ಭಾರತಕ್ಕೆ ಮರಳಿ ಬಂದ ಗಗನಯಾತ್ರಿ ಶುಭಾಂಶು ಶುಕ್ಲಾ

ನವದೆಹಲಿ: ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಐತಿಹಾಸಿಕ ಭೇಟಿ ನೀಡಿದ ಬಳಿಕ ಇಂದು ಮುಂಜಾನೆ ತಾಯ್ನಾಡಿಗೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ಅವರನ್ನು ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.

ಕೇಂದ್ರ ಸಚಿವ ಜಿತೇಂದ್ರ ಸಿಂಗ್, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮತ್ತು ಇಸ್ರೋ ಅಧ್ಯಕ್ಷ ವಿ. ನಾರಾಯಣನ್ ಅವರು ದೆಹಲಿ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ಶುಕ್ಲಾ ಅವರ ಸಹಾಯಕ ಗಗನಯಾತ್ರಿ ಪ್ರಶಾಂತ್ ಬಾಲಕೃಷ್ಣನ್ ನಾಯರ್ ಕೂಡ ತಾಯ್ನಾಡಿಗೆ ಮರಳಿದ್ದು, ಅವರಿಗೂ ಸ್ವಾಗತ ಕೋರಲಾಯಿತು.

ಕಳೆದ ಒಂದು ವರ್ಷದಿಂದ ಶುಭಾಂಶು ಶುಕ್ಲಾ ಅವರು ಅಮೆರಿಕದಲ್ಲಿದ್ದು, ಐಎಸ್​ಎಸ್​ಗೆ ಆಕ್ಸಿಯಂ-4 ಮಿಷನ್​ ತರಬೇತಿ ಪಡೆದಿದ್ದರು. ಬಳಿಕ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ಯಶಸ್ವಿ ಪ್ರಯಾಣ ಕೈಗೊಂಡಿದ್ದರು.

ಶುಕ್ಲಾ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಬಳಿಕ ತಮ್ಮ ತವರೂರು ಲಕ್ನೋಗೆ ಪ್ರಯಾಣಿಸುವ ಸಾಧ್ಯತೆಯಿದೆ. ನಂತರ ಆಗಸ್ಟ್ 22 ಹಾಗೂ 23 ರಂದು ನಡೆಯಲಿರುವ ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರು ರಾಜಧಾನಿಗೆ ಮರಳುವ ನಿರೀಕ್ಷೆಯಿದೆ.

ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಎಕ್ಸ್​ನಲ್ಲಿ ಪೋಸ್ಟ್​ ಹಂಚಿಕೊಂಡಿದ್ದು, “ಭಾರತದ ಬಾಹ್ಯಾಕಾಶ ವೈಭವ ದೇಶದ ಮಣ್ಣನ್ನು ಸ್ಪರ್ಶಿಸಿದೆ. ಭಾರತ ಮಾತೆಯ ಪುತ್ರ ಗಗನಯಾತ್ರಿ ಶುಭಾಂಶು ಶುಕ್ಲಾ ಇಂದು ಬೆಳಗ್ಗಿನ ಜಾವ ದೆಹಲಿಗೆ ಬಂದಿಳಿದರು. ಅವರೊಂದಿಗೆ ಮತ್ತೊಬ್ಬ ಸಮಾನ ಸಾಧನೆ ಮಾಡಿದ, ಭಾರತದ ಮೊದಲ ಮಾನವ ಗಗನಯಾನಕ್ಕೆ ಆಯ್ಕೆಯಾದ ಗಗನಯಾತ್ರಿಗಳಲ್ಲಿ ಒಬ್ಬರಾದ ಗ್ರೂಪ್​ ಕ್ಯಾಪ್ಟನ್​ ಪ್ರಶಾಂತ್​ ಬಾಲಕೃಷ್ಣನ್​ ನಾಯರ್ ಕೂಡ ಭಾರತಕ್ಕೆ ಮರಳಿದ್ದಾರೆ. ಬಾಲಕೃಷ್ಣ​ ಅವರು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ಮಿಷನ್​ಗೆ ಭಾರತದ ನಿಯೋಜಿತ ಬ್ಯಾಕಪ್​ ಆಗಿದ್ದರು” ಎಂದು ತಿಳಿಸಿದ್ದಾರೆ.

