ಮಗುವಿಗೆ ಜನ್ಮ ನೀಡಲಿವೆ ರೋಬೋಟ್ ಗಳು !

ಪುರುಷನ ಸಂಪರ್ಕವಿಲ್ಲದೇ ಐವಿಎಫ್ ಮೂಲಕ ಸಂತಾನೋತ್ಪತ್ತಿ ಸಾಧಿಸಿದ ವಿಜ್ಞಾನಿಗಳಿಗೆ ಈಗ ತಾಯಂದಿರ ಅಗತ್ಯವೇ ಇಲ್ಲದೇ ಮಗು ಹುಟ್ಟಿಸಲು ಮುಂದಾಗಿದ್ದಾರೆ. ಇನ್ನು ಮುಂದೆ ತಾಯಂದಿರಿಂದ ಅಲ್ಲ, ಬದಲಾಗಿ ಯಂತ್ರಗಳಿಂದ ಜನಿಸುವ ಜಗತ್ತು ಕಲ್ಪಿಸಿಕೊಳ್ಳಿ. ಚೀನಿ ವಿಜ್ಞಾನಿಗಳು ಮಹಿಳೆಯ ಸಹಾಯವಿಲ್ಲದೇ ಗರ್ಭಧಾರಣೆಯ ರೋಬೋಟ್ ಆವಿಷ್ಕಾರಕ್ಕೆ ಮುಂದಾಗಿದ್ದಾರೆ.

ಹೊಟ್ಟೆಯೊಳಗೆ ಗರ್ಭಧಾರಣೆಗೆ ತಂತ್ರಜ್ಞಾನ

ವಿಜ್ಞಾನಿ ಡಾ.ಜಾಂಗ್​ ಕಿಫೆಂಗ್ ನೇತೃತ್ವದ ಗುವಾಂಗ್​ಝೌ ಮೂಲದ ಕೈವಾ ಟೆಕ್ನಾಲಜಿ ಇಂಥದ್ದೊಂದು ಯೋಜನೆಗೆ ಕೈ ಹಾಕಿದೆ. ಹುಮನಾಯ್ಡ್ ರೋಬೋಟ್​ನ ಹೊಟ್ಟೆಯೊಳಗೆ ಗರ್ಭಧಾರಣೆಗೆ ತಂತ್ರಜ್ಞಾನ ಸಿದ್ಧವಾಗುತ್ತಿದೆ ಎಂಬ ಮಾಹಿತಿಯನ್ನು ವಿಜ್ಞಾನಿ ಡಾ.ಜಾಂಗ್ ನೀಡಿದ್ದಾರೆ.

ರೊಬೊಟ್​ನ ಕೃತಕ ಗರ್ಭದಲ್ಲಿ ಕೃತಕ ಆಮ್ನಿಯೊಟಿಕ್ ದ್ರವದಲ್ಲಿ ಭ್ರೂಣ ಸಿದ್ಧವಾಗಲಿದೆ. ರೋಬೋಟ್ ನ ಹೊಟ್ಟೆಯಲ್ಲಿ ಗರ್ಭಾಶಯದಂತಹ ವಾತಾವರಣ ಸೃಷ್ಟಿಸಲಾಗುತ್ತಿದೆ. ಇದು ಭ್ರೂಣವನ್ನು ಬಾಹ್ಯ ಆಘಾತಗಳಿಂದ ರಕ್ಷಿಸುವ ದ್ರವವಾಗಿದೆ. ಭ್ರೂಣಕ್ಕೆ ಸ್ಥಿರ ತಾಪಮಾನ ನೀಡಿ, ಅದರ ಬೆಳವಣಿಗೆಗೂ ಸಹಾಯ ಮಾಡುತ್ತದೆ. ರೊಬೊಟ್​​ ಗರ್ಭಾಶಯಕ್ಕೆ ಪೋಷಕಾಂಶ ಮತ್ತು ಆಮ್ಲಜನಕವನ್ನು ಹೊಕ್ಕುಳಬಳ್ಳಿಯಂತೆ ಕೊಳವೆಯ ಮೂಲಕ ಪೂರೈಸಲಾಗುತ್ತದೆ ಅಂತೆ.

ಬೀಜಿಂಗ್​ನಲ್ಲಿ ನಡೆದ ವಿಶ್ವ ರೋಬೋಟ್​ನ​ ಸಮ್ಮೇಳನದಲ್ಲಿ ಮಾಹಿತಿ ನೀಡಿರುವ ವಿಜ್ಞಾನಿ ಡಾ.ಜಾಂಗ್, 2026ರ ವೇಳೆಗೆ ಮೂಲ ಮಾದರಿ ಬಿಡುಗಡೆ ಮಾಡುತ್ತೇವೆ ಅಂತ ಘೋಷಿಸಿದ್ದಾರೆ. ಇದಕ್ಕೆ ಬೆಲೆಯೂ ನಿಗದಿ ಮಾಡಿದ್ದಾರೆ. ಇದರ ಬೆಲೆ 100,000 ಯುವಾನ್ ಅಂದರೆ 12 ಲಕ್ಷ ರೂಪಾಯಿ ಇರಲಿದೆ.

ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಚೀನಾದಲ್ಲಿ ಇದೀಗ ಜನಸಂಖ್ಯೆ ಕುಗ್ಗುವ ಆತಂಕವೂ ಎದುರಾಗಿದೆ. ಚೀನಾದಲ್ಲಿ ಇತ್ತೀಚೆಗೆ ಬಂಜೆತನದ ಪ್ರಮಾಣವೂ ಹೆಚ್ಚುತ್ತಿದೆ. ಕೃತಕ ಗರ್ಭಾಶಯ ತಂತ್ರಜ್ಞಾನ ಬಂಜೆತನ ಹೊಂದಿರುವ ದಂಪತಿಗೆ ಭರವಸೆ ಹುಟ್ಟಿಸುತ್ತಿದೆ. ಇದು ಸಂತಾನೋತ್ಪತ್ತಿಗೆ ಸಹಾಯ ಮಾಡಬಹುದಾದರೂ ಈ ತಂತ್ರಜ್ಞಾನ ನೈತಿಕ ಪರಿಣಾಮದ ಕುರಿತು ಚರ್ಚೆ ಹುಟ್ಟು ಹಾಕಿದೆ. ಭ್ರೂಣ-ತಾಯಿಯ ಸಂಬಂಧಗಳು, ಅದರಿಂದ ಜನಿಸುವ ಮಕ್ಕಳ ಮನೋವಿಜ್ಞಾನದ ಬಗ್ಗೆ ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!