‘ಸು ಫ್ರಮ್ ಸೋ‘ 20 ದಿನಕ್ಕೆ ‘ಕಾಟೇರ’ ಕಲೆಕ್ಷನ್ ದಾಖಲೆ ಮುರಿದಿದೆ.

ನಟ ದರ್ಶನ್ ಅಭಿನಯದ ‘ಕಾಟೇರ’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಹೊಸ ದಾಖಲೆ ಸೃಷ್ಟಿ ಮಾಡಿತ್ತು. ಈ ಚಿತ್ರದ ಕಲೆಕ್ಷನ್ ಸರಿ ಸುಮಾರು 90 ಕೋಟಿ ರೂಪಾಯಿ ಆಸುಪಾಸಿನಲ್ಲಿತ್ತು. ಈ ದಾಖಲೆಯನ್ನು ಕನ್ನಡದ ಮತ್ತೊಂದು ಚಿತ್ರ ‘ಸು ಫ್ರಮ್ ಸೋ’ ಮುರಿದು ಹಾಕಿದೆ. ಬಾಕ್ಸ್ ಆಫೀಸ್ ಟ್ರ್ಯಾಕರ್​ sacnilk ಅಲ್ಲಿರೋ ಅಂಕಿ-ಅಂಶ ಈ ವಿಚಾರವನ್ನು ಸ್ಪಷ್ಟಪಡಿಸಿದೆ. ಆ ಬಗ್ಗೆ ಇಲ್ಲಿದೆ ವಿವರ.

‘ಸು ಫ್ರಮ್ ಸೋ’ ಸಿನಿಮಾ ಇಷ್ಟು ದೊಡ್ಡ ಮಟ್ಟದಲ್ಲಿ ಹಿಟ್ ಆಗುತ್ತದೆ ಎಂದು ತಂಡದವರೇ ಭಾವಿಸಿರಲಿಲ್ಲ. 20ನೇ ದಿನ (ಆಗಸ್ಟ್ 13) ಸಿನಿಮಾ 1.24 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಮೂಲಕ ಕನ್ನಡ ಒಂದರಲ್ಲೇ ಸಿನಿಮಾ 63 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್ ಮಾಡಿದೆ. ವಿಶ್ವ ಮಟ್ಟದಲ್ಲಿ ಚಿತ್ರ 90 ಕೋಟಿ ರೂಪಾಯಿ ಗಳಿಸಿದೆ. ಇದರಲ್ಲಿ ಭಾರತದ ನೆಟ್ ಕಲೆಕ್ಷನ್ 70 ಕೋಟಿ ರೂಪಾಯಿ ಇದೆ. ಗ್ರಾಸ್ ಕಲೆಕ್ಷನ್ 80 ಕೋಟಿ ರೂಪಾಯಿ ಆಗಿದೆ. ಹೊರ ದೇಶಗಳಿಂದ 10 ಕೋಟಿ ರೂಪಾಯಿ ಹರಿದು ಬಂದಿದೆ.

ಮಲಯಾಳಂ ಭಾಷೆಯಲ್ಲಿ ‘ಸು ಫ್ರಮ್ ಸೋ’ ಸಿನಿಮಾ 4.75 ಕೋಟಿ ರೂಪಾಯಿ ಕಲೆ ಹಾಕಿದೆ. ತೆಲುಗಿನಿಂದ ಚಿತ್ರಕ್ಕೆ 1.05 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಒಟ್ಟಾರೆ ಸಿನಿಮಾ ದಾಖಲೆಯ ಮೇಲೆ ದಾಖಲೆ ಬರೆಯುತ್ತಿದೆ. ಇದು ದರ್ಶನ್ ಅಭಿನಯದ ‘ಕಾಟೇರ’ ದಾಖಲೆಯನ್ನೂ ಉಡೀಸ್ ಮಾಡಿದೆ.

‘ಕಾಟೇರ’ ಸಿನಿಮಾ ಭಾರತದಲ್ಲಿ 68.1 ಕೋಟಿ ರೂಪಾಯಿ ನೆಟ್ ಕಲೆಕ್ಷನ್ ಮಾಡಿದೆ. ‘ಸು ಫ್ರಮ್ ಸೋ’ ಭಾರತದ ನೆಟ್ ಕಲೆಕ್ಷನ್ 70 ಕೋಟಿ ರೂಪಾಯಿ ಇದೆ. ಈ ಮೂಲಕ ದರ್ಶನ್ ಮಾಡಿದ ದಾಖಲೆಯನ್ನು ರಾಜ್ ಬಿ. ಶೆಟ್ಟಿ ಅವರು ಮುರಿದು ಹಾಕಿದ್ದಾರೆ. ಅಂದಹಾಗೆ ಈ ಬಗ್ಗೆ ತಂಡದವರು ಯಾವುದೇ ಅಧಿಕೃತ ಲೆಕ್ಕ ಬಿಡುಗಡೆ ಮಾಡಿಲ್ಲ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!