ಸ್ವಾತಂತ್ರ್ಯ ದಿನಾಚರಣೆ ಸೆಲೆಬ್ರೇಷನ್​ಗೆ ಬಾರದೆ ಮಂಕಾಗಿ ಕುಳಿತ ದರ್ಶನ್.

ಸ್ವಾತಂತ್ರ್ಯ ದಿನಾಚರಣೆ ಸೆಲೆಬ್ರೇಷನ್​ಗೆ ಬಾರದೆ ಮಂಕಾಗಿ ಕುಳಿತ ದರ್ಶನ್.

ನಟ ದರ್ಶನ್ ಅವರ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಮಧ್ಯಂತರ ಜಾಮೀನು ಪಡೆದು ಹಲವು ಷರತ್ತುಗಳನ್ನು ಉಲ್ಲಂಘಿಸಿರೋದು ಇದಕ್ಕೆ ಕಾರಣ. ಬೆನ್ನು ನೋವು ಎಂದು ವಿಚಾರಣೆಗೆ ಗೈರು ಹಾಜರಾಗಿದ್ದರೂ, ಸಿನಿಮಾ ಪ್ರದರ್ಶನದಲ್ಲಿ ಭಾಗಿ ಆಗಿದ್ದರು. ದರ್ಶನ್ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಂಕಾಗಿ ಕುಳಿತಿದ್ದಾರೆ.

ನಟ ದರ್ಶನ್ ಅವರು ಸದ್ಯ ಜೈಲು ಹಕ್ಕಿ ಆಗಿದ್ದಾರೆ. ಇಷ್ಟು ದಿನ ಜಾಮೀನು ಪಡೆದು ಹಾಯಾಗಿ ಓಡಾಡಿಕೊಂಡಿದ್ದ ಅವರಿಗೆ ಈಗ ಮತ್ತೆ ಜೈಲಿನೂಟ ಮಾಡುವ ಪರಿಸ್ಥಿತಿ ಬಂದಿದೆ. ಅನಾರೋಗ್ಯದ ಕಾರಣ ನೀಡಿ ಮಧ್ಯಂತರ ಜಾಮೀನು ಪಡೆದಿದ್ದ ಅವರು, ನಂತರ ಪೂರ್ತಿ ಪ್ರಮಾಣದ ಜಾಮೀನು ಪಡೆದರು. ಶೂಟಿಂಗ್​ಗಾಗಿ ಹಾಯಾಗಿ ಸುತ್ತಾಡಿಕೊಂಡಿದ್ದರು. ವಿದೇಶಕ್ಕೂ ಕೂಡ ಹೋಗಿ ಬಂದರು. ಇದೆಲ್ಲವನ್ನೂ ಸುಪ್ರೀಂಕೋರ್ಟ್ ಪರಿಗಣಿಸಿದೆ. ಹೀಗಾಗಿ, ಅವರ ಜಾಮೀನು ರದ್ದಾಗಿದೆ. ಇದರಿಂದ ದರ್ಶನ್ ಜೈಲಿ​ನಲ್ಲಿ ಮಂಕಾಗಿ ಕುಳಿತಿದ್ದಾರೆ.

ದರ್ಶನ್ ಅವರು ಜಾಮೀನು ಪಡೆದ ಬಳಿಕ ಮಾಡಿದ ತಪ್ಪು ಒಂದೆರಡಲ್ಲ. ಅವರು ಬೇಕಾಬಿಟ್ಟಿ ನಡೆದುಕೊಂಡಿದ್ದೇ ಅವರಿಗೆ ಮುಳುವಾಯಿತು. ಪ್ರಕರಣದ ಸಾಕ್ಷಿ ಚಿಕ್ಕಣ್ಣ ಜೊತೆ ದರ್ಶನ್ ಸುತ್ತಾಟ ಮಾಡಿಕೊಂಡಿದ್ದರು. ಬೆನ್ನು ನೋವಿನ ಕಾರಣ ನೀಡಿ ವಿಚಾರಣೆಗೆ ಗೈರಾಗೋ ಅವರು, ಮರುದಿನವೇ ಸಿನಿಮಾ ಪ್ರದರ್ಶನದಲ್ಲಿ ಭಾಗಿ ಆಗಿದ್ದರು. ಇದೆಲ್ಲವೂ ಕೋರ್ಟ್ ಕಣ್ಣು ಕುಕ್ಕಿದೆ. ಹೀಗಾಗಿ, ಕೋರ್ಟ್ ಮತ್ತೆ ಅವರನ್ನು ಜೈಲಿಗೆ ಕಳುಹಿಸಿದೆ.

