ವಿಚ್ಛೇದನಕ್ಕೆ ಮುಂದಾದ ಅಜಯ್ ರಾವ್ ದಂಪತಿ ! ವಿಚ್ಛೇದನ ಬಯಸಿ ಅರ್ಜಿ ಸಲ್ಲಿಸಿದ ಪತ್ನಿ .

ಕನ್ನಡ ಚಿತ್ರರಂಗದ ಜನಪ್ರಿಯ ನಟರಲ್ಲಿ ಒಬ್ಬರಾದ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು ಮೂಡಿದೆ. ಅಜಯ್ ರಾವ್ ಹಾಗೂ ಸ್ವಪ್ನ ವಿಚ್ಛೇದನಕ್ಕೆ ಮುಂದಾಗಿದ್ದಾರೆ. ಈ ಇಬ್ಬರೂ ಸಹ 2014 ರಲ್ಲಿ ಹೊಸೇಪಟೆಯಲ್ಲಿ ಸರಳವಾಗಿ ವಿವಾಹವಾಗಿದ್ದರು. ಇಬ್ಬರಿಗೂ ಮಗಳು ಸಹ ಇದ್ದಾಳೆ. ಮದುವೆಯಾದ 11 ವರ್ಷದ ಬಳಿಕ ಇದೀಗ ಈ ದಂಪತಿ ಬೇರಾಗುತ್ತಿದ್ದಾರೆ.ಇಬ್ಬರ ವಿಚ್ಛೇದನಕ್ಕೆ ನಿಖರ ಕಾರಣಗಳು ಇನ್ನಷ್ಟೆ ತಿಳಿಯಬೇಕಿದೆ. ಸದ್ಯ ನಟ ಅಜಯ್‌ ರಾವ್‌ ಪತ್ನಿ ಸಪ್ನಾ ವಿಚ್ಛೇದನ ಬಯಸಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ಮದುವೆಗೂ ಮುಂಚೆಯೇ ಅಜಯ್‌ ರಾವ್‌ ಡಿವೋರ್ಸ್‌ ಬಗ್ಗೆ ಭವಿಷ್ಯ!
ನಟ ಅಜಯ್‌ ರಾವ್‌, ಸ್ವಪ್ನ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು. ಸದ್ಯ ಈ ದಂಪತಿಗೆ ಮುದ್ದಾದ ಮಗಳಿದ್ದಾಳೆ. ಈ ಜೋಡಿ ಅನ್ಯೋನ್ಯವಾಗಿ ಜೀವನ ಮಾಡುತ್ತಿದ್ದರು , ಆದರೆ ಮದುವೆಗೆ ಮುಂಚೆಯೇ ಇವರಿಬ್ಬರ ಡಿವೋರ್ಸ್‌ ಭವಿಷ್ಯ ನುಡಿದಿದ್ರಂತೆ.

ಈಗೆಲ್ಲಾ ಡಿವೋರ್ಸ್‌ ಟ್ರೆಂಡ್‌ ಹೆಚ್ಚಾಗಿದೆ. ಸಣ್ಣ-ಪುಟ್ಟ ಕಾರಣಗಳಿಗೆ ಮದುವೆ ಆದ ಕೆಲ ದಿನಗಳಲ್ಲೇ ಡಿವೋರ್ಸ್‌ ತೆಗೆದುಕೊಂಡಿರುವ ಸೆಲೆಬ್ರಿಟಿಗಳ ಉದಾಹರಣೆಗಳಿವೆ. ಮದುವೆ ಆದಮೇಲೆ ಡಿವೋರ್ಸ್‌ ತೆಗೆದುಕೊಳ್ಳುವುದು ಕಾಮನ್‌ ಆಗಿಬಿಟ್ಟಿದೆ. ಆದರೆ ಮದುವೆಗೆ ಮುಂಚೆಯೇ ನಟ ಅಜಯ್‌ ರಾವ್‌ ಅವರ ಡಿವೋರ್ಸ್‌ ಬಗ್ಗೆ ಒಬ್ಬರು ಭವಿಷ್ಯ ನುಡಿದಿದ್ದರಂತೆ. ಒಳ್ಳೆ ಮುಹೂರ್ತದಲ್ಲಿ ಮದುವೆಯಾಗುತ್ತಿಲ್ಲ, ಹಾಗಾಗಿ ಮದುವೆಯಾದ ಒಂದೇ ವರ್ಷದಲ್ಲಿ ಅಜಯ್‌ ರಾವ್ ಮತ್ತು ಸ್ವಪ್ನ ಅವರ ಡಿವೋರ್ಸ್‌ ಆಗಲಿದೆ ಎಂದಿದ್ದರಂತೆ.

