ಬಿಟ್ಟು ಬಿಡದೇ ಸುರಿಯುತ್ತಿರೋ ಮಳೆ.. ಜೀವ ಕೈಯಲ್ಲಿಡಿದು ದಿನ ಕಳೆಯುತ್ತಿರೋ ಜನ!

ಮಳೆಯ ರೌದ್ರರೂಪಕ್ಕೆ ಬಿಹಾರದಲ್ಲಿ ಲೋಕೈನ್ ನದಿ ಉಕ್ಕಿ ಹರಿಯುತ್ತಿದೆ. ನದಿ ಉಕ್ಕಿ ಹರಿದ ಪರಿಣಾಮ, ನಳಂದದಲ್ಲಿನ 10ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದ್ದು, ನೋಡ ನೋಡುತ್ತಲೇ ಮನೆಗಳು ಕುಸಿದು ಹೋಗುತ್ತಿವೆ. ಉತ್ತರ ಭಾರತದಲ್ಲಿ ಸದ್ಯ ಮಳೆರಾಯನ ಅಬ್ಬರ ಜೋರಾಗಿದೆ. ಮಳೆಯ ರೌದ್ರ ನರ್ತನಕ್ಕೆ ಅಕ್ಷರಶಃ ತತ್ತರಿಸಿರುವ ರಾಜಸ್ಥಾನ, ಬಿಹಾರ, ಒಡಿಶಾಗಳಲ್ಲಿ ಜನ ಜೀವ ಕೈಯಲ್ಲಿ ಹಿಡಿದು ದಿನದೂಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಮನೆ, ಬೆಳೆ, ರಸ್ತೆ ಎಲ್ಲವೂ ನೀರಿನಲ್ಲಿ ಕೊಚ್ಚಿ ಹೋಗ್ತಿವೆ. ಮಳೆ, ತನ್ನ ರೌದ್ರ ಪ್ರತಾಪದಿಂದ ಉತ್ತರ ಭಾರತವನ್ನ ಹಿಂಡಿ ಹಿಪ್ಪೆ ಮಾಡ್ತಿದೆ. ವರುಣ ಅಬ್ಬರಕ್ಕೆ ಉತ್ತರ ಭಾರತ ನಲುಗಿ ಹೋಗ್ತಿದ್ದು, ರಾಜಸ್ತಾನ, ಒಡಿಶಾ ಹಾಗೂ ಬಿಹಾರದಲ್ಲಿ ಜನರ ಕಣ್ಣ ಮುಂದೆಯೇ ಆಸ್ತಿ-ಪಾಸ್ತಿಗಳು ನಾಶ ಆಗುತ್ತಿವೆ. ನಿರಂತರ ಮಳೆಯಿಂದಾಗಿ ರಾಜಸ್ಥಾನದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಕೋಟಾ, ಬುಂಡಿ, ಬರಾನ್ ಮತ್ತು ಸವಾಯಿ ಮಾಧೋಪುರ ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಸವಾಯಿ ಮಾಧೋಪುರ ಸಂಪೂರ್ಣ ಜಲಾವೃತವಾಗಿದ್ದು, ರಸ್ತೆಯಲ್ಲಿ ಬಸ್ ವಾಲಿಕೊಂಡು ನಿಂತಿದ್ದು, ಪ್ರಯಾಣಿಕರನ್ನು ರಕ್ಷಣೆ ಮಾಡಲಾಗಿದೆ. ಮತ್ತೊಂದೆಡೆ ಪ್ರವಾಹದಲ್ಲಿ ಸಿಲುಕಿದ್ದವರ ರಕ್ಷಣೆ ತೆರಳಿದ್ದ ಎನ್​ಡಿಆರ್​ಎಫ್​ ಸಿಬ್ಬಂದಿ ಇದ್ದ ಟ್ರ್ಯಾಕ್ಟರ್​ ಪಲ್ಟಿಯಾಗಿದೆ.

 

ಇನ್ನು ಭಾರೀ ಮಳೆಗೆ ಬುಂಡಿ ಪ್ರದೇಶ ಜಲಾವೃತವಾಗಿದ್ದು, ಜೈಪುರದ ಅಮೇರ್ ಕೋಟೆಯಲ್ಲಿ 200 ಅಡಿ ಉದ್ದದ ಗೋಡೆ ಕುಸಿತವಾಗಿದೆ. ಬಿಹಾರದಲ್ಲೂ ವರುಣನ ಅಬ್ಬರ.. ಉಕ್ಕಿ ಹರಿದ ಲೋಕೈನ್ ರಿವರ್ ಮಳೆಯ ರೌದ್ರರೂಪಕ್ಕೆ ಬಿಹಾರದಲ್ಲಿ ಲೋಕೈನ್ ನದಿ ಉಕ್ಕಿ ಹರಿಯುತ್ತಿದೆ. ನದಿ ಉಕ್ಕಿ ಹರಿದ ಪರಿಣಾಮ, ನಳಂದದಲ್ಲಿನ 10ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದ್ದು, ನೋಡ ನೋಡುತ್ತಲೇ ಮನೆಗಳು ಕುಸಿದು ಹೋಗ್ತಿವೆ. ನಗರದ ಪ್ರಮುಖ ರಸ್ತೆಗಳು ಕೊಚ್ಚಿಹೋಗಿ ಬೆಳೆಗಳು ನಾಶವಾಗಿವೆ. ಓಡಿಶಾದಲ್ಲೂ ವರುಣ ತನ್ನ ರೌದ್ರ ರೂಪ ಪ್ರದರ್ಶಿಸ್ತಿದ್ದಾನೆ. ಧಾರಾಕಾರ ಮಳೆಗೆ ಸಮಕೋಯ್​ ನದಿ ಪಾಯ ಮಟ್ಟ ಮೀರಿದೆ. ಇದ್ರಿಂದ ಸೇತುವೆ ಮೇಲೆ ನೀರು ರಭಸವಾಗಿ ಹರಿಯುತ್ತಿದ್ದು, 13 ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಗೆ ಉತ್ತರ ಭಾರರತ ಅಕ್ಷರಶಃ ತತ್ತರಿಸಿ ಹೋಗಿದೆ. ಪ್ರವಾಹದ ಭೀತಿ ಮಧ್ಯೆಯೇ ಜನರು ಬದುಕು ನಡೆಸುವಂತಾಗಿದೆ. ಇನ್ನೂ ಮಳೆ ಮುಂದುವರಿದ್ರೆ ಉತ್ತರ ಭಾರತದಲ್ಲಿ ಪ್ರವಾಹ ಅಪ್ಪಳಿಸಿದ್ರೂ ಅಚ್ಚರಿಯೇನಿಲ್ಲ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!