ಪಡಿತರ ಅಕ್ಕಿ ಅಕ್ರಮ ಸಂಗ್ರಹಣೆ: ಬಂಟ್ವಾಳದ ಪಟ್ಟೆಕೋಡಿಯಲ್ಲಿ ಇಬ್ಬರ ಬಂಧನ.

ದಕ್ಷಿಣ ಕನ್ನಡ, ಬಂಟ್ವಾಳ: ಸರ್ಕಾರ ನೀಡುವ ಪಡಿತರ ಅಕ್ಕಿಯನ್ನು ಖಾಸಗಿ ಕಟ್ಟಡದಲ್ಲಿ ಅಕ್ರಮವಾಗಿ ಸಂಗ್ರಹಿಸಿ ಇಟ್ಟಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಘಟನೆಯಲ್ಲಿ ಇಬ್ಬರನ್ನು ಬಂಧಿಸಲಾಗಿದ್ದು, ಕಾನೂನು ಕ್ರಮ ಜರುಗಿಸಲಾಗಿದೆ.

ಬಂಟ್ವಾಳ ತಾಲೂಕಿನ ಗೋಳ್ತಮಜಲು ಗ್ರಾಮದ ಕಲ್ಲಡ್ಕ ಸಮೀಪದ ಪಟ್ಟೆಕೋಡಿ ಎಂಬಲ್ಲಿ ಈ ಘಟನೆ ನಡೆದಿದ್ದು, ಸರ್ಕಾರದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಇಟ್ಟುಕೊಂಡಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ, ಬಂಟ್ವಾಳ ತಹಸಿಲ್ದಾರ ಕಚೇರಿಯ ಆಹಾರ ನಿರೀಕ್ಷಕ ಎ. ಪ್ರಶಾಂತ್ ಶೆಟ್ಟಿ ಅವರು ಬಂಟ್ವಾಳ ನಗರ ಠಾಣಾ ಪೊಲೀಸರ ಸಹಕಾರದಿಂದ ದಾಳಿ ನಡೆಸಿದರು.

ದಾಳಿಯಲ್ಲಿ, ಕಲ್ಲಡ್ಕ ನಿವಾಸಿ ಹಾಗೂ ಗೋಡೌನ್ ನಿರ್ವಾಹಕ ಉಮ್ಮರಬ್ಬ ಹಾಗೂ ಕೆಲಸಗಾರ ರಫೀಕ್ ಎಂಬವರನ್ನು ಬಂಧಿಸಲಾಗಿದೆ. ದಾಳಿ ವೇಳೆ ಉಮ್ಮರಬ್ಬ ಅವರು ಪಟ್ಟೆಕೋಡಿಯ ಅಂಗಡಿಕಟ್ಟಡವೊಂದರಲ್ಲಿ 64 ಗೋಣಿಗಳಲ್ಲಿ 2,103.35 ಕೆ.ಜಿ ಬೆಳ್ತಿಗೆ ಅಕ್ಕಿ ಹಾಗೂ 467.10 ಕೆ.ಜಿ ಕುಚ್ಚಲಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿಕೊಂಡಿರುವುದು ಪತ್ತೆಯಾಗಿದೆ. ಈ ಅಕ್ಕಿಯ ಮೌಲ್ಯ ರೂ. 58,288 ಎಂದು ಅಂದಾಜಿಸಲಾಗಿದೆ.

ಇದಲ್ಲದೆ, ಅಕ್ಕಿಯ ಸಾಗಾಟಕ್ಕಾಗಿ ಆಟೋರಿಕ್ಷಾವೊಂದನ್ನು ಸಿದ್ಧಪಡಿಸಿರುವುದೂ ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಸ್ಥಳದಲ್ಲಿ ದೊರೆತ ಅಕ್ಕಿಯ ಗೋಣಿಗಳು, ಆಟೋರಿಕ್ಷಾ, ತೂಕದ ಯಂತ್ರ, ಖಾಲಿ ಗೋಣಿಗಳು ಸೇರಿದಂತೆ ಇನ್ನಿತರ ವಸ್ತುಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಈ ಸಂಬಂಧ ಬಂಟ್ವಾಳ ನಗರ ಠಾಣೆಯಲ್ಲಿ ಅ.ಕ್ರ: 96/2025ರಂತೆ, 1955ರ ಅಗತ್ಯ ವಸ್ತುಗಳ ಕಾಯ್ದೆಯ ಸೆಕ್ಷನ್ 3 ಮತ್ತು 7 ಹಾಗೂ 2016ರ ಕರ್ನಾಟಕ ಅಗತ್ಯ ವಸ್ತುಗಳ ಸಾರ್ವಜನಿಕ ವಿತರಣಾ ಪದ್ದತಿ (ನಿಯಂತ್ರಣ ಆದೇಶ)ನ ಸೆಕ್ಷನ್ 18ರಡಿ ಪ್ರಕರಣ ದಾಖಲಿಸಲಾಗಿದೆ.

Related Posts

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸತತ 6 ಬಾರಿ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊತ್ತು ನಾಡಹಬ್ಬಕ್ಕೆ ಸಾಕ್ಷಿಯಾಗಿದ್ದ ದಸರಾ ಗಜಪಡೆಯ ದಿಗ್ಗಜ ಅಭಿಮನ್ಯು, 2026ರ ಮೈಸೂರು ದಸರಾದಲ್ಲಿ ನಿಶಾನೆ ಆನೆಯಾಗಿ ಹೆಜ್ಜೆ ಹಾಕಲು ಸಜ್ಜಾಗಿದ್ದಾನೆ. 60 ವರ್ಷ ವಯೋಮಿತಿ ಪೂರೈಸಿದ ಹಿನ್ನೆಲೆಯಲ್ಲಿ ಈ ಹಿಂದೆ ಆನೆಗೆ ನಿವೃತ್ತಿ…

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

‘ಟಾಕ್ಸಿಕ್‌’ ಸಿನಿಮಾದಲ್ಲಿ ರಾಕಿಂಗ್‌ ಸ್ಟಾರ್‌ ಯಶ್‌ ಅವರ ಅಭಿನಯ ಹಾಗೂ ವಿಭಿನ್ನ ಆವತಾರಕ್ಕೆ ಸ್ಯಾಂಡಲ್‌ವುಡ್‌ ಮಂದಿ ಫಿದಾ ಆಗಿದ್ದು, ಇದೀಗ ಕಿಚ್ಚ ಸುದೀಪ್‌ ಪುತ್ರಿ, ಗಾಯಕಿ ಸಾನ್ವಿ ಸುದೀಪ್‌ ಕೂಡ ಯಶ್ ಅವರ ಪರ್ಫಾರ್ಮೆನ್ಸ್ ಅನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ‘ಟಾಕ್ಸಿಕ್: ಎ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!