ಕೇರಳದಲ್ಲಿ ಮ್ಯಾಚ್ ಆಡಲಿರುವ ಲಿಯೋನೆಲ್ ಮೆಸ್ಸಿ ಟೀಮ್

ವರ್ಲ್ಡ್​ ಫುಟ್​ಬಾಲ್ ಸ್ಟಾರ್ ಲಿಯೋನೆಲ್ ಮೆಸ್ಸಿ ಹಾಗೂ ಅರ್ಜೆಂಟೀನಾ ತಂಡದ ಫುಟ್​ಬಾಲ್ ಆಟಗಾರರು ಅಕ್ಟೋಬರ್​ನಲ್ಲಿ ಕೇರಳಕ್ಕೆ ಭೇಟಿ ನೀಡಲಿದ್ದಾರೆ ಎಂದು ಅರ್ಜೆಂಟೀನಾದ ಫುಟ್​ಬಾಲ್ ಅಸೋಸಿಯೇಷನ್ (ಎಎಫ್​ಎ)​ ಅಧಿಕೃತವಾಗಿ ಮಾಹಿತಿ ನೀಡಿದೆ.

ಫುಟ್​ಬಾಲ್ ಐಕಾನ್​ ಲಿಯೋನೆಲ್ ಮೆಸ್ಸಿ ಹಾಗೂ ಅರ್ಜೆಂಟೀನಾ ತಂಡದ ಫುಟ್​ಬಾಲ್ ಆಟಗಾರರು ನವೆಂಬರ್​ 10 ರಿಂದ 18ರ ವರೆಗೆ ಭಾರತದ ಪ್ರವಾಸದಲ್ಲಿ ಇರುತ್ತಾರೆ. ಈ ವೇಳೆ ಕೇರಳ ಸರ್ಕಾರ ಹಾಗೂ ರಿಪೋರ್ಟರ್ ಬ್ರಾಡ್‌ಕಾಸ್ಟಿಂಗ್ ಕಂಪನಿ ಪ್ರೈವೇಟ್ ಲಿಮಿಟೆಡ್‌ನ ಸಹಭಾಗಿತ್ವದಲ್ಲಿ ಫುಟ್​ಬಾಲ್ ಪಂದ್ಯವನ್ನು ಆಯೋಜನೆ ಮಾಡಲಾಗುತ್ತದೆ. ತಿರುವನಂತಪುರದ ಗ್ರೀನ್‌ಫೀಲ್ಡ್ ಸ್ಟೇಡಿಯಂನಲ್ಲಿ ನಡೆಯುವ ಈ ಮಹತ್ವದ ಪಂದ್ಯದಲ್ಲಿ ಲಿಯೋನೆಲ್ ಮೆಸ್ಸಿ ಹಾಗೂ ಅರ್ಜೆಂಟೀನಾ ತಂಡದ ಫುಟ್​ಬಾಲ್ ಆಟಗಾರರು ಅಖಾಡಕ್ಕೆ ಇಳಿಯಲಿದ್ದಾರೆ. ಇದು ಭಾರತದ ಫುಫ್​ಬಾಲ್ ಅಭಿಮಾನಿಗಳಿಗೆ ಐತಿಹಾಸಿಕ ಕ್ಷಣವಾಗಿರಲಿದೆ ಎಂದು ಹೇಳಲಾಗಿದೆ.

ಲಿಯೋನೆಲ್ ಮೆಸ್ಸಿ ಅವರು ಕೇರಳಕ್ಕೆ ಭೇಟಿ ನೀಡುತ್ತಾರೋ, ಇಲ್ವೋ ಎನ್ನುವ ಅನುಮಾನವಿತ್ತು. ಇನ್ನು ಫಿಫಾ ಟ್ರೋಫಿಯಲ್ಲಿ ಅರ್ಜೆಂಟೀನಾ ಟೀಮ್ ಪಾಲ್ಗೊಳ್ಳುವುದರಿಂದ ಕೇರಳಕ್ಕೆ ಪ್ರಯಾಣಿಸುವುದಿಲ್ಲ ಎನ್ನಲಾಗಿತ್ತು. ಆದರೆ ರಿಪೋರ್ಟರ್ ಟಿವಿಯ ವ್ಯವಸ್ಥಾಪಕ ನಿರ್ದೇಶಕ, ಸಂಪಾದಕ ಆಂಟೊ ಆಗಸ್ಟೀನ್ ಅವರು ಇದನ್ನ ತಳ್ಳಿ ಹಾಕಿದ್ದರು. ಅದರಂತೆ ಇದೀಗ ಎಎಫ್​ಎ ಅಧಿಕೃತವಾಗಿ ಮಾಹಿತಿ ನೀಡಿದ್ದರಿಂದ ಲಿಯೋನೆಲ್ ಮೆಸ್ಸಿ ಹಾಗೂ ಅರ್ಜೆಂಟೀನಾ ಟೀಮ್ ಕೇರಳಕ್ಕೆ ಭೇಟಿ ನೀಡುವುದಷ್ಟೇ ಅಲ್ಲ, ಫುಟ್​ಬಾಲ್ ಪಂದ್ಯ ಕೂಡ ಆಡಲಿದೆ ಎನ್ನುವುದು ಅಭಿಮಾನಿಗಳಿಗೆ ಸಂತಸವನ್ನು ಮತ್ತಷ್ಟು ಹೆಚ್ಚು ಮಾಡಿದೆ.

2022ರಲ್ಲಿ ಕತಾರ್​ನಲ್ಲಿ ನಡೆದಂತಹ ವಿಶ್ವಕಪ್​ ಫುಟ್​ಬಾಲ್​ ಟೂರ್ನಿಯಲ್ಲಿ ಲಿಯೋನೆಲ್ ಮೆಸ್ಸಿ ಹಾಗೂ ಅವರ ಅರ್ಜೆಂಟೀನಾ ಟೀಮ್​ಗೆ ಕೇರಳಿಗರು ದೊಡ್ಡ ಮಟ್ಟದಲ್ಲಿ ಬೆಂಬಲ ವ್ಯಕ್ತಪಡಿಸಿದ್ದರು. ಅಲ್ಲದೇ ಈ ಟೂರ್ನಿಯಲ್ಲಿ ಅರ್ಜೆಂಟೀನಾ ವರ್ಲ್ಡ್​ಕಪ್​ ಗೆದ್ದು ಇತಿಹಾಸ ನಿರ್ಮಿಸಿತ್ತು. ಈ ಕಾರಣದಿಂದಲೇ ಅವರು ಭೇಟಿ ನೀಡುತ್ತಿದ್ದಾರೆ ಎನ್ನಲಾಗಿದೆ. ಆ ತಂಡ ಭೇಟಿ ನೀಡುವುದನ್ನು ಈ ಹಿಂದೆಯೇ ಕೇರಳದ ಕ್ರೀಡಾ ಸಚಿವ ವಿ ಅಬ್ದುರಹಿಮಾನ್ ಅವರು ಸ್ಪಷ್ಟ ಪಡಿಸಿದ್ದರು.

 

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!