ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅರೆಸ್ಟ್!

ಚಿತ್ರದುರ್ಗ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ (Veerendra Puppy) ಮನೆ ಮೇಲೆ ಇ.ಡಿ ದಾಳಿ ನಡೆಸಿದ ಸಂದರ್ಭ ಕಂತೆ ಕಂತೆ ಹಣ, ಚಿನ್ನ ಹಾಗೂ ಬೆಳ್ಳಿ ಪತ್ತೆಯಾದ ಹಿನ್ನೆಲೆ ವೀರೇಂದ್ರ ಪಪ್ಪಿಯವರನ್ನು ಸಿಕ್ಕಿಂನ ಗ್ಯಾಂಗ್‌ಟಕ್‌ನಲ್ಲಿ ಬಂಧಿಸಲಾಗಿದೆ.

ಈಗಾಗಲೇ ವೀರೇಂದ್ರ ಪಪ್ಪಿಯವರನ್ನು ಅರೆಸ್ಟ್ ಮಾಡಿ ಕೋರ್ಟ್ಗೆ ಹಾಜರುಪಡಿಸಿರುವ ಇ.ಡಿ ಟ್ರಾನ್ಸಿಟ್ ವಾರೆಂಟ್ ಮೇಲೆ ಬೆಂಗಳೂರು ಕೋರ್ಟ್ಗೆ ಹಾಜರುಪಡಿಸಲಿದ್ದಾರೆ. ಇದನ್ನೂ ಓದಿ: ಗೇಮಿಂಗ್ ಆ್ಯಪ್‌ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ; `ಕೈʼ ಶಾಸಕ ವೀರೇಂದ್ರ ಪಪ್ಪಿ ಸಿಕ್ಕಿಂನಲ್ಲಿ ED ವಶಕ್ಕೆ

ಅಕ್ರಮ ಆನ್‌ಲೈನ್ ಮತ್ತು ಆಫ್‌ಲೈನ್ ಬೆಟ್ಟಿಂಗ್‌ಗೆ ಸಂಬಂಧಿಸಿದಂತೆ ಶುಕ್ರವಾರ ಮುಂಜಾನೆ ಚಿತ್ರದುರ್ಗದ ಕಾಂಗ್ರೆಸ್ ಶಾಸನ ವೀರೇಂದ್ರ ಪಪ್ಪಿ ಮತ್ತು ಇತರರ ಮೇಲೆ ಒಟ್ಟು 30 ಸ್ಥಳಗಳಲ್ಲಿ ದಾಳಿ ನಡೆಸಿ ಇ.ಡಿ ದಾಖಲೆ ಪರಿಶೀಲನೆ ಮಾಡಿದೆ. ಈ ವೇಳೆ 12 ಕೋಟಿ ನಗದು, 1 ಕೋಟಿ ವಿದೇಶಿ ಹಣ, 6 ಕೋಟಿ ಮೌಲ್ಯದ ಚಿನ್ನ, 10 ಕೆಜಿ ಬೆಳ್ಳಿ, 17 ಬ್ಯಾಂಕ್ ಖಾತೆ ಹಾಗೂ 2 ಬ್ಯಾಂಕ್ ಲಾಕರ್‌ಗಳನ್ನು ಇ.ಡಿ ಸೀಜ್ ಮಾಡಿದೆ.

