ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಗೆ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಆನೆಗಳಿಗೆ ಅರಮನೆಯಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆ.ಜಂಬೂ ಸವಾರಿ ಅಂದರೆ ಅದು ಮೈಸೂರು ದಸರಾ (Mysuru Dasara) ಅಂತ ಇಡೀ ವಿಶ್ವಕ್ಕೆ ಗೊತ್ತು. ದಸರಾ ಹಬ್ಬದಂದು ಎಲ್ಲರ ಕಣ್ಣು ಅಂಬಾರಿ ಮತ್ತು ಆ ಅಂಬಾರಿ ಹೊತ್ತ ಆನೆಗಳ ಮೇಲಿರುತ್ತದೆ. ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದೆ. ಅರಮನೆಯಲ್ಲಿ ದಸರಾ ಗಜಪಡೆಗೆ ರಾಜಾತಿಥ್ಯ ನೀಡಲಾಗುತ್ತಿದೆ. ಪ್ರತಿನಿತ್ಯ 2 ಬಾರಿ ವಿಶೇಷ ಪೌಷ್ಟಿಕ ಆಹಾರ ನೀಡಲಾಗುತ್ತಿದ್ದು, ಪ್ರತ್ಯೇಕ ವಿಶೇಷ ಅಡುಗೆ ಕೋಣೆಯನ್ನು ನಿರ್ಮಿಸಲಾಗಿದೆ. ಒಟ್ಟು 14 ಆನೆಗಳ ಆಹಾರದ ವೆಚ್ಚ 55 ರಿಂದ 60 ಲಕ್ಷ ರೂ.
ಜಂಬೂ ಸವಾರಿಗೆ ಕ್ಯಾಪ್ಟನ್ ಅಭಿಮನ್ಯು ಪಡೆ ಸಿದ್ಧವಾಗುತ್ತಿದೆ. ಹಾಗಾಗಿ 14 ಆನೆಗಳಿಗೆ ಮೈಸೂರಿನ ಅರಮನೆಯಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆ. ಅದರಲ್ಲೂ ಅವುಗಳ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಲಾಗುತ್ತಿದೆ. ಅದಕ್ಕಾ
ಗಿ ವಿಶೇಷ ಅಡುಗೆ ಕೋಣೆ ನಿರ್ಮಿಸಲಾಗಿದೆ. ಇದಕ್ಕಾಗಿ ಅಡುಗೆ ತಯಾರಕರ ತಂಡವೇ ಇದೆ. ಒಂದು ಆನೆಗೆ 10 ಕೆಜಿಯಷ್ಟು ಆಹಾರ ನೀಡಲಾಗುತ್ತಿದೆ.