ಶನಿವಾರ, ಭಾರತಕ್ಕೆ ಹಿಂತಿರುಗಲು ವಿಮಾನದಲ್ಲಿ ಕುಳಿತಿದ್ದ ಶುಭಾಂಶು ಶುಕ್ಲಾ ಅವರು ನಗುಮೊಗದಲ್ಲಿರುವ ಫೋಟೋವೊಂದನ್ನು ಇನ್​ಸ್ಟಾಗ್ರಾಂನಲ್ಲಿ ಪೋಸ್ಟ್​ ಮಾಡಿದ್ದರು. “ಭಾರತಕ್ಕೆ ಹಿಂತಿರುಗಲು ವಿಮಾನದಲ್ಲಿ ಕುಳಿತಿದ್ದು, ಈ ಸಮಯದಲ್ಲಿ ನನ್ನ ಹೃದಯದಲ್ಲಿ ಹಲವು ಭಾವನೆಗಳು ಕುಣಿದಾಡುತ್ತಿವೆ. ಈ ಮಿಷನ್​ಗಾಗಿ ಕಳೆದ ವರ್ಷ ನನ್ನ ಸ್ನೇಹಿತರು ಮತ್ತು ಕುಟುಂಬವಾಗಿದ್ದ ಅದ್ಭುತ ಜನರ ಗುಂಪನ್ನು ಬಿಟ್ಟು ಹೋಗಿದ್ದಕ್ಕೆ ನನಗೆ ದುಃಖವಾಗುತ್ತದೆ. ಇದೇ ವೇಳೆ, ಮಿಷನ್​ ನಂತರ ಮೊದಲ ಬಾರಿಗೆ ನನ್ನ ಎಲ್ಲಾ ಸ್ನೇಹಿತರು, ಕುಟುಂಬ ಮತ್ತು ದೇಶದ ಪ್ರತಿಯೊಬ್ಬರನ್ನು ಭೇಟಿಯಾಗಲು ನಾನು ಉತ್ಸುಕನಾಗಿದ್ದೇನೆ. ಇದು ಜೀವನಕ್ಕೂ ಅನ್ವಯಿಸುತ್ತದೆ ಎಂದು ನಾನು ನಂಬುತ್ತೇನೆ” ಎಂದು ಪೋಸ್ಟ್​ ಹಂಚಿಕೊಂಡಿದ್ದರು.

ಜೂನ್ 25ರಂದು ಅಮೆರಿಕದಿಂದ ಐಎಸ್‌ಎಸ್‌ಗೆ ಆಕ್ಸಿಯಮ್-4 ಮಿಷನ್​ಗೆ ತೆರಳುವ ಮೊದಲು ಅವರ ಪ್ಲೇ ಲಿಸ್ಟ್​ನಲ್ಲಿದ್ದ ಸ್ವದೇಶ್‌ ಬಾಲಿವುಡ್ ಸಿನಿಮಾದ ಹಾಡನ್ನು ನೆನಪಿಸಿಕೊಳ್ಳುತ್ತಾ, “ದಿನದ ಕೊನೆಯಲ್ಲಿ ‘ಯುನ್ ಹಿ ಚಲಾ ಚಲ್ ರಹಿ – ಜೀವನ್ ಗಾಡಿ ಹೈ ಸಮಯ್ ಪಹಿಯಾ'” ಎಂದು ಶುಕ್ಲಾ ಬರೆದುಕೊಂಡಿದ್ದಾರೆ. ಶುಕ್ರವಾರ ಹೂಸ್ಟನ್​ನ ಭಾರತೀಯ ಕಾನ್ಸುಲೇಟ್​ನಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಶುಕ್ಲಾ ಹಾಗೂ ಅವರ ಸಹಾಯಕ ಗಗನಯಾತ್ರಿ ಪ್ರಶಾಂತ್​ ನಾಯರ್​ ಭಾಗವಹಿಸಿದ್ದರು.

ಕೆಂಫು ಕೋಟೆಯಲ್ಲಿ ಶುಕ್ರವಾರ ಸ್ವಾತಂತ್ರ್ಯ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ ಅವರು, “ಭಾರತ ತನ್ನದೇ ಆದ ಬಾಹ್ಯಾಕಾಶ ಕೇಂದ್ರವನ್ನು ಅಭಿವೃದ್ಧಿಪಡಿಸುತ್ತಿದೆ. ನಮ್ಮ ಗ್ರೂಪ್​ ಕ್ಯಾಪ್ಟನ್​ ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾನದಿಂದ ಮರಳಿದ್ದಾರೆ. ಮುಂಬರುವ ದಿನಗಳಲ್ಲಿ ಅವರು ಭಾರತಕ್ಕೆ ವಾಪಸ್​ ಆಗಲಿದ್ದಾರೆ” ಎಂದು ಹೇಳಿದ್ದರು.

ಶುಭಾಂಶು ಶುಕ್ಲಾ ಅವರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ದೆಹಲಿ ಸಿಎಂ ರೇಖಾ ಗುಪ್ತಾ ಹಾಗೂ ಕೇಂದ್ರ ಸಚಿವ ಜಿತೇಂದ್ರ ಸಿಂಗ್ (PTI)
ಶುಭಾಂಶು ಶುಕ್ಲಾ ಅವರು, ಜೂನ್​ 25ರಂದು ಫ್ಲೋರಿಡಾದಿಂದ ಉಡಾವಣೆಗೊಂಡು, ಜೂನ್​ 26ರಂದು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಡಾಕ್​ ಮಾಡಲಾದ ಆಕ್ಸಿಯಮ್​-4 ಖಾಸಗಿ ಬಾಹ್ಯಾಕಾಶ ಕಾರ್ಯಾಚರಣೆಯ ಭಾಗವಾಗಿದ್ದರು. ಜುಲೈ 15ರಂದು ಮಿಷನ್​ ಮುಗಿಸಿ, ಭೂಮಿಗೆ ವಾಪಸ್​ ಆಗಿದ್ದರು.

ಇತರ ಮೂವರು ಗಗನಯಾತ್ರಿಗಳಾದ ಅಮೆರಿಕದ ಪೆಗ್ಗಿ ವಿಟ್ಸನ್, ಪೋಲೆಂಡ್​ನ ಸ್ಲಾವೋಸ್ಜ್ ಉಜ್ನಾನ್ಸ್ಕಿ-ವಿಸ್ನಿಯೆವ್ಸ್ಕಿ ಹಾಗೂ ಹಂಗೇರಿಯ ಟಿಬೋರ್ ಕಾಪು ಅವರ ಜೊತೆಗೆ ಶುಕ್ಲಾ 18 ದಿನಗಳ ಮಿಷನ್​ನಲ್ಲಿ ಭಾಗವಹಿಸಿದ್ದರು. ಈ ವೇಳೆ 60ಕ್ಕೂ ಹೆಚ್ಚು ಪ್ರಯೋಗಗಳು ಮತ್ತು 20 ಔಟ್ರೀಚ್ ಸೆಷನ್​ಗಳನ್ನು ಶುಭಾಂಶು ಶುಕ್ಲಾ ನಡೆಸಿದ್ದರು.

Related Posts

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಭಾರತದ ಉಕ್ಕಿನ ಉತ್ಪಾದನಾ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲೊಂದು ನಿರ್ಮಾಣವಾಗಿದೆ. ಸಮುದ್ರ ಹಾಗೂ ಕಡಲಾಚೆಯ ಬೃಹತ್ ಇಂಜಿನಿಯರಿಂಗ್ ಯೋಜನೆಗಳಲ್ಲಿ ಬಳಸಲಾಗುವ ಅತ್ಯಂತ ಹೆಚ್ಚಿನ ಸಾಮರ್ಥ್ಯದ ವೆಲ್ಡೆಡ್ ಪೈಪ್‌ಗಳನ್ನು (EQ70 ಗ್ರೇಡ್) ಉತ್ಪಾದಿಸಿದ ವಿಶ್ವದ ಮೊದಲ ಸ್ಟೀಲ್ ಕಂಪನಿ ಎಂಬ ಹೆಗ್ಗಳಿಕೆಗೆ ‘ಆರ್ಸೆಲರ್ ಮಿತ್ತಲ್…

ಕ್ವಾಲಿಫೈಯರ್ ಆಡದೆಯೇ ಆರ್‌ಸಿಬಿ ಫೈನಲ್ ತಲುಪಬಹುದು..!

ಐಪಿಎಲ್ 2026 ಕ್ವಾಲಿಫೈಯರ್ 1 ರಲ್ಲಿ ಆರ್‌ಸಿಬಿ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಧರ್ಮಶಾಲಾದಲ್ಲಿ ಸೆಣಸಾಡಲಿವೆ. ಈ ಪಂದ್ಯ ಮಳೆಯಿಂದ ರದ್ದಾದರೆ, ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಆರ್‌ಸಿಬಿ ನೇರವಾಗಿ ಫೈನಲ್‌ಗೆ ಅರ್ಹತೆ ಪಡೆಯುತ್ತದೆ. ಸೋತ ತಂಡಕ್ಕೆ ಕ್ವಾಲಿಫೈಯರ್ 2 ಆಡಲು ಮತ್ತೊಂದು ಅವಕಾಶವಿದ್ದರೂ,…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!