ಸೊಸೆಗೆ ಬೆಂಕಿ ಹಚ್ಚಿ ಜೀವ ತೆಗೆದ ಅತ್ತೆ, ಮಾವ, ಗಂಡ..

ಲಕ್ನೋ: ನಿಕ್ಕಿ ಎನ್ನುವ ಮಹಿಳೆ ಜೀವ ಕಳೆದುಕೊಂಡವರು. ಈಕೆಯ ಗಂಡ ವಿಪಿನ್​ ಅನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಘಟನೆಯ ನಂತರ ನಾಪತ್ತೆ ಆಗಿರುವ ಮಾವ, ಅತ್ತೆ ಮತ್ತು ಸೋದರ ಮಾವ ಈ ಮೂವರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ವರದಕ್ಷಿಣೆಗಾಗಿ ಅತ್ತೆ, ಮಾವ ಹಾಗೂ ಗಂಡ ಸೇರಿ ಸೊಸೆಗೆ ಮನ ಬಂದಂತೆ ಹೊಡೆದು ಮನೆಯಲ್ಲೇ ಬೆಂಕಿ ಹಚ್ಚಿ ಜೀವ ತೆಗೆದಿರುವ ಘಟನೆ ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ. ಈಕೆಯ ಗಂಡ ವಿಪಿನ್​ ಅನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಘಟನೆಯ ನಂತರ ನಾಪತ್ತೆ ಆಗಿರುವ ರೋಹಿತ್ (ಮಾವ), ದಯಾ (ಅತ್ತೆ) ಮತ್ತು ಸತ್ವೀರ್​ (ಸೋದರ ಮಾವ) ಈ ಮೂವರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಮಹಿಳೆ ನಿಕ್ಕಿ ಹಾಗೂ ಈಕೆಯ ಸಹೋದರಿ ಕಾಂಚಾಣ ಇಬ್ಬರು ಒಂದೇ ಮನೆಗೆ ಸೊಸೆಯಾಗಿದ್ದರು. ನಿಕ್ಕಿ ಹಾಗೂ ವಿಪಿನ್ 2016ರಲ್ಲಿ ಹರಿಯಾಣದ ಸಿರ್ಸಾದಲ್ಲಿ ಮದುವೆಯಾಗಿದ್ದರು. ಆದರೆ ಮದುವೆಯಲ್ಲಿ ವರದಕ್ಷಿಣೆಯಾಗಿ ಎಸ್​ಯುವಿ ಕಾರು, ಬೆಲೆಬಾಳುವ ಚಿನ್ನಾಭರಣಗಳನ್ನು ನೀಡಲಾಗಿತ್ತು. ಆದರೂ ವರದಕ್ಷಿಣೆಗಾಗಿ ಇಬ್ಬರಿಗೂ ಗಂಡನ ಮನೆಯವರು ಹೊಡೆಯುತ್ತಿದ್ದರು.

ತವರಿನಿಂದ ಹಣ ತರುವಂತೆ ಮನೆಯಲ್ಲಿ ನಿರಂತರ ಹಿಂಸೆ ಕೊಡುತ್ತಿದ್ದರು. ಹೀಗಾಗಿಯೇ ಮತ್ತೊಂದು ಕಾರನ್ನು ಕೂಡ ನೀಡಲಾಗಿತ್ತು ಎಂದು ಹೇಳಲಾಗಿದೆ. ಆದರೂ ಗಂಡನ ಮನೆಯವರ ವರದಕ್ಷಿಣೆಯ ಆಸೆ ನಿರಂತರವಾಗಿದ್ದರಿಂದ ಮನೆಯಲ್ಲಿ ಹೆಂಡತಿ ಜೊತೆ ವಿಪಿನ್ ಜಗಳ ತೆಗೆದು ಹೊಡೆದಿದ್ದಾನೆ. ಇದಕ್ಕೆ ಗಂಡನ ಪೋಷಕರು ಸಾಥ್ ಕೊಟ್ಟಿದ್ದಾರೆ. ಅದರಂತೆ ಗಂಡ ಹೊಡೆದು, ಕೋಪದಲ್ಲಿ ಹೆಂಡತಿಗೆ ಬೆಂಕಿ ಹಚ್ಚಿಬಿಟ್ಟಿದ್ದಾನೆ. ರಕ್ಷಣೆಗಾಗಿ ಬೆಂಕಿಯಲ್ಲೇ ಮಹಿಳೆ ಚೀರಾಡಿದ್ದಾಳೆ. ಈ ವೇಳೆ ಈಕೆಯ ಸಹೋದರಿಯನ್ನ ಹೊರಗಾಕಲಾಗಿತ್ತು. ಇದನ್ನು ನೋಡಿ ಸಹೋದರಿ ತೀವ್ರ ಭಯದಿಂದ ಕೂಗಿದ್ದಾಳೆ.