ಸದ್ಯ ದರ್ಶನ್ ಜೈಲಿನಲ್ಲಿ ಮಂಕಾಗಿ ಕುಳಿತಿದ್ದಾರೆ ಎನ್ನಲಾಗಿದೆ. ಆಗಸ್ಟ್ 15ರಂದು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸ್ವತಂತ್ರ್ಯೋತ್ಸವದ ಸೆಲೆಬ್ರೇಷನ್ ನಡೆದಿದೆ. ಆದರೆ, ಇದರಲ್ಲಿ ಭಾಗಿ ಅವರು ನಿರಾಕರಿಸಿದ್ದಾರೆ. ಕರೆದಾಗ ‘ನಾನು ಬರಲ್ಲ’ ಎಂದಷ್ಟೇ ಹೇಳಿ ಮತ್ತೆ ಮೌನಕ್ಕೆ ಜಾರಿದ್ದಾರೆ ಎಂದು ವರದಿ ಆಗಿದೆ.

ದರ್ಶನ್​ ಅವರಿಗೆ ಜೈಲಿನಲ್ಲಿ ವಿಚಾರಣಾಧೀನ ಕೈದಿ ಸಂಖ್ಯೆ ನೀಡಲಾಗಿದೆ. ಅವರ ಕೈದಿ ಸಂಖ್ಯೆ 7314, ಪವಿತ್ರಾ ಗೌಡ ಕೈದಿ ಸಂಖ್ಯೆ 7313. ದರ್ಶನ್​ಗೆ ಜಾಮೀನು ರದ್ದು ಮಾಡಿರೋದು ಸುಪ್ರೀಂಕೋರ್ಟ್. ಹೀಗಾಗಿ, ಅವರು ಸುಪ್ರೀಂಕೋರ್ಟ್​ನ ವಿಸ್ತ್ರತ ಪೀಠಕ್ಕೆ ತೆರಳಿ ಜಾಮೀನು ಅರ್ಜಿ ಸಲ್ಲಿಕೆ ಮಾಡಬಹುದು. ಆದರೆ, ಆದೇಶದಲ್ಲಿ ತಪ್ಪಿದೆ ಎಂಬುದನ್ನು ತೋರಿಸಿದರೆ ಮಾತ್ರ ಕೋರ್ಟ್ ವಿಚಾರಣೆಗೆ ಒಪ್ಪುತ್ತದೆ. ಇದು ಸಾಧ್ಯವಾಗದ ಮಾತು. ಇನ್ನು, ಅವರು ಮತ್ತೊಮ್ಮೆ ಕೆಳ ಹಂತದ ಕೋರ್ಟ್​ನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಬಹುದು. ಆದರೆ, ಸುಪ್ರೀಂಕೋರ್ಟ್ ಜಾಮೀನು ರದ್ದು ಮಾಡಿರುವುದರಿಂದ ಇಲ್ಲಿಯೂ ಅಷ್ಟು ಸುಲಭದಲ್ಲಿ ಜಾಮೀನು ಸಿಗೋದಿಲ್ಲ. ಬೆನ್ನು ನೋವಿನ ಕಾರಣ ನೀಡಿದರೂ ಅದು ಈ ಬಾರಿ ಕೆಲಸ ಮಾಡೋದು ಅನುಮಾನ.

Related Posts

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನಮ್ಮ ಸಮಾಜದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಕೊಲೆ, ಆಸ್ತಿ ಕಲಹ ಹಾಗೂ ದಾಂಪತ್ಯ ಕಲಹಗಳಂತಹ ಜಟಿಲ ಪ್ರಕರಣಗಳು ನ್ಯಾಯಾಲಯದ ಕಟಕಟೆಯಲ್ಲಿ ವರ್ಷಗಟ್ಟಲೆ ಧೂಳು ಹಿಡಿಯುತ್ತಿವೆ. ಭಾರತದ ನ್ಯಾಯಾಂಗ ವ್ಯವಸ್ಥೆಯಲ್ಲಿ ಲಕ್ಷಾಂತರ ಪ್ರಕರಣಗಳು ಇಂದಿಗೂ ವಿಲೇವಾರಿಯಾಗದೆ ಬಾಕಿ…

ಯೋಗೇಶ್‌ ಗೌಡ ಹ*ತ್ಯೆ ಪ್ರಕರಣದಲ್ಲಿ ಕೋರ್ಟ್‌ ಮಹತ್ವದ  ತೀರ್ಪು ನೀಡಿದೆ !

ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೇಶ್‌ ಗೌಡರ ಕೊಲೆ ಪ್ರಕರಣದ ಆರೋಪಿ ಆದ ಧಾರವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿ ಅವರನ್ನು ಅಪರಾಧಿ ಎಂದು ಜನಪ್ರತಿನಿಧಿಗಳ ಸೆಷನ್ಸ್‌ ನ್ಯಾಯಾಲಯ ಘೋಷಿಸಿದ್ದು . ಶಿಕ್ಷೆಯ ಪ್ರಮಾಣವನ್ನು…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು