ಮುಡಾ ಅಧ್ಯಕ್ಷರು, ಪ್ರಾಧಿಕಾರದ ಆಯುಕ್ತರು ಹಾಗೂ ಎಲ್ಲಾ ಶಾಖಾ ಮುಖ್ಯಸ್ಥರೊಡನೆ ಸಭೆಯನ್ನು ನಡೆಸಿ ಮುಡಾದಿಂದ ಈ ಹಿಂದೆ ಹಂಚಿಕೆಯಾಗಿರುವ ನಾಗರೀಕ ಸೌಕರ್ಯ ನಿವೇಶನಗಳನ್ನು ಹಂಚಿಕೆಯಾದ ಉದ್ದೇಶಕ್ಕೆ ಬಳಸದೇ ನಿಯಮ ಉಲ್ಲಂಘಿಸಿ ಮಳಿಗೆಗಳನ್ನು ನಿರ್ಮಿಸಿ ಬಾಡಿಗೆ ನೀಡಿರುವ ಬಗ್ಗೆ ಅನೇಕ ದೂರುಗಳು ಬಂದಿವೆ. ಹೀಗಾಗಿ ನಿಯಮ ಉಲ್ಲಂಘನೆಯಾಗಿರುವ ಸಿಎ ನಿವೇಶನ ಮಾಹಿತಿ ಸಂಗ್ರಹಣೆಗೆ ಸೂಚನೆ ನೀಡಲಾಗಿದೆ ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಮರೀಗೌಡ ತಿಳಿಸಿದ್ದಾರೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಈ ಹಿಂದೆ ಹಂಚಿಕೆಯಾಗಿರುವ ನಾಗರೀಕ ಸೌಕರ್ಯ ನಿವೇಶನಗಳನ್ನು ಹಂಚಿಕೆಯಾದ ಉದ್ದೇಶಕ್ಕೆ ಬಳಸದೇ ನಿಯಮ ಉಲ್ಲಂಘಿಸಿ ಮಳಿಗೆಗಳನ್ನು ನಿರ್ಮಿಸಿ ಬಾಡಿಗೆ ನೀಡಿರುವ ಬಗ್ಗೆ ಅನೇಕ ದೂರುಗಳು ಬಂದಿರುವುದನ್ನು ಗಂಭಿರವಾಗಿ ಪರಿಗಣಿಸಿದೆ. ಪ್ರಾಧಿಕಾರದಿಂದ ಹಂಚಿಕೆಯಾಗಿರುವ ನಾಗರೀಕ ಸೌಲಭ್ಯ ನಿವೇಶನಗಳ ವಿವರಗಳನ್ನ ಪರಿಶೀಲಿಸಿ ವರದಿ ನೀಡಬೇಕು. ಒಟ್ಟು ನಾಗರೀಕ ಸೌಕರ್ಯ ನಿವೇಶನಗಳ ಸಂಖ್ಯೆ, ಸಾರ್ವಜನಿಕರಿಂದ ಅರ್ಜಿ ಸ್ವೀಕರಿಸಿರುವ ವಿವರ, ನ್ಯಾಯಾಲಯದಲ್ಲಿ ನಾಗರೀಕ ಸೌಕರ್ಯ ನಿವೇಶನ ಸಂಬಂಧಿಸಿದಂತೆ ಪ್ರಕರಣಗಳ ವಿವರ, ನಿಯಮ ಉಲ್ಲಂಘಿಸಿರುವ ನಾಗರೀಕ ಸೌಕರ್ಯ ನಿವೇಶನಗಳ ವಿವರದ ಬಗ್ಗೆ ವರದಿ ನೀಡುವಂತೆ ಕೆ.ಮರೀಗೌಡ ಸೂಚಿಸಿದ್ದಾರೆ.





