2 ಲಡ್ಡುಗಾಗಿ ಸಿಎಂ ಹೆಲ್ಪ್ ಲೇನ್‌ ಗೆ ವ್ಯಕ್ತಿ ದೂರು!

ಸಾಮಾನ್ಯವಾಗಿ ಮೂಲಸೌಕರ್ಯದ ಬಗ್ಗೆ ದೂರು ನೀಡಲು ಸಿಎಂ ಹೆಲ್ಪ್ ಲೇನ್ ಗೆ ಜನರು ಕಾಲ್ ಮಾಡ್ತಾರೆ. ಆದರೇ, ಮಧ್ಯಪ್ರದೇಶದ ಭೀಂಡ್ ಜಿಲ್ಲೆಯಲ್ಲಿ ಕಮಲೇಶ್ ಕುಶ್ವಾಹ ತನಗೆ ಗ್ರಾಮ ಪಂಚಾಯತಿನಿಂದ ಒಂದೇ ಲಡ್ಡು ಕೊಟ್ಟರು. ನನಗೆ ಇನ್ನೊಂದು ಲಡ್ಡು ಕೊಡಬೇಕೆಂದು ದೂರು ನೀಡಿದ್ದಾನೆ.ಸಾಮಾನ್ಯವಾಗಿ ಜನರು ತಮ್ಮ ದೂರುಗಳ ಬಗ್ಗೆ ಪೊಲೀಸ್ ಕಂಟ್ರೋಲ್ ರೂಮುಗೆ ಪೋನ್ ಮಾಡ್ತಾರೆ. ಸಿಎಂ ಹೆಲ್ಪ್ ಲೇನ್ ಗೂ ಪೋನ್ ಮಾಡಿ ದೂರುಗಳನ್ನು ಹೇಳಿಕೊಳ್ಳುತ್ತಾರೆ. ತಮ್ಮ ಮನೆಯ ರೋಡ್ ಸರಿ ಇಲ್ಲ. ಕರೆಂಟ್ ಇಲ್ಲ. ಊರಿಗೆ ಹೋಗಲು ರಸ್ತೆ ಇಲ್ಲ. ಜಮೀನಿನ ಸಮಸ್ಯೆ ಬಗ್ಗೆ ಹೇಳಿಕೊಳ್ಳೋದು ಸಾಮಾನ್ಯ.ಆದರೇ, ಮಧ್ಯಪ್ರದೇಶದ ಭೀಂಡ್ ಜಿಲ್ಲೆಯಲ್ಲಿ ಕಮಲೇಶ್ ಕುಶ್ವಾಹಾ ಎಂಬ ವ್ಯಕ್ತಿ ಸ್ವಾತಂತ್ರ್ಯ ದಿನಾಚರಣೆಯಂದು ಸಿಎಂ ಹೆಲ್ಪ್ ಲೇನ್ ಗೆ ಪೋನ್ ಮಾಡಿ ವಿಚಿತ್ರ ದೂರು ನೀಡಿದ್ದಾನೆ. ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ಎಲ್ಲರಿಗೂ ಎರಡೆರಡು ಲಡ್ಡು ನೀಡಿದ್ದರು.

 

ಶಬರಿಮಲೆ: ದಟ್ಟಣೆ ನಿಯಂತ್ರಣಕ್ಕೆ ಎಐ ಕ್ಯಾಮೆರಾ, ಡ್ರೋನ್ ಬಳಕೆಗೆ ಕೆಎಸ್‌ಆರ್‌ಟಿಸಿ ಚಿಂತನೆ.

