ಚಿತ್ರದುರ್ಗದಲ್ಲಿ ಕಾಂಗ್ರೆಸ್​ ಶಾಸಕ ಕೆಸಿ ವೀರೇಂದ್ರ ಮನೆ ಮೇಲೆ ಇ.ಡಿ ದಾಳಿ

ಚಿತ್ರದುರ್ಗ: ಕಾಂಗ್ರೆಸ್​ ಶಾಸಕ ಕೆಸಿ ವೀರೇಂದ್ರಗೆ ಬೆಳ್ಳಂಬೆಳಗ್ಗೆಯೇ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಕೆಸಿ ವೀರೇಂದ್ರ ಹಾಗೂ ಅವರ ಸಹೋದರರ, ಚಳ್ಳಕೆರೆ ಪಟ್ಟಣದಲ್ಲಿರುವ 4 ನಿವಾಸಗಳ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಮಡುತ್ತಿದ್ದಾರೆ. ಕೆ.ಸಿ.ನಾಗರಾಜ, ಕೆ.ಸಿ.ತಿಪ್ಪೇಸ್ವಾಮಿ ನಿವಾಸದಲ್ಲಿ ಇಡಿಯಿಂದ ಪರಿಶೀಲನೆ ನಡೆಯುತ್ತಿದೆ. ಖಾಸಗಿ ವಾಹನಗಳಲ್ಲಿ ಆಗಮಿಸಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

 

20ಕ್ಕೂ ಹೆಚ್ಚು ವಾಹನದಲ್ಲಿ ಬಂದಿರುವ 40ಕ್ಕೂ ಹೆಚ್ಚು ಇಡಿ ಅಧಿಕಾರಿಗಳು ಮನೆಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಹಿಂದೆ 2016ರ ಡಿಸೆಂಬರ್ 11 ರಂದು ಕೆಸಿ ವೀರೇಂದ್ರ ಮನೆ ಮೇಲೆ ಐಟಿ ದಾಳಿ ನಡೆದಿತ್ತು. ಆಗ ವಿರೇಂದ್ರ ಮನೆಯ ಬಾತ್ ರೂಂನಲ್ಲಿ 5 ಕೋಟಿ ರೂಪಾಯಿಗೂ ಹೆಚ್ಚು ಹಣ, 30 ಕೆಜಿಗೂ ಹೆಚ್ಚು ಚಿನ್ನ ಪತ್ತೆ ಆಗಿತ್ತು.

ಕೆಸಿ ವಿರೇಂದ್ರ ಒಡೆತನದ ಕಂಪನಿಗಳಿಂದ ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ ಕೇಳಿಬಂದಿತ್ತು. ವಿರೇಂದ್ರಗೆ ಸೇರಿದ ರತ್ನ ಗೋಲ್ಡ್, ರತ್ನ ಮಲ್ಟಿ ಸೋರ್ಸ್, ಪಪ್ಪಿ ಟೆಕ್ನಾಲಜಿ, ರತ್ನ ಗೇಮಿಂಗ್ ಸೊಲ್ಯೂಷನ್ಸ್ ಸೇರಿ ಇತರೆ ಕಂಪನಿಗಳಿಂದ ಅಕ್ರಮ ಆರೋಪ ಹಿನ್ನೆಲೆ ದಾಳಿ ನಡೆದಿದೆ. ಒಟ್ಟಾರೆಯಾಗಿ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ, ಬೆಂಗಳೂರು, ಗೋವಾ ಸೇರಿ 17 ಕಡೆ ದಾಳಿ ನಡೆದಿದೆ.

ಸದ್ಯ ಶಾಸಕ ಕೆಸಿ ವಿರೇಂದ್ರ ಹೊರರಾಜ್ಯದಲ್ಲಿದ್ದಾರೆ. ಇದೀಗ ಇಡಿ ದಾಳಿಯಿಂದ 2016 ರ ಐಟಿ ದಾಳಿ ವೇಳೆ ಪತ್ತೆಯಾದಂತೆ ಮತ್ತೊಂದು ಅಕ್ರಮ ಬಯಲಾಗಲಿದೆಯೇ ಎಂಬ ಪ್ರಶ್ನೆ ಮೂಡಿದೆ

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!