‘ಅಮ್ಮ’ ಸಂಘಕ್ಕೆ ರಾಜೀನಾಮೆ ಕೊಟ್ಟ ಮೋಹನ್​​ಲಾಲ್

ಎರ್ನಾಕುಲಂ : ಮಲಯಾಳಂ ಚಲನಚಿತ್ರ ಕಲಾವಿದರ ಸಂಘ ರಚನೆಯಾದ 31 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಮಹಿಳೆಯರನ್ನು ಅತ್ಯುನ್ನತ ಸ್ಥಾನಗಳಿಗೆ ಆಯ್ಕೆ ಮಾಡಲಾಗಿದೆ. ನಟಿ ಶ್ವೇತಾ ಮೆನನ್ ನೂತನ ಅಧ್ಯಕ್ಷರು. ನಟಿ ಕುಕ್ಕು ಪರಮೇಶ್ವರನ್ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಈ ಕ್ರಮ, ಸಂಸ್ಥೆಯ ಪುರುಷ ಪ್ರಾಬಲ್ಯದ ನಾಯಕತ್ವಕ್ಕೆ ನಿರ್ಣಾಯಕ ವಿರಾಮವಾಗಿದೆ.

ಕೊಚ್ಚಿಯ ಲುಲು ಮ್ಯಾರಿಯಟ್ ಹೋಟೆಲ್‌ನಲ್ಲಿ ಚುನಾವಣೆ ನಡೆದಿದ್ದು, ಶ್ವೇತಾ ಮೆನನ್ 159 ಮತಗಳನ್ನು ಗಳಿಸಿದರೆ, ಹಿರಿಯ ನಟ ಮತ್ತು ಬಿಜೆಪಿ ನಾಯಕ ದೇವನ್ 132 ಮತಗಳನ್ನು ಪಡೆದರು. ಕುಕ್ಕು ಪರಮೇಶ್ವರನ್ 172 ಮತಗಳೊಂದಿಗೆ ಗೆಲುವು ಸಾಧಿಸಿದರು. ರವೀಂದ್ರನ್ 115 ಮತಗಳನ್ನು ಪಡೆದರು.

ಕಳೆದ ವರ್ಷ ಆಗಸ್ಟ್​​ ಸಂದರ್ಭ ನ್ಯಾಯಮೂರ್ತಿ ಹೇಮಾ ಸಮಿತಿ ವರದಿ ಮಲಯಾಳಂ ಚಿತ್ರರಂಗದಲ್ಲಿ ಸಂಚಲನ ಸೃಷ್ಟಿಸಿತ್ತು. ಆ ಸಂದರ್ಭ, ಅಮ್ಮ ಅಧ್ಯಕ್ಷ, ನಟ ಮೋಹನ್​​ಲಾಲ್ ಸೇರಿದಂತೆ ಆಡಳಿತ ಮಂಡಳಿಯ 17 ಜನರು ರಾಜೀನಾಮೆ ನೀಡಿದ್ದರು. ಇದೀಗ ಆ ಸ್ಥಾನಗಳಿಗೆ ಚುನಾಚಣೆ ನಡೆದಿದೆ.

ನಟಿ ಲಕ್ಷ್ಮಿ ಪ್ರಿಯಾ 139 ಮತಗಳೊಂದಿಗೆ ಉಪಾಧ್ಯಕ್ಷ ಹುದ್ದೆಗಳಲ್ಲಿ ಒಂದನ್ನು ಗೆದ್ದುಕೊಂಡರು. ಜೊತೆಗೆ ಜಯನ್ ಚೆರ್ತಲಾ 267 ಮತಗಳೊಂದಿಗೆ ಮುನ್ನಡೆ ಸಾಧಿಸಿದರು. ನಟಿ ಅನ್ಸಿಬಾ ಹಾಸನ್ ಜಂಟಿ ಕಾರ್ಯದರ್ಶಿಯಾಗಿ ಅವಿರೋಧವಾಗಿ ಆಯ್ಕೆಯಾದರೆ, ನಟ ಉನ್ನಿ ಶಿವಪಾಲ್ 167 ಮತಗಳೊಂದಿಗೆ ಖಜಾಂಚಿ ಸ್ಥಾನವನ್ನು ಪಡೆದರು. ಹೊಸದಾಗಿ ಆಯ್ಕೆಯಾದ ಕಾರ್ಯಕಾರಿ ಸಮಿತಿಯಲ್ಲಿ ಸಿಜೋಯ್ ವರ್ಗೀಸ್, ರೋನಿ ಡೇವಿಡ್, ಟಿನಿ ಟಾಮ್, ಸಂತೋಷ್ ಕೀಳತ್ತೂರು, ವಿನು ಮೋಹನ್ ಮತ್ತು ಜಾಯ್ ಮ್ಯಾಥ್ಯೂ ಇದ್ದಾರೆ. ಮಹಿಳಾ ಮೀಸಲು ಸ್ಥಾನಗಳನ್ನು ನೀನಾ ಕುರುಪ್, ಸರಯು ಮೋಹನ್, ಆಶಾ ಅರವಿಂದ್ ಮತ್ತು ಅಂಜಲಿ ನಾಯರ್ ಗೆದ್ದಿದ್ದಾರೆ. ಇದರಿಂದಾಗಿ ಆಡಳಿತ ಮಂಡಳಿಯಲ್ಲಿ ಒಟ್ಟು ಮಹಿಳೆಯರ ಸಂಖ್ಯೆ 8ಕ್ಕೆ ಏರಿದೆ.