ನನಗೆ ಮಾತ್ರವೇ ಒಂದೇ ಒಂದು ಲಡ್ಡು ನೀಡಿದ್ದಾರೆ. ನನಗೂ ಎರಡು ಲಡ್ಡು ನೀಡಬೇಕಾಗಿತ್ತು ಎಂದು ಸಿಎಂ ಹೆಲ್ಪ್ ಲೇನ್ ಗೆ ದೂರು ನೀಡಿದ್ದಾನೆ. ಗ್ರಾಮ ಪಂಚಾಯತ್ ಭವನದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಲಡ್ಡು ವಿತರಣೆ ವೇಳೆ ತನಗೆ 2 ಲಡ್ಡು ನೀಡಬೇಕಾಗಿತ್ತು. ನಾನು 2 ಲಡ್ಡು ನೀಡುವಂತೆ ಕೇಳಿದರೂ ಕೊಟ್ಟಿಲ್ಲ ಎಂದು ಸಿಎಂ ಹೆಲ್ಪ್ ಲೇನ್ ಗೆ ಪೋನ್ ಮಾಡಿ ದೂರು ಅನ್ನು ಕಮಲೇಶ್ ಕುಶ್ವಾಹ ರಿಜಿಸ್ಟರ್ ಮಾಡಿದ್ದಾನೆ.ದ್ವಜಾರೋಹಣದ ಬಳಿಕ ಗ್ರಾಮ ಪಂಚಾಯತ್ ಸರಿಯಾಗಿ ಎಲ್ಲರಿಗೂ ಸಿಹಿ ಹಂಚುವಲ್ಲಿ ವಿಫಲವಾಗಿದೆ. ಈ ಸಮಸ್ಯೆಯನ್ನು ಬಗೆಹರಿಸಿ ಎಂದು ದೂರು ನೀಡಿದ್ದಾನೆ.ಈ ಸಮಸ್ಯೆ ಬಗ್ಗೆ ಪಂಚಾಯತ್ ಕಾರ್ಯದರ್ಶಿ ರವೀಂದ್ರ ಶ್ರೀವಾಸ್ತವ್ ಇದು ನಿಜವಾಗಿ ನಡೆದ ಘಟನೆ ಎನ್ನುವುದನ್ನು ಖಚಿತಪಡಿಸಿದ್ದಾರೆ. ಜೊತೆಗೆ ಘಟನೆ ಹೇಗಾಯ್ತು ಎನ್ನುವುದನ್ನು ವಿವರಿಸಿದ್ದಾರೆ. ಗ್ರಾಮಸ್ಥರು ರಸ್ತೆಯ ಪಕ್ಕದಲ್ಲಿ ನಿಂತಿದ್ದರು. ಪಂಚಾಯತ್ ಪಿವನ್, ಕಮಲೇಶ್ ಕುಶ್ವಾಹಾಗೆ ಒಂದು ಲಡ್ಡು ನೀಡಿದ್ದಾರೆ. ಆದರೇ, ಕಮಲೇಶ್ ಕುಶ್ವಾಹ ತನಗೆ ಎರಡು ಲಡ್ಡು ನೀಡಬೇಕೆಂದು ಬೇಡಿಕೆ ಇಟ್ಟಿದ್ದಾರೆ. ಎರಡು ಲಡ್ಡು ಕೊಡಲು ಪಿವನ್ ನಿರಾಕರಿಸಿದ್ದಾನೆ. ಆಗ ಕಮಲೇಶ್ ಕುಶ್ವಾಹ ಸಿಎಂ ಹೆಲ್ಪ್ ಲೇನ್ ಗೆ ಕರೆ ಮಾಡಿದ್ದಾನೆ ಎಂದು ಪಂಚಾಯತ್ ಸೆಕ್ರೆಟರಿ ರವೀಂದ್ರ ಶ್ರೀವಾಸ್ತವ್ ಹೇಳಿದ್ದಾರೆ. ಈಗ ಡ್ಯಾಮೇಜ್ ಕಂಟ್ರೋಲ್ ಮಾಡಲು ಗ್ರಾಮ ಪಂಚಾಯತ್ ಒಂದು ಕೆಜಿ ಸ್ವೀಟ್ ಖರೀದಿಸಿ, ಕಮಲೇಶ್ ಕುಶ್ವಾಹಗೆ ನೀಡಿ ಕ್ಷಮೆ ಕೇಳಲು ನಿರ್ಧರಿಸಿದೆ. ಈ ಮೂಲಕ ಕಮಲೇಶ್ ಕುಶ್ವಾಹನನ್ನು ಸಮಾಧಾನಪಡಿಸಲು ಗ್ರಾಮ ಪಂಚಾಯತ್ ನಿರ್ಧರಿಸಿದೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು