ರಜನಿಕಾಂತ್, ಕಮಲ್ ಹಾಸನ್.. 4 ದಶಕದ ನಂತರ ಒಂದೇ ತೆರೆಯಲ್ಲಿ…..!

ದಕ್ಷಿಣ ಭಾರತದ ಸೂಪರ್ ಸ್ಟಾರ್​ಗಳಾದ ರಜನಿಕಾಂತ್ ಹಾಗೂ ಕಮಲ್ ಹಾಸನ್ ಅವರು 46 ವರ್ಷಗಳ ನಂತರ ಒಂದೇ ಸಿನಿಮಾದಲ್ಲಿ ಕಾಣಿಸಿಕೊಳ್ಳಲ್ಲಿದ್ದಾರೆ. ಲೆಜೆಂಡರಿ ಹೀರೋಗಳು ಸ್ಕ್ರೀನ್ ಶೇರ್ ಮಾಡಿಕೊಳ್ಳುತ್ತಿರುವುದು ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದ್ದು ಈ ಸಿನಿಮಾವನ್ನು ಲೋಕೇಶ್ ಕನಕರಾಜ್ ಅವರು ನಿರ್ದೇಶನನ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.

ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಉಳಗನಾಯಗನ್ ಕಮಲ್ ಹಾಸನ್ ಅವರಿಗೆ ಈಗಾಗಲೇ 70 ವರ್ಷಗಳು ದಾಟಿದ್ದರೂ ಗ್ಯಾಂಗ್​ಸ್ಟರ್​ಗಳಾಗಿ ಸಿನಿಮಾದಲ್ಲಿ ಮಿಂಚಲಿದ್ದಾರಂತೆ. ಈ ಕುರಿತು ಸಿನಿಮಾ ಸ್ಕ್ರೀಪ್ಟ್​ ಅನ್ನು ಕೊರೊನಾಗಿಂತ ಮೊದಲೇ ಸಿದ್ಧವಾಗಿತ್ತು. ಆದರೆ ಇಷ್ಟು ದಿನ ಈ ಸ್ಕ್ರೀಪ್ಟ್​ ಅನ್ನು ಹಾಗೇ ಇಡಲಾಗಿತ್ತು. ಈಗ ಮತ್ತೆ ಇದು ಮುನ್ನೆಲೆಗೆ ಬಂದಿದ್ದು ಹೆಸರಿಡದ ಸಿನಿಮಾ ಮತ್ತೊಂದು ಹಂತಕ್ಕೆ ಹೋಗುವ ನಿರೀಕ್ಷೆ ಇದೆ ಎನ್ನಲಾಗಿದೆ.

ದಿಗ್ಗಜ ನಟರು ಅಭಿನಯಿಸಲಿದ್ದಾರೆ ಎನ್ನುವ ಸಿನಿಮಾ ಇನ್ನು ಮಾತುಕತೆಯಲ್ಲಿದೆ. ಇದರ ನಡುವೆ ಲೋಕೇಶ್ ಕನಕರಾಜ್ ಅವರು ಕಾರ್ತಿ ಜೊತೆ ಖೈದಿ-2 ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ರಜನಿಕಾಂತ್ ಹಾಗೂ ಕಮಲ್ ಹಾಸನ್ ಅವರ ಮುಂಬರುವ ದೊಡ್ಡ ಪ್ರಾಜೆಕ್ಟ್ ಇದಾಗಿದ್ದು, ಹೀಗಾಗಿ ಅವರಿಗಾಗಿ ನಿರ್ದೇಶಕರು ಇನ್ನಷ್ಟು ಕಾಯಬೇಕಾಗಿದೆ ಎಂದು ಹೇಲಾಗುತ್ತಿದೆ.

ಈ ಹಿಂದೆ ರಜನಿಕಾಂತ್ ಹಾಗೂ ಕಮಲ್ ಹಾಸನ್ ಅವರು ಹಲವು ಸಿನಿಮಾಗಳಲ್ಲಿ ನಟಿಸಿ ಜನರ ಮನ ಗೆದ್ದಿದ್ದರು. ಆದರೆ ಈ ದಿಗ್ಗಜ ನಟರು 1979ರಲ್ಲಿ ರಿಲೀಸ್ ಆದಂತಹ ಅಲಾವುದ್ದೀನುಮ್ ಅಲ್ಭೂತ ವಿಲಕ್ಕುಮ್ ಎನ್ನುವ ಸಿನಿಮಾದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದರು. ಅಂದಿನಿಂದ ಇಬ್ಬರು ಸೇರಿ ಒಟ್ಟಿಗೆ ಯಾವುದೇ ಸಿನಿಮಾದಲ್ಲಿ ಮತ್ತೆ ಅಭಿನಯ ಮಾಡಿರಲಿಲ್ಲ. ಸದ್ಯ 46 ವರ್ಷಗಳ ಬಳಿಕ ರಜನಿ-ಕಮಲ್ ಸ್ಕ್ರೀನ್ ಶೇರ್ ಮಾಡುತ್ತಾರೆ ಎಂದು ಹೇಳಲಾಗುತ್ತದೆ.

ಸ್ಟ್ 24 ಭಾನುವಾರ ಬೆಳಗ್ಗೆ 10- 05 ಕ್ಕೆ ” ದಿ ಡೆವಿಲ್ ” ನ , ಮೊದ

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!