ಐತಿಹಾಸಿಕ ಫಲಿತಾಂಶದ ಹೊರತಾಗಿಯೂ, ಮತದಾನದ ಪ್ರಮಾಣವು ಹಿಂದಿನ ವರ್ಷಗಳಿಗಿಂತ ಗಮನಾರ್ಹವಾಗಿ ಕಡಿಮೆಯಾಗಿದೆ. 506 ಅರ್ಹ ಸದಸ್ಯರಲ್ಲಿ, ಕೇವಲ 298 ಮಂದಿ ಮಾತ್ರ ಮತ ಚಲಾಯಿಸಿದರು. ಇದು ಕಳೆದ ಚುನಾವಣೆಯಲ್ಲಿ ಚಲಾವಣೆಯಾದ 357 ಮತಗಳಿಗೆ ಹೋಲಿಸಿದರೆ ಕಡಿಮೆ ಎನ್ನಬಹುದು.

ಈ ಮಹತ್ವದ ಚುನಾವಣೆ ಹಲವು ತಿರುವುಗಳನ್ನು ಹೊಂದಿತ್ತು. ಹಿರಿಯ ನಟ ಜಗದೀಶ್ ಆರಂಭದಲ್ಲಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದರು. ಆದರೆ ನಂತರ ಶ್ವೇತಾ ಮೆನನ್ ಅವರ ಉಮೇದುವಾರಿಕೆಯನ್ನು ತಿಳಿದ ನಂತರ ನಾಮಪತ್ರವನ್ನು ಹಿಂತೆಗೆದುಕೊಂಡರು. ಕುತೂಹಲಕಾರಿಯಾಗಿ, ದೇವನ್ ಸ್ವತಃ ಮಹಿಳೆಯೊಬ್ಬರು ಉನ್ನತ ಹುದ್ದೆಗೆ ಸ್ಪರ್ಧಿಸುವ ಸಮಯ ಬಂದಿದೆ ಎಂದು ಹೇಳಿದ್ದರು. ಚಲನಚಿತ್ರಗಳ ರಾಜ್ಯ ಸಚಿವರಾದ ಸಾಜಿ ಚೆರಿಯನ್ ಈ ವಿಜಯವನ್ನು ಒಂದು ಮೈಲಿಗಲ್ಲು ಎಂದು ಶ್ಲಾಘಿಸಿದ್ದಾರೆ.

Related Posts

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

ಟ್ರಂಪ್-ಮುನೀರ್ ಆಪ್ತತೆ ಮೋದಿ ಸರ್ಕಾರಕ್ಕೆ ದೊಡ್ಡ ಹಿನ್ನಡೆ: ಕಾಂಗ್ರೆಸ್ ವಾಗ್ದಾಳಿ.

ನವದೆಹಲಿ : ಅಮೆರಿಕ ಮತ್ತು ಇರಾನ್ ನಡುವಿನ ಶಾಂತಿ ಮಾತುಕತೆಯಲ್ಲಿ ಪಾಕಿಸ್ತಾನ ವಹಿಸುತ್ತಿರುವ ಪ್ರಮುಖ ಪಾತ್ರ ಹಾಗೂ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವಿನ ಹೆಚ್ಚುತ್ತಿರುವ ಆಪ್ತತೆಯನ್ನು ಕಾಂಗ್ರೆಸ್ ತೀವ್ರವಾಗಿ ಟೀಕಿಸಿದೆ. ಇದು ಪ್ರಧಾನಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು