ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕ ಬೈಕ್ ಟ್ಯಾಕ್ಸಿ ಚಾಲಕರು.

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯನ್ನು ದೆಹಲಿಯಲ್ಲಿ ಭೇಟಿಯಾದ ಕರ್ನಾಟಕ ಬೈಕ್ ಟ್ಯಾಕ್ಸಿ ಚಾಲಕರು ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ಸಂಬಂಧ ಸ್ಪಷ್ಟ ನೀತಿ ರೂಪಿಸಲು ಮಧ್ಯ ಪ್ರವೇಶಿಸಬೇಕು ಎಂದು ಬೇಡಿಕೆ ಸಲ್ಲಿಸಿದ್ದಾರೆ. ಕೂಡಲೇ ನೀತಿ ನಿರೂಪಣೆ ರಚಿಸಲು ಒತ್ತಾಯ ಮಾಡಿದ್ದು, ಬಡತನ ಕಾಯುವುದಿಲ್ಲ ಎಂದಿದ್ದಾರೆ. ತಾವು ಮಧ್ಯಪ್ರವೇಶಿಸುವುದಾಗಿ ಭರವಸೆ ನೀಡಿರುವ ರಾಹುಲ್ ಗಾಂಧಿ ಸಹಾಯ ಮಾಡುವ ಆಶ್ವಾಸನೆ ನೀಡಿದ್ದಾರೆ.

ನವದೆಹಲಿಯಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ ನಂತರ ಬೈಕ್ ಟ್ಯಾಕ್ಸಿ ಚಾಲಕರು ತಮ್ಮ ಸಮಸ್ಯೆಗೆ ಪರಿಹಾರ ಸಿಗುವ ಭರವಸೆಯಲ್ಲಿದ್ದಾರೆ. ಕರ್ನಾಟಕ ಬೈಕ್ ಟ್ಯಾಕ್ಸಿ ಕಲ್ಯಾಣ ಸಂಘದ ಪ್ರತಿನಿಧಿಗಳು ಇಂದು ನವದೆಹಲಿಯಲ್ಲಿ ಪ್ರತಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ, ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ಸಂಬಂಧ ಸ್ಪಷ್ಟ ನೀತಿ ರೂಪಿಸಲು ಮಧ್ಯಪ್ರವೇಶಿಸಬೇಕು ಎಂದು ಬೇಡಿಕೆ ಸಲ್ಲಿಸಿದ್ದಾರೆ. 6 ಲಕ್ಷಕ್ಕೂ ಅಧಿಕ ಬೈಕ್ ಟ್ಯಾಕ್ಸಿ ಚಾಲಕರು ಮತ್ತು ಅವರ ಕುಟುಂಬಗಳನ್ನು ಪ್ರತಿನಿಧಿಸುವ ಸಂಘದ ಪ್ರತಿನಿಧಿಗಳ ತಂಡ ಬೈಕ್ ಟ್ಯಾಕ್ಸಿ ಸೇವೆಯ ಸ್ಥಗಿತದಿಂದ ಉಂಟಾಗಿರುವ ಗಂಭೀರ ಜೀವನೋಪಾಯ ಸಂಕಷ್ಟಗಳನ್ನು ವಿವರಿಸಿದೆ.

 

ನನ್ನ ಸಿನಿಮಾ ಸೋಲಲು ಅವನೇ ಕಾರಣ ಯಶ್ ತಾಯಿ ಪುಷ್ಪ ದೂರು.

ಬೈಕ್ ಟ್ಯಾಕ್ಸಿ ಚಾಲಕರ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ರಾಹುಲ್ ಗಾಂಧಿ, ಅವರಿಗೆ ಬೆಂಬಲದ ಭರವಸೆ ನೀಡಿದ್ದಾರೆ. ಇದು ಜೀವನೋಪಾಯ ಮತ್ತು ಗೌರವಕ್ಕಾಗಿ ಹೋರಾಡುತ್ತಿರುವ ಸಾವಿರಾರು ಯುವ ಅಸಂಘಟಿತ ಕಾರ್ಮಿಕರಿಗೆ ಹೊಸ ಭರವಸೆ ಮೂಡಿದೆ. ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ನಿಷೇಧದಿಂದ ಸಂಕಷ್ಟ ಎದುರಿಸುತ್ತಿರುವ ಕರ್ನಾಟಕದ ಲಕ್ಷಾಂತರ ಅಸಂಘಟಿತ ಕಾರ್ಮಿಕರ ಧ್ವನಿಯನ್ನು ಪ್ರತಿನಿಧಿಸುವ ಕರ್ನಾಟಕ ಬೈಕ್ ಟ್ಯಾಕ್ಸಿ ಕಲ್ಯಾಣ ಸಂಘಕ್ಕೆ ದೊಡ್ಡ ಬೆಂಬಲ ಸಿಕ್ಕಿದಂತಾಗಿದೆ. ಪ್ರತಿಪಕ್ಷದ ನಾಯಕ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರನ್ನು ಇಂದು ನವದೆಹಲಿಯಲ್ಲಿ ಭೇಟಿ ಮಾಡಿದ ಸಂಘದ ಸದಸ್ಯರು, ಬೈಕ್ ಟ್ಯಾಕ್ಸಿ ನಿಷೇಧದಿಂದ ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಚಾಲಕರು ಎದುರಿಸುತ್ತಿರುವ ಜೀವನೋಪಾಯ ಸಂಕಷ್ಟವನ್ನು ವಿವರಿಸಿ, ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ನಿಟ್ಟಿನಲ್ಲಿ ಸ್ಪಷ್ಟ ನೀತಿ ರೂಪಿಸಲು ಕೂಡಲೇ ಮಧ್ಯಪ್ರವೇಶಿಸಬೇಕು ಎಂದು ವಿನಂತಿಸಿದ್ದಾರೆ.

ಸಂಘದ ಪ್ರತಿನಿಧಿಗಳ ಮಾತುಗಳನ್ನು ಶ್ರದ್ಧೆಯಿಂದ ಕೇಳಿರುವ ರಾಹುಲ್ ಗಾಂಧಿ, ಜೀವನ ನಡೆಸಲು ಹೋರಾಡುತ್ತಿರುವ ಯುವ ಕಾರ್ಮಿಕರ ಪರ ನಿಲ್ಲುವುದಾಗಿ ಭರವಸೆ ನೀಡಿದ್ದಾರೆ. ಅವರ ಈ ಭರವಸೆಯಿಂದ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತದಿಂದ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ರಾಜ್ಯದ 6 ಲಕ್ಷಕ್ಕೂ ಹೆಚ್ಚು ಚಾಲಕರು ಮತ್ತು ಅವರ ಕುಟುಂಬಗಳಿಗೆ ಹೊಸ ಭರವಸೆ ಮೂಡಿದಂತಾಗಿದೆ.

ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಕರ್ನಾಟಕ ಬೈಕ್ ಟ್ಯಾಕ್ಸಿ ಕಲ್ಯಾಣ ಸಂಘವು, ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ಸಂಬಂಧ ಸಮರ್ಪಕ ನೀತಿಯನ್ನು ರೂಪಿಸುವಂತೆ ಮನವಿ ಮಾಡಿಕೊಂಡಿದೆ. ನೀತಿ ರೂಪಿಸುವವರೆಗೆ, ಕಾರ್ಮಿಕರ ವಿರುದ್ಧ ದಂಡಾತ್ಮಕ ಕ್ರಮ ಕೈಗೊಳ್ಳದೆ ತಕ್ಷಣ ಸೇವೆ ಪುನರಾರಂಭಿಸಲು ಅವಕಾಶ ನೀಡಬೇಕೆಂದು ಒತ್ತಾಯಿಸಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!