ಮಗುವಿಗೆ ಜನ್ಮ ನೀಡಲಿವೆ ರೋಬೋಟ್ ಗಳು !

ಪುರುಷನ ಸಂಪರ್ಕವಿಲ್ಲದೇ ಐವಿಎಫ್ ಮೂಲಕ ಸಂತಾನೋತ್ಪತ್ತಿ ಸಾಧಿಸಿದ ವಿಜ್ಞಾನಿಗಳಿಗೆ ಈಗ ತಾಯಂದಿರ ಅಗತ್ಯವೇ ಇಲ್ಲದೇ ಮಗು ಹುಟ್ಟಿಸಲು ಮುಂದಾಗಿದ್ದಾರೆ. ಇನ್ನು ಮುಂದೆ ತಾಯಂದಿರಿಂದ ಅಲ್ಲ, ಬದಲಾಗಿ ಯಂತ್ರಗಳಿಂದ ಜನಿಸುವ ಜಗತ್ತು ಕಲ್ಪಿಸಿಕೊಳ್ಳಿ. ಚೀನಿ ವಿಜ್ಞಾನಿಗಳು ಮಹಿಳೆಯ ಸಹಾಯವಿಲ್ಲದೇ ಗರ್ಭಧಾರಣೆಯ ರೋಬೋಟ್ ಆವಿಷ್ಕಾರಕ್ಕೆ ಮುಂದಾಗಿದ್ದಾರೆ.

ಹೊಟ್ಟೆಯೊಳಗೆ ಗರ್ಭಧಾರಣೆಗೆ ತಂತ್ರಜ್ಞಾನ

ವಿಜ್ಞಾನಿ ಡಾ.ಜಾಂಗ್​ ಕಿಫೆಂಗ್ ನೇತೃತ್ವದ ಗುವಾಂಗ್​ಝೌ ಮೂಲದ ಕೈವಾ ಟೆಕ್ನಾಲಜಿ ಇಂಥದ್ದೊಂದು ಯೋಜನೆಗೆ ಕೈ ಹಾಕಿದೆ. ಹುಮನಾಯ್ಡ್ ರೋಬೋಟ್​ನ ಹೊಟ್ಟೆಯೊಳಗೆ ಗರ್ಭಧಾರಣೆಗೆ ತಂತ್ರಜ್ಞಾನ ಸಿದ್ಧವಾಗುತ್ತಿದೆ ಎಂಬ ಮಾಹಿತಿಯನ್ನು ವಿಜ್ಞಾನಿ ಡಾ.ಜಾಂಗ್ ನೀಡಿದ್ದಾರೆ.

ರೊಬೊಟ್​ನ ಕೃತಕ ಗರ್ಭದಲ್ಲಿ ಕೃತಕ ಆಮ್ನಿಯೊಟಿಕ್ ದ್ರವದಲ್ಲಿ ಭ್ರೂಣ ಸಿದ್ಧವಾಗಲಿದೆ. ರೋಬೋಟ್ ನ ಹೊಟ್ಟೆಯಲ್ಲಿ ಗರ್ಭಾಶಯದಂತಹ ವಾತಾವರಣ ಸೃಷ್ಟಿಸಲಾಗುತ್ತಿದೆ. ಇದು ಭ್ರೂಣವನ್ನು ಬಾಹ್ಯ ಆಘಾತಗಳಿಂದ ರಕ್ಷಿಸುವ ದ್ರವವಾಗಿದೆ. ಭ್ರೂಣಕ್ಕೆ ಸ್ಥಿರ ತಾಪಮಾನ ನೀಡಿ, ಅದರ ಬೆಳವಣಿಗೆಗೂ ಸಹಾಯ ಮಾಡುತ್ತದೆ. ರೊಬೊಟ್​​ ಗರ್ಭಾಶಯಕ್ಕೆ ಪೋಷಕಾಂಶ ಮತ್ತು ಆಮ್ಲಜನಕವನ್ನು ಹೊಕ್ಕುಳಬಳ್ಳಿಯಂತೆ ಕೊಳವೆಯ ಮೂಲಕ ಪೂರೈಸಲಾಗುತ್ತದೆ ಅಂತೆ.

ಬೀಜಿಂಗ್​ನಲ್ಲಿ ನಡೆದ ವಿಶ್ವ ರೋಬೋಟ್​ನ​ ಸಮ್ಮೇಳನದಲ್ಲಿ ಮಾಹಿತಿ ನೀಡಿರುವ ವಿಜ್ಞಾನಿ ಡಾ.ಜಾಂಗ್, 2026ರ ವೇಳೆಗೆ ಮೂಲ ಮಾದರಿ ಬಿಡುಗಡೆ ಮಾಡುತ್ತೇವೆ ಅಂತ ಘೋಷಿಸಿದ್ದಾರೆ. ಇದಕ್ಕೆ ಬೆಲೆಯೂ ನಿಗದಿ ಮಾಡಿದ್ದಾರೆ. ಇದರ ಬೆಲೆ 100,000 ಯುವಾನ್ ಅಂದರೆ 12 ಲಕ್ಷ ರೂಪಾಯಿ ಇರಲಿದೆ.

ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಚೀನಾದಲ್ಲಿ ಇದೀಗ ಜನಸಂಖ್ಯೆ ಕುಗ್ಗುವ ಆತಂಕವೂ ಎದುರಾಗಿದೆ. ಚೀನಾದಲ್ಲಿ ಇತ್ತೀಚೆಗೆ ಬಂಜೆತನದ ಪ್ರಮಾಣವೂ ಹೆಚ್ಚುತ್ತಿದೆ. ಕೃತಕ ಗರ್ಭಾಶಯ ತಂತ್ರಜ್ಞಾನ ಬಂಜೆತನ ಹೊಂದಿರುವ ದಂಪತಿಗೆ ಭರವಸೆ ಹುಟ್ಟಿಸುತ್ತಿದೆ. ಇದು ಸಂತಾನೋತ್ಪತ್ತಿಗೆ ಸಹಾಯ ಮಾಡಬಹುದಾದರೂ ಈ ತಂತ್ರಜ್ಞಾನ ನೈತಿಕ ಪರಿಣಾಮದ ಕುರಿತು ಚರ್ಚೆ ಹುಟ್ಟು ಹಾಕಿದೆ. ಭ್ರೂಣ-ತಾಯಿಯ ಸಂಬಂಧಗಳು, ಅದರಿಂದ ಜನಿಸುವ ಮಕ್ಕಳ ಮನೋವಿಜ್ಞಾನದ ಬಗ್ಗೆ ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!