ಬಿಟ್ಟು ಬಿಡದೇ ಸುರಿಯುತ್ತಿರೋ ಮಳೆ.. ಜೀವ ಕೈಯಲ್ಲಿಡಿದು ದಿನ ಕಳೆಯುತ್ತಿರೋ ಜನ!

ಮಳೆಯ ರೌದ್ರರೂಪಕ್ಕೆ ಬಿಹಾರದಲ್ಲಿ ಲೋಕೈನ್ ನದಿ ಉಕ್ಕಿ ಹರಿಯುತ್ತಿದೆ. ನದಿ ಉಕ್ಕಿ ಹರಿದ ಪರಿಣಾಮ, ನಳಂದದಲ್ಲಿನ 10ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದ್ದು, ನೋಡ ನೋಡುತ್ತಲೇ ಮನೆಗಳು ಕುಸಿದು ಹೋಗುತ್ತಿವೆ. ಉತ್ತರ ಭಾರತದಲ್ಲಿ ಸದ್ಯ ಮಳೆರಾಯನ ಅಬ್ಬರ ಜೋರಾಗಿದೆ. ಮಳೆಯ ರೌದ್ರ ನರ್ತನಕ್ಕೆ ಅಕ್ಷರಶಃ ತತ್ತರಿಸಿರುವ ರಾಜಸ್ಥಾನ, ಬಿಹಾರ, ಒಡಿಶಾಗಳಲ್ಲಿ ಜನ ಜೀವ ಕೈಯಲ್ಲಿ ಹಿಡಿದು ದಿನದೂಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಮನೆ, ಬೆಳೆ, ರಸ್ತೆ ಎಲ್ಲವೂ ನೀರಿನಲ್ಲಿ ಕೊಚ್ಚಿ ಹೋಗ್ತಿವೆ. ಮಳೆ, ತನ್ನ ರೌದ್ರ ಪ್ರತಾಪದಿಂದ ಉತ್ತರ ಭಾರತವನ್ನ ಹಿಂಡಿ ಹಿಪ್ಪೆ ಮಾಡ್ತಿದೆ. ವರುಣ ಅಬ್ಬರಕ್ಕೆ ಉತ್ತರ ಭಾರತ ನಲುಗಿ ಹೋಗ್ತಿದ್ದು, ರಾಜಸ್ತಾನ, ಒಡಿಶಾ ಹಾಗೂ ಬಿಹಾರದಲ್ಲಿ ಜನರ ಕಣ್ಣ ಮುಂದೆಯೇ ಆಸ್ತಿ-ಪಾಸ್ತಿಗಳು ನಾಶ ಆಗುತ್ತಿವೆ. ನಿರಂತರ ಮಳೆಯಿಂದಾಗಿ ರಾಜಸ್ಥಾನದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಕೋಟಾ, ಬುಂಡಿ, ಬರಾನ್ ಮತ್ತು ಸವಾಯಿ ಮಾಧೋಪುರ ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಸವಾಯಿ ಮಾಧೋಪುರ ಸಂಪೂರ್ಣ ಜಲಾವೃತವಾಗಿದ್ದು, ರಸ್ತೆಯಲ್ಲಿ ಬಸ್ ವಾಲಿಕೊಂಡು ನಿಂತಿದ್ದು, ಪ್ರಯಾಣಿಕರನ್ನು ರಕ್ಷಣೆ ಮಾಡಲಾಗಿದೆ. ಮತ್ತೊಂದೆಡೆ ಪ್ರವಾಹದಲ್ಲಿ ಸಿಲುಕಿದ್ದವರ ರಕ್ಷಣೆ ತೆರಳಿದ್ದ ಎನ್​ಡಿಆರ್​ಎಫ್​ ಸಿಬ್ಬಂದಿ ಇದ್ದ ಟ್ರ್ಯಾಕ್ಟರ್​ ಪಲ್ಟಿಯಾಗಿದೆ.

 

ಇನ್ನು ಭಾರೀ ಮಳೆಗೆ ಬುಂಡಿ ಪ್ರದೇಶ ಜಲಾವೃತವಾಗಿದ್ದು, ಜೈಪುರದ ಅಮೇರ್ ಕೋಟೆಯಲ್ಲಿ 200 ಅಡಿ ಉದ್ದದ ಗೋಡೆ ಕುಸಿತವಾಗಿದೆ. ಬಿಹಾರದಲ್ಲೂ ವರುಣನ ಅಬ್ಬರ.. ಉಕ್ಕಿ ಹರಿದ ಲೋಕೈನ್ ರಿವರ್ ಮಳೆಯ ರೌದ್ರರೂಪಕ್ಕೆ ಬಿಹಾರದಲ್ಲಿ ಲೋಕೈನ್ ನದಿ ಉಕ್ಕಿ ಹರಿಯುತ್ತಿದೆ. ನದಿ ಉಕ್ಕಿ ಹರಿದ ಪರಿಣಾಮ, ನಳಂದದಲ್ಲಿನ 10ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದ್ದು, ನೋಡ ನೋಡುತ್ತಲೇ ಮನೆಗಳು ಕುಸಿದು ಹೋಗ್ತಿವೆ. ನಗರದ ಪ್ರಮುಖ ರಸ್ತೆಗಳು ಕೊಚ್ಚಿಹೋಗಿ ಬೆಳೆಗಳು ನಾಶವಾಗಿವೆ. ಓಡಿಶಾದಲ್ಲೂ ವರುಣ ತನ್ನ ರೌದ್ರ ರೂಪ ಪ್ರದರ್ಶಿಸ್ತಿದ್ದಾನೆ. ಧಾರಾಕಾರ ಮಳೆಗೆ ಸಮಕೋಯ್​ ನದಿ ಪಾಯ ಮಟ್ಟ ಮೀರಿದೆ. ಇದ್ರಿಂದ ಸೇತುವೆ ಮೇಲೆ ನೀರು ರಭಸವಾಗಿ ಹರಿಯುತ್ತಿದ್ದು, 13 ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಗೆ ಉತ್ತರ ಭಾರರತ ಅಕ್ಷರಶಃ ತತ್ತರಿಸಿ ಹೋಗಿದೆ. ಪ್ರವಾಹದ ಭೀತಿ ಮಧ್ಯೆಯೇ ಜನರು ಬದುಕು ನಡೆಸುವಂತಾಗಿದೆ. ಇನ್ನೂ ಮಳೆ ಮುಂದುವರಿದ್ರೆ ಉತ್ತರ ಭಾರತದಲ್ಲಿ ಪ್ರವಾಹ ಅಪ್ಪಳಿಸಿದ್ರೂ ಅಚ್ಚರಿಯೇನಿಲ್ಲ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!