ಮಗುವಿಗೆ ಜನ್ಮ ನೀಡಲಿವೆ ರೋಬೋಟ್ ಗಳು !

ಪುರುಷನ ಸಂಪರ್ಕವಿಲ್ಲದೇ ಐವಿಎಫ್ ಮೂಲಕ ಸಂತಾನೋತ್ಪತ್ತಿ ಸಾಧಿಸಿದ ವಿಜ್ಞಾನಿಗಳಿಗೆ ಈಗ ತಾಯಂದಿರ ಅಗತ್ಯವೇ ಇಲ್ಲದೇ ಮಗು ಹುಟ್ಟಿಸಲು ಮುಂದಾಗಿದ್ದಾರೆ. ಇನ್ನು ಮುಂದೆ ತಾಯಂದಿರಿಂದ ಅಲ್ಲ, ಬದಲಾಗಿ ಯಂತ್ರಗಳಿಂದ ಜನಿಸುವ ಜಗತ್ತು ಕಲ್ಪಿಸಿಕೊಳ್ಳಿ. ಚೀನಿ ವಿಜ್ಞಾನಿಗಳು ಮಹಿಳೆಯ ಸಹಾಯವಿಲ್ಲದೇ ಗರ್ಭಧಾರಣೆಯ ರೋಬೋಟ್ ಆವಿಷ್ಕಾರಕ್ಕೆ ಮುಂದಾಗಿದ್ದಾರೆ.

ಹೊಟ್ಟೆಯೊಳಗೆ ಗರ್ಭಧಾರಣೆಗೆ ತಂತ್ರಜ್ಞಾನ

ವಿಜ್ಞಾನಿ ಡಾ.ಜಾಂಗ್​ ಕಿಫೆಂಗ್ ನೇತೃತ್ವದ ಗುವಾಂಗ್​ಝೌ ಮೂಲದ ಕೈವಾ ಟೆಕ್ನಾಲಜಿ ಇಂಥದ್ದೊಂದು ಯೋಜನೆಗೆ ಕೈ ಹಾಕಿದೆ. ಹುಮನಾಯ್ಡ್ ರೋಬೋಟ್​ನ ಹೊಟ್ಟೆಯೊಳಗೆ ಗರ್ಭಧಾರಣೆಗೆ ತಂತ್ರಜ್ಞಾನ ಸಿದ್ಧವಾಗುತ್ತಿದೆ ಎಂಬ ಮಾಹಿತಿಯನ್ನು ವಿಜ್ಞಾನಿ ಡಾ.ಜಾಂಗ್ ನೀಡಿದ್ದಾರೆ.

ರೊಬೊಟ್​ನ ಕೃತಕ ಗರ್ಭದಲ್ಲಿ ಕೃತಕ ಆಮ್ನಿಯೊಟಿಕ್ ದ್ರವದಲ್ಲಿ ಭ್ರೂಣ ಸಿದ್ಧವಾಗಲಿದೆ. ರೋಬೋಟ್ ನ ಹೊಟ್ಟೆಯಲ್ಲಿ ಗರ್ಭಾಶಯದಂತಹ ವಾತಾವರಣ ಸೃಷ್ಟಿಸಲಾಗುತ್ತಿದೆ. ಇದು ಭ್ರೂಣವನ್ನು ಬಾಹ್ಯ ಆಘಾತಗಳಿಂದ ರಕ್ಷಿಸುವ ದ್ರವವಾಗಿದೆ. ಭ್ರೂಣಕ್ಕೆ ಸ್ಥಿರ ತಾಪಮಾನ ನೀಡಿ, ಅದರ ಬೆಳವಣಿಗೆಗೂ ಸಹಾಯ ಮಾಡುತ್ತದೆ. ರೊಬೊಟ್​​ ಗರ್ಭಾಶಯಕ್ಕೆ ಪೋಷಕಾಂಶ ಮತ್ತು ಆಮ್ಲಜನಕವನ್ನು ಹೊಕ್ಕುಳಬಳ್ಳಿಯಂತೆ ಕೊಳವೆಯ ಮೂಲಕ ಪೂರೈಸಲಾಗುತ್ತದೆ ಅಂತೆ.

ಬೀಜಿಂಗ್​ನಲ್ಲಿ ನಡೆದ ವಿಶ್ವ ರೋಬೋಟ್​ನ​ ಸಮ್ಮೇಳನದಲ್ಲಿ ಮಾಹಿತಿ ನೀಡಿರುವ ವಿಜ್ಞಾನಿ ಡಾ.ಜಾಂಗ್, 2026ರ ವೇಳೆಗೆ ಮೂಲ ಮಾದರಿ ಬಿಡುಗಡೆ ಮಾಡುತ್ತೇವೆ ಅಂತ ಘೋಷಿಸಿದ್ದಾರೆ. ಇದಕ್ಕೆ ಬೆಲೆಯೂ ನಿಗದಿ ಮಾಡಿದ್ದಾರೆ. ಇದರ ಬೆಲೆ 100,000 ಯುವಾನ್ ಅಂದರೆ 12 ಲಕ್ಷ ರೂಪಾಯಿ ಇರಲಿದೆ.

ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಚೀನಾದಲ್ಲಿ ಇದೀಗ ಜನಸಂಖ್ಯೆ ಕುಗ್ಗುವ ಆತಂಕವೂ ಎದುರಾಗಿದೆ. ಚೀನಾದಲ್ಲಿ ಇತ್ತೀಚೆಗೆ ಬಂಜೆತನದ ಪ್ರಮಾಣವೂ ಹೆಚ್ಚುತ್ತಿದೆ. ಕೃತಕ ಗರ್ಭಾಶಯ ತಂತ್ರಜ್ಞಾನ ಬಂಜೆತನ ಹೊಂದಿರುವ ದಂಪತಿಗೆ ಭರವಸೆ ಹುಟ್ಟಿಸುತ್ತಿದೆ. ಇದು ಸಂತಾನೋತ್ಪತ್ತಿಗೆ ಸಹಾಯ ಮಾಡಬಹುದಾದರೂ ಈ ತಂತ್ರಜ್ಞಾನ ನೈತಿಕ ಪರಿಣಾಮದ ಕುರಿತು ಚರ್ಚೆ ಹುಟ್ಟು ಹಾಕಿದೆ. ಭ್ರೂಣ-ತಾಯಿಯ ಸಂಬಂಧಗಳು, ಅದರಿಂದ ಜನಿಸುವ ಮಕ್ಕಳ ಮನೋವಿಜ್ಞಾನದ ಬಗ್ಗೆ ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!