ಚಿತ್ರದುರ್ಗ ಜಿಲ್ಲೆಯಾದ್ಯಂತ 6, ಬೆಂಗಳೂರು ನಗರ 10, ಜೋಧ್‌ಪುರ 3, ಹುಬ್ಬಳ್ಳಿ 1, ಮುಂಬೈ 2 ಮತ್ತು ಗೋವಾದಲ್ಲಿರುವ ಪಪ್ಪೀಸ್ ಕ್ಯಾಸಿನೊ ಗೋಲ್ಡ್, ಓಷನ್ ರಿವರ್ಸ್ ಕ್ಯಾಸಿನೊ, ಪಪ್ಪೀಸ್ ಕ್ಯಾಸಿನೊ ಪ್ರೈಡ್, ಓಷನ್ 7 ಕ್ಯಾಸಿನೊ, ಬಿಗ್ ಡ್ಯಾಡಿ ಕ್ಯಾಸಿನೊಗಳ ಮೇಲೆ ದಾಳಿ ನಡೆಸಲಾಗಿದೆ. ವೀರೇಂದ್ರ ಪಪ್ಪಿ ಕಿಂಗ್ 567, ರಾಜ 567, ಪಪ್ಪೀಸ್ 003, ರತ್ನ ಗೇಮಿಂಗ್ ಇತ್ಯಾದಿಗಳ ಹೆಸರಿನಲ್ಲಿ ಹಲವಾರು ಆನ್‌ಲೈನ್ ಬೆಟ್ಟಿಂಗ್ ಸೈಟ್‌ಗಳನ್ನು ನಡೆಸುತ್ತಿದ್ದಾರೆ.

ವೀರೇಂದ್ರ ಪಪಿ ಸಹೋದರ ಕೆಸಿ ತಿಪ್ಪೇಸ್ವಾಮಿ ದುಬೈನಿಂದ ಡೈಮಂಡ್ ಸಾಫ್ಟ್ಟೆಕ್, ಟಿಆರ್‌ಎಸ್ ಟೆಕ್ನಾಲಜೀಸ್, ಪ್ರೈಮ್ 9 ಟೆಕ್ನಾಲಜೀಸ್ ಎಂಬ 3 ವ್ಯವಹಾರ ಸಂಸ್ಥೆಗಳನ್ನು ನಿರ್ವಹಿಸುತ್ತಿದ್ದಾರೆ. ಈ ಘಟಕಗಳು ಕೆಸಿ ವೀರೇಂದ್ರ ಅವರ ಕಾಲ್ ಸೆಂಟರ್ ಸೇವೆಗಳು ಮತ್ತು ಗೇಮಿಂಗ್ ವ್ಯವಹಾರಕ್ಕೆ ಸಂಬಂಧಿಸಿವೆ ಎಂದು ಇ.ಡಿ ತಿಳಿಸಿದೆ.

1 ಕೋಟಿ ಫಾರಿನ್ ಕರೆನ್ಸಿ ಪತ್ತೆ
ಇದಲ್ಲದೇ ಎಂಜಿಎಂ ಕ್ಯಾಸಿನೊ, ಮೆಟ್ರೋಪಾಲಿಟನ್ ಕ್ಯಾಸಿನೊ, ಬೆಲಾಜಿಯೊ ಕ್ಯಾಸಿನೊ, ಮರೀನಾ ಕ್ಯಾಸಿನೊದಲ್ಲಿ ಕ್ಯಾಸಿನೊ ಆಭರಣ, ವಿವಿಧ ಬ್ಯಾಂಕುಗಳ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ ಗಳು, ತಾಜ್, ಹಯಾತ್ ಮತ್ತು ಲೀಲಾ ಪಂಚತಾರಾ ಹೋಟೆಲ್‌ಗಳ ಐಷಾರಾಮಿ ಆತಿಥ್ಯ ಸದಸ್ಯತ್ವ ಕಾರ್ಡ್‌ಗಳು, 6 ಕೋಟಿ ಮೌಲ್ಯದ ಚಿನ್ನಾಭರಣ ಪತ್ತೆಯಾಗಿದೆ. ಇದರ ಜೊತೆಗೆ ಐಷಾರಾಮಿ ಕಾರು, 12 ಕೋಟಿ ಮೌಲ್ಯದ ಇಂಡಿಯನ್ ಕರೆನ್ಸಿ, 1 ಕೋಟಿ ಫಾರಿನ್ ಕರೆನ್ಸಿಯನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!