ಅಮೆರಿಕನ್ ಡೈಮಂಡ್​ನಿಂದ ತಯಾರಾದ ವಿಶೇಷ ಗಣಪ.. ಇದರ ಬೆಲೆ ಎಷ್ಟು ಗೊತ್ತಾ?

‘‘ಗಣಪತಿ ಬಪ್ಪ ಮೋರೆಯಾ ಮಂಗಳ ಮೂರ್ತಿ ಮೋರೆಯಾ’’ ಇನ್ನೇನೂ ಗೌರಿ ಗಣೇಶ ಹಬ್ಬ ಬಂದೇಬಿಡ್ತು. ಎಲ್ಲೆಲ್ಲೂ ಶುರು ವಿನಾಯಕನ ಸಂಭ್ರಮ. ಹಬ್ಬಕ್ಕೆ ಇನ್ನು ಒಂದು ವಾರ ಇರುವಾಗಲೇ ಸಿಲಿಕಾನ್​ ಸಿಟಿಗೆ ಮುಂಬೈನಿಂದ ಗಣಪ ಬಂದಿದ್ದಾನೆ.ಮುಂಬೈ ಹಾಗೂ ಸೊಲ್ಲಾಪುರ ಕುಶಲಕರ್ಮಿಗಳಿಂದ 30 ದಿನಗಳಿಂದ ಸಿದ್ಧಗೊಂಡ ಚಾಮರ ಕರ್ಣನ ರೂಪ ಎಷ್ಟು ಅದ್ಭುತವಾಗಿದೆ ಅಲ್ವಾ. ಬರೋಬ್ಬರಿ 12 ಲಕ್ಷ ಖರ್ಚು ಮಾಡಿ ಅಮೆರಿಕನ್ ಡೈಮಂಡ್​ನಿಂದ ಈ ಗಣಪತಿಯನ್ನ ತಯಾರಿಸಲಾಗಿದೆ. ಆರು ಅಡಿ ಎತ್ತರದ ಬಹಳ ವಿಶೇಷವಾದ ಗಣಪ ಮೂರ್ತಿ ಇದಾಗಿದ್ದು, ಮಿಲ್ಕ್ ಕಾಲೋನಿಯ ಸ್ವಸ್ತಿಕ್ ಯುವಕರ ಸಂಘದಿಂದ 40ನೇ ವರ್ಷದ ಗಣಪತಿ ಉತ್ಸವಕ್ಕೆ ಇದನ್ನ ಸಿದ್ಧಪಡಿಸಲಾಗಿದೆ.

ಲಂಬೋದರನ ಮೂರ್ತಿಯಷ್ಟೇ ವಿಶೇಷವಾಗಿಲ್ಲ. ಈತ ಕೂರುವ ಮಂಟಪ ಕೂಡ ಅಷ್ಟೇ ವೈಶಿಷ್ಟ್ಯತೆಯಿಂದ ಕೂಡಿದೆ. ಬರೀ ಮಂಟಪಕ್ಕೇನೇ 30 ಲಕ್ಷ ವೆಚ್ಚ ಮಾಡಲಾಗಿದೆ. ಕಳೆದ ವರ್ಷ ‘ಕೈಲಾಸನಾಥ ದೇವಸ್ಥಾನ’ ಹೋಲುವ ಮಂಟಪ ನಿರ್ಮಾಣ ಮಾಡಿದ್ರು. ಈ ಬಾರಿ ವಾರಣಾಸಿಯ ‘ಕಾಶಿವಿಶ್ವನಾಥ ದೇವಾಲಯ’ ಹೋಲುವ ಮಂಟಪ ಸಿದ್ಧಪಡಿಸಲಾಗ್ತಾಯಿದೆ.
ಆಗಸ್ಟ್ 27ನೇ ತಾರೀಖಿನಿಂದ ಸೆಪ್ಟೆಂಬರ್ 5ನೇ ತಾರೀಖಿನವರೆಗೂ ಗಣೇಶನ ಹಬ್ಬ ಆಚರಣೆಗೆ ಸ್ವಸ್ತಿಕ್ ಯುವಕರ ಸಂಘ ಸಜ್ಜಾಗಿದೆ. ಅದೇನೇ ಹೇಳಿ ನಗರದಲ್ಲಿ ವೆರೈಟಿ ವೆರೈಟಿ ಗಣಾಧ್ಯಕ್ಷನ ದರ್ಶನ ಆಗೋದಂತು ಪಕ್ಕ. ಸುಮುಖನ ಸಂಭ್ರಮಕ್ಕೆ ಕೌಂಟ್​ಡೌನ್​ ಶುರು.g

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!