‘ಏಳುಮಲೆ’ ಸಿನಿಮಾ ರಿಲೀಸ್ ಡೇಟ್ ಫಿಕ್ಸ್

ತರುಣ್ ಸುಧೀರ್ ನಿರ್ಮಾಣದ ‘ಏಳುಮಲೆ’ ಸಿನಿಮಾ ತನ್ನ ಕಂಟೆಂಟ್ ಮೂಲಕ ಸುದ್ದಿ ಮಾಡುತ್ತಿದೆ. ಹಾಡುಗಳು ಹಾಗೂ ಟೈಟಲ್ ಟೀಸರ್ ಮೂಲಕ ಪ್ರೇಕ್ಷಕ ವಲಯದಲ್ಲಿ ನಿರೀಕ್ಷೆ ಹೆಚ್ಚಿಸಿದ್ದು, ಇದೀಗ ಈ ಚಿತ್ರದ ಬಿಡುಗಡೆ ದಿನಾಂಕ ನಿಗದಿಯಾಗಿದೆ. ಪುನೀತ್ ರಂಗಸ್ವಾಮಿ ಆಕ್ಷನ್ ಕಟ್ ಹೇಳಿರುವ ಏಳುಮಲೆ ಸಿನಿಮಾ ಸೆಪ್ಟೆಂಬರ್ 5ರಂದು ತೆರೆಗೆ ಬರ್ತಿದೆ. ಕನ್ನಡ, ತಮಿಳು ಹಾಗೂ ತೆಲುಗು ಭಾಷೆಯಲ್ಲಿ ಚಿತ್ರ ಬಿಡುಗಡೆಯಾಗಲಿದೆ.

ಕರ್ನಾಟಕ-ತಮಿಳುನಾಡು ನಡುವಿನ ಗಡಿಭಾಗದ ಪ್ರೇಮಕಥೆಯಾಗಿರುವ `ಏಳುಮಲೆ’ ಸಿನಿಮಾದಲ್ಲಿ ನಟಿ ರಕ್ಷಿತಾ ಸೋದರ ರಾಣಾ ಕನ್ನಡದ ಹುಡ್ಗ ಹರೀಶ್ ಆಗಿ ನಟಿಸುತ್ತಿದ್ದಾರೆ. ರಿಯಾಲಿಟಿ ಶೋ ಮೂಲಕ ಮನೆ ಮಾತಾಗಿರುವ ಮೈಸೂರಿನ ಹುಡುಗಿ ಪ್ರಿಯಾ ಆಚಾರ್ ತಮಿಳು ಹುಡುಗಿಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ರಾಣಾ, ಪ್ರಿಯಾಂಕಾ ಆಚಾರ್ ಜೊತೆಗೆ ಜಗಪತಿ ಬಾಬು, ನಾಗಾಭರಣ, ಕಿಶೋರ್ ಕುಮಾರ್, ಸರ್ದಾರ್ ಸತ್ಯ, ಜಗಪ್ಪ ತಾರಾಬಳಗದಲ್ಲಿದ್ದಾರೆ.

ಚೌಕ ಮತ್ತು ಕಾಟೇರ ಚಿತ್ರಗಳ ನಿರ್ದೇಶಕ ತರುಣ್ ಕಿಶೋರ್ ಸುಧೀರ್ ಅವರು ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಅಟ್ಲಾಂಟಾ ನಾಗೇಂದ್ರ ಅವರು ಚಿತ್ರಕ್ಕೆ ಸಹ ನಿರ್ಮಾಪಕರಾಗಿದ್ದಾರೆ. ಈ ಚಿತ್ರವು ನೈಜ ಘಟನೆಯನ್ನು ಆಧರಿಸಿದೆ. ಭಾವನಾತ್ಮಕವಾದ ಕಥೆಯನ್ನು ಒಳಗೊಂಡಿರಲಿದೆ. ಚಾಮರಾಜನಗರ, ಸೇಲಂ, ಈರೋಡ್ ಸೇರಿದಂತೆ ಕರ್ನಾಟಕ-ತಮಿಳುನಾಡು ಗಡಿ ಭಾಗದ ಸ್ಥಳಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ

Related Posts

ರಾಮ್‌ಚರಣ್‌, ಕಿಚ್ಚ ಸುದೀಪ್‌ ಬಾಡಿಗಾರ್ಡ್‌ಗಳ ನಂತರ ಈಗ ಯಶ್‌ ಅಂಗರಕ್ಷಕನ ಹವಾ!

ಚಿತ್ರರಂಗದಲ್ಲಿ ನೆಚ್ಚಿನ ನಟರ ಜೊತೆಗೆ ಅವರ ಪರ್ಸನಲ್‌ ಬಾಡಿಗಾರ್ಡ್‌ಗಳೂ ಇತ್ತೀಚೆಗೆ ಭಾರಿ ಸದ್ದು ಮಾಡುತ್ತಿದ್ದು, ಅಭಿಮಾನಿಗಳಲ್ಲಿ ಸಖತ್ ಟ್ರೆಂಡ್ ಸೃಷ್ಟಿಸುತ್ತಿದ್ದಾರೆ. ನಟ ರಾಮ್‌ ಚರಣ್‌ ಅಭಿನಯದ ಪ್ಯಾನ್‌ ಇಂಡಿಯಾ ಸಿನಿಮಾ ‘ಪೆದ್ದಿ’ ಪ್ರಚಾರದ ವೇಳೆಯಲ್ಲಿ ಅವರ ಪರ್ಸನಲ್ ಸೆಕ್ಯೂರಿಟಿ ಗಾರ್ಡ್, ಆಫ್ರಿಕಾ…

ರಾಮಾಯಣ’ ಟ್ರೇಲರ್ ಉದ್ದಕ್ಕೂ ರಾವಣನದ್ದೇ ಅಬ್ಬರ !

  ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿರುವ ‘ರಾಮಾಯಣ’ ಟ್ರೇಲರ್ ಭಾರಿ ಧೂಳೆಬ್ಬಿಸುತ್ತಿದೆ. ರಾವಣನಾಗಿ ರಾಕಿಂಗ್ ಸ್ಟಾರ್ ಯಶ್ ಅವರ ರೌದ್ರಾವತಾರದ ಎಂಟ್ರಿಗೆ ಪ್ರೇಕ್ಷಕರು ಥಿಯೇಟರ್‌ನಲ್ಲಿ ಹುಚ್ಚೆದ್ದು ಕುಣಿದಿದ್ದು, ಇಡೀ ಟ್ರೇಲರ್ ಯಶ್ ಅವರ ಅಪ್ರತಿಮ ಡಾಮಿನೇಷನ್‌ನಿಂದ ಕೂಡಿದೆ ಎಂದು ಫ್ಯಾನ್ಸ್ ಕೊಂಡಾಡುತ್ತಿದ್ದಾರೆ. ‘ರಾಮಾಯಣ’ ಟ್ರೇಲರ್…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!