ಆಂಧ್ರದ ತಿರುಪತಿ ತಿಮ್ಮಪ್ಪನಿಗೆ ಭಕ್ತರೊಬ್ಬರು ಬರೋಬ್ಬರಿ 121 ಕೆ.ಜಿ. ಚಿನ್ನವನ್ನು ದೇಣಿಗೆಯಾಗಿ ನೀಡುವುದಾಗಿ ಘೋಷಿಸಿದ್ದಾರೆ

121 ಕೆಜಿ ಚಿನ್ನದ ಬೆಲೆ 140 ಕೋಟಿ ರೂಪಾಯಿ
ಉದ್ಯಮ ಸ್ಥಾಪಿಸಿ ಯಶಸ್ವಿಯಾದ ಉದ್ಯಮಿ!
ಹೆಸರು ಹೇಳಲು ಬಯಸದ ತಿರುಪತಿ ವೆಂಕಟೇಶ್ವರನ ಭಕ್ತರೊಬ್ಬರು ಉದ್ಯಮವೊಂದನ್ನು ಸ್ಥಾಪಿಸಿ ಯಶಸ್ವಿಯಾಗಿದ್ದರು. ಇತ್ತೀಚೆಗೆ ಆ ಕಂಪನಿಯಲ್ಲಿನ ಶೇ.60ರಷ್ಟು ಷೇರು ಮಾರಾಟ ಮಾಡಿದ ಪರಿಣಾಮ ಅವರಿಗೆ 6000-7000 ಕೋಟಿ ರು. ಹಣ ಸಿಕ್ಕಿತ್ತು. ತಮಗೆ ಈ ಸಂಪತ್ತು ಸಿಗಲು ಕಾರಣನಾದ ಭಗವಂತನಿಗೆ ಕೃತಜ್ಞತೆ ಸಲ್ಲಿಸುವ ನಿಟ್ಟಿನಲ್ಲಿ ತಿರುಪತಿ ತಿಮ್ಮಪ್ಪನಿಗೆ ಚಿನ್ನವನ್ನು ಕಾಣಿಕೆಯಾಗಿ ನೀಡಲು ಆ ಉದ್ಯಮಿ ನಿರ್ಧರಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು, ತಮ್ಮ ಉದ್ಯಮ ಯಶಸ್ಸು ಕಂಡ ಹಿನ್ನೆಲೆಯಲ್ಲಿ 140 ಕೋಟಿ ರೂಪಾಯಿ ಮೌಲ್ಯದ ಬಂಗಾರವನ್ನು ಕಾಣಿಕೆಯಾಗಿ ನೀಡಿದ್ದಾರೆ. ಓರ್ವ ಅನಾಮಧೇಯ ಭಕ್ತರೊಬ್ಬರು ತಿರುಪತಿಯ ಶ್ರೀ ವೆಂಕಟೇಶ್ವರ ಸ್ವಾಮಿಗೆ 121 ಕೆಜಿ ಬಂಗಾರವನ್ನು ಕಾಣಿಕೆಯಾಗಿ ನೀಡುವುದಾಗಿ ಹರಕೆ ಹೊತ್ತಿದ್ದಾರೆ ಎಂದು ಆಂಧ್ರ ಪ್ರದೇಶದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಮಂಗಳವಾರ ಪ್ರಕಟಿಸಿದ್ದಾರೆ. ಈ ಚಿನ್ನದ ಮೌಲ್ಯ ಬರೋಬ್ಬರಿ 140 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ.
ಮಾಹಿತಿ ನೀಡಿದ ಸಿಎಂ ಚಂದ್ರಬಾಬು ನಾಯ್ಡು
ಮಂಗಳಗಿರಿಯಲ್ಲಿ ನಡೆದ ‘ಬಡತನ ನಿರ್ಮೂಲನೆ’ (ಪಿ4) ಕಾರ್ಯಕ್ರಮದಲ್ಲಿ ಮಾತನಾಡಿರುವ ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, “ಶ್ರೀ ವೆಂಕಟೇಶ್ವರ ಸ್ವಾಮಿಯ ಭಕ್ತರೊಬ್ಬರು ಕಂಪನಿಯೊಂದನ್ನು ಸ್ಥಾಪಿಸುವ ಸಂಕಲ್ಪ ಮಾಡಿದ್ದರು. ಇದೀಗ ಅವರು ಅದರಲ್ಲಿ ಪೂರ್ಣ ಯಶಸ್ಸನ್ನು ಕಂಡಿದ್ದಾರೆ. ದೈವಾನುಗ್ರಹದಿಂದ ದೊರೆತ ಈ ಯಶಸ್ಸಿಗೆ ಕೃತಜ್ಞತೆ ಸಲ್ಲಿಸಲು ಅವರು ಮುಂದಾಗಿದ್ದಾರೆ. ಅದಕ್ಕಾಗಿ ಇದೀಗ 121 ಕೆಜಿ ಬಂಗಾರವನ್ನು ಸ್ವಾಮಿಗೆ ಅರ್ಪಿಸುತ್ತಿದ್ದಾರೆ,” ಎಂದು ತಿಳಿಸಿದರು.
ಪ್ರತಿನಿತ್ಯ ತಿಮ್ಮಪ್ಪನಿಗೆ 120 ಕೆಜಿ ಆಭರಣ!
ಪ್ರತಿದಿನ ತಿರುಪತಿಯಲ್ಲಿ ಇರುವ ಶ್ರೀ ವೆಂಕಟೇಶ್ವರ ಸ್ವಾಮಿಯ ವಿಗ್ರಹವನ್ನು ಸುಮಾರು 120 ಕೆಜಿ ತೂಕದ ಚಿನ್ನದ ಆಭರಣಗಳಿಂದ ಅಲಂಕರಿಸಲಾಗುತ್ತದೆ. ಈ ವಿಷಯವನ್ನು ತಿಳಿದುಕೊಂಡ ಆ ಅನಾಮಧೇಯ ಭಕ್ತರು, ಅದಕ್ಕಿಂತ ಒಂದು ಕೆಜಿ ಹೆಚ್ಚಿಗೆ, ಅಂದರೆ 121 ಕೆಜಿ ಚಿನ್ನವನ್ನು ದಾನ ಮಾಡಲು ಮುಂದಾಗಿದ್ದಾರೆ ಎಂದು ಮುಖ್ಯಮಂತ್ರಿ ಎನ್‌ ಚಂದ್ರಬಾಬು ನಾಯ್ಡು ಅವರು ವಿವರಿಸಿದರು.

 

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!