ತಕ್ಷಣ ಸ್ಥಳೀಯರು ಬಂದು ಮನೆ ಒಳಗೆ ತೀವ್ರ ಸುಟ್ಟ ಗಾಯಗಳಿಂದ ಬಿದ್ದಿದ್ದ ಮಹಿಳೆಯನ್ನ ರಕ್ಷಣೆ ಮಾಡಿ, ಗ್ರೇಟರ್ ನೋಯ್ಡಾದ ಫೋರ್ಟಿಸ್ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಆದರೆ ದಾರಿ ಮಧ್ಯೆಯೇ ಮಹಿಳೆ ಜೀವ ಬಿಟ್ಟಿದ್ದಾಳೆ. ಸದ್ಯ ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರ ಮಾಡಲಾಗಿದೆ. ಈ ಬಗ್ಗೆ ಮಾತನಾಡಿರುವ ನಿಕ್ಕಿಯ ಸಹೋದರಿ ಕಾಂಚಾಣ, ನನ್ನ ಸಹೋದರಿಗೆ ಆಕೆಯ ಗಂಡ ಮನಬಂದಂತೆ ಥಳಿಸಿದ್ದರಿಂದ ಪ್ರಜ್ಞೆ ತಪ್ಪಿ ಬಿದ್ದಿದ್ದಾಗ ವಿಪಿನ್ ಬೆಂಕಿ ಹಚ್ಚಿದ್ದಾನೆ. ವರದಕ್ಷಿಣೆಗಾಗಿ ನಮಗೆ ಹಿಂಸಿಸುತ್ತಿದ್ದರು. ಮದುವೆಯಲ್ಲಿ ಬ್ರ್ಯಾಂಡೆಡ್​​ ಎಸ್​ಯುವಿ ಕಾರು ಹಾಗೂ ಬೆಲೆಬಾಳುವ ಚಿನ್ನಾಭರಣಗಳನ್ನ ನೀಡಲಾಗಿದೆ. ಆದರೂ ನಿಕ್ಕಿ ಕಡೆಯವರು ಇನ್ನು ಬೇಕು ಎನ್ನುತ್ತಿದ್ದರು. ಮದುವೆ ನಂತರವೂ 35 ಲಕ್ಷ ರೂಪಾಯಿಗೆ ಡಿಮ್ಯಾಂಡ್ ಮಾಡಿದ್ದರು ಎಂದಿದ್ದಾಳೆ. ಇದರ ಬದಲಿಗೆ ಮತ್ತೊಂದು ಕಾರನ್ನು ಇವರಿಗೆ ನೀಡಲಾಗಿತ್ತು. ಆದರೂ ಅವರ ಕಿರುಕುಳ, ಹಿಂಸೆ ನಿರಂತರವಾಗಿತ್ತು. ನಾನು ಸ್ಥಳದಲ್ಲೇ ಇದ್ದರೂ ಸಹೋದರಿಯನ್ನ ಉಳಿಸಿಕೊಳ್ಳಲು ಆಗಲಿಲ್ಲ. ಇಬ್ಬರು ಒಂದೇ ಬಾರಿ ಮದುವೆ ಆಗಿದ್ದೇವು. ಸ್ಥಳೀಯರ ಸಹಾಯದಿಂದ ನಿಕ್ಕಿಯನ್ನ ಆಸ್ಪತ್ರೆಗೆ ಕರೆದುಕೊಂಡು ಬಂದೇವು ಎಂದು ಕಾಂಚಾಣ ಹೇಳಿದ್ದಾರೆ.

ಸದ್ಯ ಈ ಘಟನೆಗೆ ಸಂಬಂಧಿಸಿದಂತೆ ನಿಕ್ಕಿ ಅವರ ಮಗು ಹೇಳಿರುವ ವಿಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಪ್ಪನೇ ಮಮ್ಮಿಗೆ ಬೆಂಕಿ ಹಚ್ಚಿ ಜೀವ ತೆಗೆದಿದ್ದಾನೆ ಎಂದು ಮಗು ಹೇಳಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ವಿಪಿನ್ ಹಾಗೂ ಅವರ ಮನೆಯವರ ವಿರುದ್ಧ ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ. ಇನ್ನು ಸ್ಥಳೀಯರು ಕೂಡ ಆ ಕುಟುಂಬದ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ ಎನ್ನಲಾಗಿದೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!