ಅಜಯ್‌ ರಾವ್‌ ಮದುವೆ
ನಟ ಅಜಯ್‌ ರಾವ್‌ ಮತ್ತು ಸ್ವಪ್ನ ಅಜಯ್‌ ರಾವ್‌ ಅವರು 2014 ಡಿಸೆಂಬರ್‌ನಲ್ಲಿ ದಾಂಪತ್ಯಕ್ಕೆ ಜೀವನಕ್ಕೆ ಕಾಲಿಟ್ಟಿದ್ದರು. ಈ ಜೋಡಿಯದ್ದು ಲವ್‌ ಕಂ ಅರೇಂಜ್‌ ಮ್ಯಾರೇಜ್‌. ಹೀಗೆ ಪರಿಚಯವಾಗಿ, ಆ ಪರಿಯಚಯ ಸ್ನೇಹಕ್ಕೆ ಮತ್ತು ಸ್ನೇಹ ಪ್ರೀತಿಗೆ ತಿರುಗಿ ನಂತರ ಸಪ್ತಪದಿ ತುಳಿದಿದ್ದರು. ಸದ್ಯ ಈ ಜೋಡಿಗೆ ಚೆರಿಷ್ಮಾ ಎಂಬ ಹೆಸರಿನ ಮುದ್ದಾಗ ಮಗಳಿದ್ದಾಳೆ.

ತಪ್ಪು ಮುಹೂರ್ತದಲ್ಲಿ ಮದುವೆಯಾದೆ!
ಶಾಸ್ತ್ರ ಮತ್ತು ಸಂಪ್ರದಾಯಗಳನ್ನು ನಾನು ನಂಬುತ್ತೇನೆ ಆದರೂ ನಾನು ಅದನ್ನು ಫಾಲೋ ಮಾಡಲ್ಲ. ನಾನು ಮದುವೆ ಆಗಿದ್ದು ತಪ್ಪು ಮುಹೂರ್ತದಲ್ಲಿ. ನನ್ನ ಮೊದಲನೇ ಪ್ರೊಡಕ್ಷನ್‌ ಸಿನಿಮಾ ʻಕೃಷ್ಣ ಲೀಲಾʼ ಮಾಡಿದ್ದು ತಪ್ಪು ಮುಹೂರ್ತದಲ್ಲಿ”
ಮದುವೆಯಾದ ಮುಹೂರ್ತದಲ್ಲಿ, ʻನೀವಿಬ್ಬರು ಒಂದು ವರ್ಷವೂ ಜೊತೆ ಇರಲ್ಲ, ಡಿವೋರ್ಸ್‌ ಆಗುತ್ತೆʼ ಅಂದಿದ್ದರು. ಆದರೆ ನಾನು ಯಾವ ಮುಹೂರ್ತವೂ ನೋಡಲ್ಲ. ನನಗೆ ಜ್ಯೋತಿಷ್ಯ ಓದುವುದಕ್ಕೆ ಬರುತ್ತೆ. ನಾನು ಸ್ಟಡಿ ಮಾಡಿದಾಗ, ಹೌದಲ್ವಾ ಇದು ತಪ್ಪು ಮುಹೂರ್ತ ಅನ್ನೋದು ನಂತರ ಗೊತ್ತಾಯ್ತು. ಜೀವನದಲ್ಲಿ ಏನೂ ಬಂದರೂ ನಾನು ಸ್ವೀಕರಿಸುತ್ತೇನೆ” ಎಂದಿದ್ದರು.

Related Posts

ಮೈಸೂರಿನ ಗದ್ದಿಗೆ ರಸ್ತೆಗೆ ‘ಎಸ್. ಜಾನಕಿ ರಸ್ತೆ’ ನಾಮಕರಣ !

ಮೈಸೂರಿನ ಗದ್ದಿಗೆ ರಸ್ತೆಗೆ ‘ಎಸ್. ಜಾನಕಿ ರಸ್ತೆ’ ನಾಮಕರಣಕ್ಕೆ ಶಾಸಕ ಜಿ.ಟಿ. ದೇವೇಗೌಡ ಭರವಸೆ. ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳಲ್ಲಿ ತಮ್ಮ ಅಮೋಘ ಗಾಯನದ ಮೂಲಕ ಕೋಟ್ಯಂತರ ಅಭಿಮಾನಿಗಳ ಹೃದಯ ಗೆದ್ದಿದ್ದ ಗಾನಕೋಗಿಲೆ ಎಸ್. ಜಾನಕಿ ಅವರ ಸ್ಮರಣಾರ್ಥ…

ಚಿತ್ರರಂಗಕ್ಕೆ ಕಾಲಿಟ್ಟ ಲಂಕೇಶ್ ಮೊಮ್ಮಗಳು ಇಶಾ ಲಂಕೇಶ್

  ಕೆಲವು ಸಿನಿಮಾಗಳನ್ನು ನಿರ್ದೇಶಿಸಿ, ನಟನೆ ಸಹ ಮಾಡಿದ್ದರು ಪಿ ಲಂಕೇಶ್. ಇದೀಗ ಅವರ ಮೂರನೇ ತಲೆಮಾರು ಅಂದರೆ ಮೊಮ್ಮಕ್ಕಳು ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಇತ್ತೀಚೆಗಷ್ಟೆ ಲಂಕೇಶ್ ಅವರ ಪುತ್ರ, ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ಮಗ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು. ಇದೀಗ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!