ ಮಾಧ್ಯಮಕ್ಕೂ ಕಡಿವಾಣ ಹಾಕಬೇಕಿದೆ, ಕೆಲವು ಸಮುದಾಯಗಳಲ್ಲಿ ಬಾಲ್ಯ ವಿವಾಹ ಆಚರಣೆಯಲ್ಲಿದ್ದು, ಕಡಿವಾಣ ಹಾಕಲಾಗುತ್ತಿದೆ.

66% ಮಕ್ಕಳ ಸಹಾಯವಾಣಿ 1098, 24 ಗಂಟೆ ಕಾರ್ಯನಿರ್ವಹಿಸಲ್ಲಿದೆ . ಸಂಕಷ್ಟದಲ್ಲಿರುವ ಮಕ್ಕಳು ಹಾಗೂ ಸಂತ್ರಸ್ತರು ಯಾವುದೇ ಸಮಯದಲ್ಲಿ ಕರೆ ಮಾಡಿದರೂ ಮಕ್ಕಳ ರಕ್ಷಣೆಗೆ ಇಲಾಖೆ ಮುಂದಾಗಲಿದೆ . ರಾಜ್ಯದಲ್ಲಿ 26 ಸಾವಿರ ಬಾಲ ಗರ್ಭಿಣಿಯರು ಇರುವ ಮಾಹಿತಿ ಇದೆ . 4 ತಿಂಗಳಲ್ಲಿ 900ಕ್ಕೂ ಹೆಚ್ಚು ಬಾಲಕಿಯರ ಮೇಲೆ ಅತ್ಯಾಚಾರವಾಗಿದೆ. ಆರೋಗ್ಯ, ಪೊಲೀಸ್, ಶಿಕ್ಷಣ, ಮಹಿಳಾ-ಮಕ್ಕಳ ಅಭಿವೃದ್ಧಿ ಇಲಾಖೆ ಸಮನ್ವಯತೆಯಿಂದ ಈ ಪಿಡುಗನ್ನು ನಿಯಂತ್ರಿಸಬೇಕಿದೆ. ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು .

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!