ಬ್ರಹ್ಮಾವರ ಠಾಣೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಬಂಧನ

ಉಡುಪಿ: ಮಹೇಶ್ ಶೆಟ್ಟಿ ತಿಮರೋಡಿ ತೀವ್ರ ವಿಚಾರಣೆಯ ಹಿನ್ನೆಲೆಯಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ ಸುತ್ತ ಒಂದು ದಿನದ ಮಟ್ಟಿಗೆ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಸ್ವರೂಪಾ ಟಿಕೆ ಆದೇಶಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಹಾಗೂ ಸಾರ್ವಜನಿಕ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತ 2023 ರ ಕಲಂ 163 ರಡಿ ಪ ಅಧಿಕಾರವನ್ನು ಚಲಾಯಿಸಿ ಆ. 21, ಮಧ್ಯಾಹ್ನ 1 ಗಂಟೆಯಿಂದ ಆ. 22 ಮಧ್ಯಾಹ್ನ 1 ಗಂಟೆಯವರೆಗೆ ಬ್ರಹ್ಮಾವರ ಪೊಲೀಸ್ ಠಾಣೆ ಸರಹದ್ದಿನ 500 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಇದೆ.

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಉಜಿರೆಯಲ್ಲಿ ಬಂಧಿಸಿ ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆ ತಂದಿದ್ದು, ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆದು ತರಲಾಗಿದೆ. ಠಾಣೆಯ ಸುತ್ತಲಿನ 500 ಮೀಟರ್ ವ್ಯಾಪ್ತಿಯಲ್ಲಿ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2023ರ ಕಲಂ 163 ರನ್ವಯ ನಿಷೇಧಾಜ್ಞೆ ಹೊರಡಿಸಲಾಗಿದೆ ಎಂದು ಡಿಸಿ ತಿಳಿಸಿದ್ದಾರೆ.


ನಿಷೇಧಾಜ್ಞೆಯ ಆದೇಶವನ್ನು ಹೊರಡಿಸುವಂತೆ ಕೋರಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರು ವರದಿಯನ್ನು ಸಲ್ಲಿಸಿದ್ದಾರೆ. ಉಡುಪಿ ಜಿಲ್ಲೆಯ ಪ್ರಸಕ್ತ ವಿದ್ಯಮಾನಗಳನ್ನು ಗಣನೆಗೆ ತೆಗೆದುಕೊಂಡು, ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗೃತಾ ಕ್ರಮವನ್ನು ತೆಗೆದುಕೊಳ್ಳುವುದು ಅತೀ ಅವಶ್ಯಕವಾಗಿರುತ್ತದೆ. ಈ ಹಿನ್ನಲೆಯಲ್ಲಿ ಜಿಲ್ಲೆಯ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಹಾಗೂ ಸಾರ್ವಜನಿಕ ಶಾಂತಿಯನ್ನು ಕಾಪಾಡುವ ನಿಟ್ಟಿನಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಎಡೆಮಾಡಿಕೊಡದಂತೆ ಸೂಕ್ತ ಮುಂಜಾಗೃತಾ ಕ್ರಮ ತೆಗೆದುಕೊಳ್ಳಲು ಪೊಲೀಸ್ ಅಧೀಕ್ಷಕರು ಉಡುಪಿ ಜಿಲ್ಲೆ ಉಡುಪಿ ಇವರ ವರದಿಯನ್ನು ಆಧರಿಸಿ ಮುಂಜಾಗೃತ ಕ್ರಮವಾಗಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.‌ ಭಾರತೀಯ ನಾಗರಿಕ ಸುರಕ್ಷಾ ಸಂಹಿತ 2023 ರ ಕಲಂ 163 ರಡಿ ಮ ಅಧಿಕಾರವನ್ನು ಚಲಾಯಿಸಿ ಆದೇಶಿಸಿದ್ದಾರೆ.

ಧರ್ಮಸ್ಥಳದ ತಿಮರೋಡಿಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿಯನ್ನು ಬಂಧಿಸಿರುವ ಪೊಲೀಸರು ಬಿಗುಬಂದೋಬಸ್ತ್‌ನಲ್ಲಿ ಮಧ್ಯಾಹ್ನ 1.20 ಕ್ಕೆ ಪೊಲೀಸರು ಠಾಣೆಗೆ ಕರೆದು ತಂದಿದ್ದಾರೆ. ಬ್ರಹ್ಮಾವರ ಪೊಲೀಸ್ ಠಾಣೆಗೆ ಆಗಮಿಸಿದ ವಕೀಲರ ತಂಡವು ಭದ್ರತಾ ಜಾಮೀನಿನ ಮೇಲೆ ತಿಮರೋಡಿ ಬಿಡುಗಡೆಗೆ ಕ್ರಮಕ್ಕೆ ಸಿದ್ಧತೆ ನಡೆಸಿದೆ. ತಿಮ್ಮರೊಡಿ ಜತೆ ಗಿರೀಶ್ ಮಟ್ಟಣ್ಣನವರ್ ಆಗಮಿಸಿದ್ದು, ಠಾಣೆಗೆ ಆಗಮಿಸುವ ಮುನ್ನವೇ ಮಹೇಶ್ ಶೆಟ್ಟಿ ಪರ ವಕೀಲರು ಠಾಣೆಯಲ್ಲಿದ್ದರು. ತಿಮರೋಡಿಯನ್ನು ಠಾಣೆಯಲ್ಲಿ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ‌.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!