ವಿಚ್ಛೇದನಕ್ಕೆ ಮುಂದಾದ ಅಜಯ್ ರಾವ್ ದಂಪತಿ ! ವಿಚ್ಛೇದನ ಬಯಸಿ ಅರ್ಜಿ ಸಲ್ಲಿಸಿದ ಪತ್ನಿ .

ಕನ್ನಡ ಚಿತ್ರರಂಗದ ಜನಪ್ರಿಯ ನಟರಲ್ಲಿ ಒಬ್ಬರಾದ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು ಮೂಡಿದೆ. ಅಜಯ್ ರಾವ್ ಹಾಗೂ ಸ್ವಪ್ನ ವಿಚ್ಛೇದನಕ್ಕೆ ಮುಂದಾಗಿದ್ದಾರೆ. ಈ ಇಬ್ಬರೂ ಸಹ 2014 ರಲ್ಲಿ ಹೊಸೇಪಟೆಯಲ್ಲಿ ಸರಳವಾಗಿ ವಿವಾಹವಾಗಿದ್ದರು. ಇಬ್ಬರಿಗೂ ಮಗಳು ಸಹ ಇದ್ದಾಳೆ. ಮದುವೆಯಾದ 11 ವರ್ಷದ ಬಳಿಕ ಇದೀಗ ಈ ದಂಪತಿ ಬೇರಾಗುತ್ತಿದ್ದಾರೆ.ಇಬ್ಬರ ವಿಚ್ಛೇದನಕ್ಕೆ ನಿಖರ ಕಾರಣಗಳು ಇನ್ನಷ್ಟೆ ತಿಳಿಯಬೇಕಿದೆ. ಸದ್ಯ ನಟ ಅಜಯ್‌ ರಾವ್‌ ಪತ್ನಿ ಸಪ್ನಾ ವಿಚ್ಛೇದನ ಬಯಸಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ಮದುವೆಗೂ ಮುಂಚೆಯೇ ಅಜಯ್‌ ರಾವ್‌ ಡಿವೋರ್ಸ್‌ ಬಗ್ಗೆ ಭವಿಷ್ಯ!
ನಟ ಅಜಯ್‌ ರಾವ್‌, ಸ್ವಪ್ನ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು. ಸದ್ಯ ಈ ದಂಪತಿಗೆ ಮುದ್ದಾದ ಮಗಳಿದ್ದಾಳೆ. ಈ ಜೋಡಿ ಅನ್ಯೋನ್ಯವಾಗಿ ಜೀವನ ಮಾಡುತ್ತಿದ್ದರು , ಆದರೆ ಮದುವೆಗೆ ಮುಂಚೆಯೇ ಇವರಿಬ್ಬರ ಡಿವೋರ್ಸ್‌ ಭವಿಷ್ಯ ನುಡಿದಿದ್ರಂತೆ.

ಈಗೆಲ್ಲಾ ಡಿವೋರ್ಸ್‌ ಟ್ರೆಂಡ್‌ ಹೆಚ್ಚಾಗಿದೆ. ಸಣ್ಣ-ಪುಟ್ಟ ಕಾರಣಗಳಿಗೆ ಮದುವೆ ಆದ ಕೆಲ ದಿನಗಳಲ್ಲೇ ಡಿವೋರ್ಸ್‌ ತೆಗೆದುಕೊಂಡಿರುವ ಸೆಲೆಬ್ರಿಟಿಗಳ ಉದಾಹರಣೆಗಳಿವೆ. ಮದುವೆ ಆದಮೇಲೆ ಡಿವೋರ್ಸ್‌ ತೆಗೆದುಕೊಳ್ಳುವುದು ಕಾಮನ್‌ ಆಗಿಬಿಟ್ಟಿದೆ. ಆದರೆ ಮದುವೆಗೆ ಮುಂಚೆಯೇ ನಟ ಅಜಯ್‌ ರಾವ್‌ ಅವರ ಡಿವೋರ್ಸ್‌ ಬಗ್ಗೆ ಒಬ್ಬರು ಭವಿಷ್ಯ ನುಡಿದಿದ್ದರಂತೆ. ಒಳ್ಳೆ ಮುಹೂರ್ತದಲ್ಲಿ ಮದುವೆಯಾಗುತ್ತಿಲ್ಲ, ಹಾಗಾಗಿ ಮದುವೆಯಾದ ಒಂದೇ ವರ್ಷದಲ್ಲಿ ಅಜಯ್‌ ರಾವ್ ಮತ್ತು ಸ್ವಪ್ನ ಅವರ ಡಿವೋರ್ಸ್‌ ಆಗಲಿದೆ ಎಂದಿದ್ದರಂತೆ.

ಅಜಯ್‌ ರಾವ್‌ ಮದುವೆ
ನಟ ಅಜಯ್‌ ರಾವ್‌ ಮತ್ತು ಸ್ವಪ್ನ ಅಜಯ್‌ ರಾವ್‌ ಅವರು 2014 ಡಿಸೆಂಬರ್‌ನಲ್ಲಿ ದಾಂಪತ್ಯಕ್ಕೆ ಜೀವನಕ್ಕೆ ಕಾಲಿಟ್ಟಿದ್ದರು. ಈ ಜೋಡಿಯದ್ದು ಲವ್‌ ಕಂ ಅರೇಂಜ್‌ ಮ್ಯಾರೇಜ್‌. ಹೀಗೆ ಪರಿಚಯವಾಗಿ, ಆ ಪರಿಯಚಯ ಸ್ನೇಹಕ್ಕೆ ಮತ್ತು ಸ್ನೇಹ ಪ್ರೀತಿಗೆ ತಿರುಗಿ ನಂತರ ಸಪ್ತಪದಿ ತುಳಿದಿದ್ದರು. ಸದ್ಯ ಈ ಜೋಡಿಗೆ ಚೆರಿಷ್ಮಾ ಎಂಬ ಹೆಸರಿನ ಮುದ್ದಾಗ ಮಗಳಿದ್ದಾಳೆ.

ತಪ್ಪು ಮುಹೂರ್ತದಲ್ಲಿ ಮದುವೆಯಾದೆ!
ಶಾಸ್ತ್ರ ಮತ್ತು ಸಂಪ್ರದಾಯಗಳನ್ನು ನಾನು ನಂಬುತ್ತೇನೆ ಆದರೂ ನಾನು ಅದನ್ನು ಫಾಲೋ ಮಾಡಲ್ಲ. ನಾನು ಮದುವೆ ಆಗಿದ್ದು ತಪ್ಪು ಮುಹೂರ್ತದಲ್ಲಿ. ನನ್ನ ಮೊದಲನೇ ಪ್ರೊಡಕ್ಷನ್‌ ಸಿನಿಮಾ ʻಕೃಷ್ಣ ಲೀಲಾʼ ಮಾಡಿದ್ದು ತಪ್ಪು ಮುಹೂರ್ತದಲ್ಲಿ”
ಮದುವೆಯಾದ ಮುಹೂರ್ತದಲ್ಲಿ, ʻನೀವಿಬ್ಬರು ಒಂದು ವರ್ಷವೂ ಜೊತೆ ಇರಲ್ಲ, ಡಿವೋರ್ಸ್‌ ಆಗುತ್ತೆʼ ಅಂದಿದ್ದರು. ಆದರೆ ನಾನು ಯಾವ ಮುಹೂರ್ತವೂ ನೋಡಲ್ಲ. ನನಗೆ ಜ್ಯೋತಿಷ್ಯ ಓದುವುದಕ್ಕೆ ಬರುತ್ತೆ. ನಾನು ಸ್ಟಡಿ ಮಾಡಿದಾಗ, ಹೌದಲ್ವಾ ಇದು ತಪ್ಪು ಮುಹೂರ್ತ ಅನ್ನೋದು ನಂತರ ಗೊತ್ತಾಯ್ತು. ಜೀವನದಲ್ಲಿ ಏನೂ ಬಂದರೂ ನಾನು ಸ್ವೀಕರಿಸುತ್ತೇನೆ” ಎಂದಿದ್ದರು.

Related Posts

ಹೊಸ ದಾಖಲೆಯೊಂದಿಗೆ ಉಳಿದವರು ಕಂಡಂತೆ ಸಿನಿಮಾಗೆ 12 ವರ್ಷ; ನೆನಪು ಹಂಚಿಕೊಂಡ ರಕ್ಷಿತ್ ಶೆಟ್ಟಿ

Ulidavaru Kandanathe: ಕನ್ನಡದ ಕಲ್ಟ್ ಸಿನಿಮಾಗಳಲ್ಲಿ ಒಂದು. ರಕ್ಷಿತ್ ಶೆಟ್ಟಿಯ ನಿರ್ದೇಶನ ಪ್ರತಿಭೆಯನ್ನು ಭಾರತೀಯ ಚಿತ್ರರಂಗಕ್ಕೆ ತೋರಿಸಿದ ಸಿನಿಮಾ ಅದು. ‘ಉಳಿದವರು ಕಂಡಂತೆ’ ಬಿಡುಗಡೆ ಆಗಿ ಇಂದಿಗೆ ಬರೋಬ್ಬರಿ 12 ವರ್ಷ. ರಕ್ಷಿತ್ ಶೆಟ್ಟಿ, ‘ಉಳಿದವರು ಕಂಡಂತೆ’ ಸಿನಿಮಾದ ಪೋಸ್ಟರ್ ಹಂಚಿಕೊಂಡಿದ್ದು,…

ಮತ್ತೊಮ್ಮೆ ಪವನ್ ಕಲ್ಯಾಣ್ ಮತ್ತು ಮಹೇಶ್ ಬಾಬು ಅಭಿಮಾನಿಗಳ ನಡುವೆ ಕಿರಿಕ್!

ಪವನ್ ಕಲ್ಯಾಣ್ ಮತ್ತು ಮಹೇಶ್ ಬಾಬು ಅಭಿಮಾನಿಗಳ ನಡುವೆ ಕಿರಿಕ್ ಶುರುವಾಗಿದೆ. ಇದಕ್ಕೆ ಕಾರಣ ಆಗಿರುವುದು ಪವನ್ ಕಲ್ಯಾಣ್ ಅವರ ಆಪ್ತ ನಿರ್ದೇಶಕರೊಬ್ಬರ ಟ್ವೀಟ್. ಬಿಡುಗಡೆ ಆಗಲಿರುವ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾದ ನಿರ್ದೇಶಕ ಮಾಡಿರುವ ಟ್ವೀಟ್​​ನಿಂದಾಗಿ ಮಹೇಶ್ ಬಾಬು ಅಭಿಮಾನಿಗಳು…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು