ಧರ್ಮಸ್ಥಳ ಪ್ರಕರಣ: ತಮಿಳುನಾಡಿನಲ್ಲಿ ಗುಂಪೊಂದು ಸಂಪರ್ಕಿಸಿತ್ತೆಂದು ದೂರುದಾರ ಹೇಳಿಲ್ಲ – ಎಸ್‌ಐಟಿ ಸ್ಪಷ್ಟನೆ.

ಮಂಗಳೂರು : ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ತಮಿಳುನಾಡಿನಲ್ಲಿ ಗುಂಪೊಂದು ದೂರುದಾರನನ್ನು ಸಂಪರ್ಕಿಸಿತ್ತೆಂಬ ಸುದ್ದಿ ಸುಳ್ಳು ಎಂದು ಸ್ಪಷ್ಟಪಡಿಸಿದೆ. ತನಿಖೆಯ ವೇಳೆ ದೂರುದಾರನು ಯಾವುದೇ ಇಂತಹ ಹೇಳಿಕೆ ನೀಡಿಲ್ಲ ಎಂದು ಅಧಿಕಾರಿಗಳು ಸೋಮವಾರ ಸ್ಪಷ್ಟನೆ ನೀಡಿದ್ದಾರೆ.

ಹಿಂದೆ ಕೆಲ ಮಾಧ್ಯಮ ವರದಿಗಳ ಪ್ರಕಾರ, “2014ರ ನಂತರ ತಮಿಳುನಾಡಿನಲ್ಲಿ ಇದ್ದಾಗ 2023ರಲ್ಲಿ ಒಂದು ಗುಂಪು ನನ್ನನ್ನು ಸಂಪರ್ಕಿಸಿತ್ತು. ಧರ್ಮಸ್ಥಳದಲ್ಲಿ ಶವ ಹೂತಿರುವ ಬಗ್ಗೆ ಕೇಳಿದ್ದರು. ನಾನು ಕಾನೂನುಬದ್ಧವಾಗಿ ಶವ ಹೂತಿದ್ದೆನೆಂದು ತಿಳಿಸಿದ್ದೆ. ಆದರೆ ಅವರು ತಪ್ಪು ಹೇಳಿಕೆ ನೀಡುವಂತೆ ಒತ್ತಡ ಹೇರಿದ್ದರು,” ಎಂಬುವಾಗಿ ದೂರುದಾರ ಹೇಳಿಕೆ ನೀಡಿದ್ದಾನೆಂದು ಹೇಳಲಾಗಿತ್ತು. ಈ ಹಿನ್ನೆಲೆಯಲ್ಲಿ ವಿವಾದಗಳು ಹೆಚ್ಚಾಗಿದ್ದವು.

ಆದರೆ, ಎಸ್‌ಐಟಿ ಈ ವರದಿಗಳನ್ನು ನಿರಾಕರಿಸಿದ್ದು, “ವಿಚಾರಣೆಯಲ್ಲಿ ದೂರುದಾರನು ಅಂತಹ ಯಾವುದೇ ಹೇಳಿಕೆ ನೀಡಿಲ್ಲ. ಅವರು ಸೆಕ್ಷನ್ 164ರಡಿಯಲ್ಲಿ ನೀಡಿರುವ ಹೇಳಿಕೆಯನ್ನು ನಾವು ದಾಖಲಿಸುತ್ತಿದ್ದೇವೆ,” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅದಷ್ಟೇ ಅಲ್ಲದೆ, ಮೊದಲು ದೂರುದಾರ ನೀಡಿರುವ ಹೇಳಿಕೆಗಳ ನಿಖರತೆಯನ್ನು ಪರಿಶೀಲಿಸಲಾಗುವುದು. ದೂರುದಾರರೊಂದಿಗೆ ಕೆಲಸ ಮಾಡಿದ ಗ್ರಾಪಂ ಅಧಿಕಾರಿಗಳು, ಸೇವೆಯಲ್ಲಿದ್ದ ಪೊಲೀಸರು ಹಾಗೂ ಇತರ ಸಿಬ್ಬಂದಿಗಳಿಂದ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ.

ಈ ನಡುವೆ, ಎಸ್‌ಐಟಿ ಯೂಟ್ಯೂಬರ್‌ಗಳಿಗೆ ನೋಟಿಸ್ ನೀಡಿದೆಯೆಂಬ ಸುದ್ದಿಗಳನ್ನೂ ಅಧಿಕಾರಿಗಳು ಖಂಡಿಸಿದ್ದಾರೆ. “ಯಾವುದೇ ನೋಟಿಸ್ ನೀಡಿಲ್ಲ,” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

1994ರಿಂದ 2014ರವರೆಗೆ ಕೆಲಸ ಮಾಡಿದ ಕೆಲ ಸಿಬ್ಬಂದಿಗೆ ಸಮನ್ಸ್ ನೀಡಲಾಗಿದ್ದು, ಅವರಿಂದ ಹೇಳಿಕೆಗಳನ್ನು ದಾಖಲಿಸಲಾಗುತ್ತಿದೆ.

ಇನ್ನೊಂದು ಮೂಲದ ಪ್ರಕಾರ, ಮಂಗಳವಾರ ಸಾಕ್ಷಿ-ದೂರುದಾರರೊಂದಿಗೆ ಸೇರಿದಂತೆ ಇತರ ಪ್ರಮುಖ ವ್ಯಕ್ತಿಗಳನ್ನೂ ಎಸ್‌ಐಟಿ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ. ದೂರುದಾರರು ಉಲ್ಲೇಖಿಸಿರುವ ತಲೆಬುರುಡೆ ಹಾಗೂ ಇತರ ಸ್ಥಳಗಳ ಬಗ್ಗೆ ಮುಂದಿನ ಹಂತದಲ್ಲಿ ಪ್ರಶ್ನೆಗಳನ್ನು ಕೇಳಲಾಗುವುದು ಎಂದು ಮೂಲಗಳು ತಿಳಿಸಿವೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!