ಉದ್ಯಮಿ ಅನಿಲ್ ಅಂಬಾನಿ ಮನೆ ಮೇಲೆ ಸಿಬಿಐ ರೇಡ್

ಉದ್ಯಮಿ ಅನಿಲ್ ಅಂಬಾನಿ ಮನೆ ಮೇಲೆ ಸಿಬಿಐ ಅಧಿಕಾರಿಗಳು ರೇಡ್ ಮಾಡಿದ್ದಾರೆ. ಮನೆಯಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಬ್ಯಾಂಕ್ ವಂಚನೆ ಕೇಸ್ ಗೆ ಸಂಬಂಧಿಸಿದಂತೆ ರೇಡ್ ಮಾಡಲಾಗಿದೆ.
ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಉದ್ಯಮಿ ಅನಿಲ್ ಅಂಬಾನಿ ಮನೆ ಮೇಲೆ ರೇಡ್ ಮಾಡಿದ್ದಾರೆ. ಮನೆಯಲ್ಲಿ ಇಡೀ ದಿನ ಸಿಬಿಐ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಅನಿಲ್ ಅಂಬಾನಿ ಮಾಲೀಕತ್ವದ ಕಂಪನಿಗಳ ಮೇಲೂ ದಾಳಿ ಮಾಡಿದ್ದಾರೆ. ಬ್ಯಾಂಕ್ ಗಳಿಗೆ ಬರೋಬ್ಬರಿ 2 ಸಾವಿರ ಕೋಟಿ ರೂಪಾಯಿಯನ್ನು ವಂಚಿಸಿದ ಆರೋಪ ಅನಿಲ್ ಅಂಬಾನಿ ಹಾಗೂ ಅವರ ಕಂಪನಿಗಳ ಮೇಲಿದೆ. ಮುಂಬೈನ ಕೂಫೆ ಪರೇಡ್ ಸೀ ವಿಂಡ್ ಕಾಂಪ್ಲೆಕ್ಸ್ ನಲ್ಲಿರುವ ಅನಿಲ್ ಅಂಬಾನಿ ಮನೆ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ಶೋಧ ನಡೆಸಿದ್ದಾರೆ. ಸಿಬಿಐ ದಾಳಿ ವೇಳೆ, ಅನಿಲ್ ಅಂಬಾನಿ ಮನೆಯಲ್ಲೇ ಇದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನೂ ಪಾರ್ಲಿಮೆಂಟ್ ನಲ್ಲಿ ಸ್ಟೇಟ್ ಆಫ್ ಇಂಡಿಯಾ , ಅನಿಲ್ ಅಂಬಾನಿ ಹಾಗೂ ಅವರ ಮಾಲೀಕತ್ವದ ರಿಲಯನ್ಸ್ ಕಮ್ಯೂನಿಕೇಷನ್ಸ್ ಲಿಮಿಟೆಡ್ ಕಂಪನಿಯನ್ನು ಫ್ರಾಡ್ ಎಂದು ವರ್ಗೀಕರಣ ಮಾಡಿರುವುದಾಗಿ ಕೇಂದ್ರದ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಉತ್ತರ ನೀಡಿದ್ದಾರೆ.

20225ರ ಜೂನ್ 13 ರಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಮಾಸ್ಟರ್ ಡೈರೆಕ್ಷನ್ ಆನ್ ಫ್ರಾಡ್ ರಿಸ್ಕ್ ಮ್ಯಾನೇಜ್ ಮೆಂಟ್ ಮತ್ತು ಎಸ್‌ಬಿಐನ ಅಂತರಿಕ ನೀತಿಯಡಿ ಈ ವರ್ಗೀಕರಣ ಮಾಡಲಾಗಿದೆ ಎಂದು ಪಂಕಜ್ ಚೌಧರಿ ಹೇಳಿದ್ದಾರೆ.ಇನ್ನೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ರಿಲಯನ್ಸ್ ಕಮ್ಯೂನಿಕೇಷನ್ಸ್ ಗೆ ಒಟ್ಟಾರೆ 2,227 ಕೋಟಿ ರೂಪಾಯಿ ಹಣವನ್ನು ಸಾಲವಾಗಿ ನೀಡಿದೆ. ಇನ್ನೂ ನಾನ್ ಫಂಡ್ ಬ್ಯಾಂಕ್ ಗ್ಯಾರಂಟಿಯಾಗಿ 786 ಕೋಟಿ ರೂಪಾಯಿ ನೀಡಿದೆ. ಇನ್ನೂ ಇ.ಡಿ. ಕೂಡ ಅನಿಲ್ ಅಂಬಾನಿ ವಿರುದ್ಧ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ. ಆಕ್ರಮವಾಗಿ ಹಣ ವರ್ಗಾವಣೆ ಮಾಡಿದ ಆರೋಪ ಕೂಡ ಅನಿಲ್ ಅಂಬಾನಿ ಮೇಲಿದೆ. ಜೊತೆಗೆ ಬ್ಯಾಂಕ್ ನಿಂದ ಸಾಲ ಪಡೆಯಲು ಬ್ಯಾಂಕ್ ಅಧಿಕಾರಿಗಳಿಗೆ ಲಂಚ ನೀಡಿದ ಆರೋಪವೂ ಅನಿಲ್ ಅಂಬಾನಿ ಹಾಗೂ ಅವರ ಮಾಲೀಕತ್ವದ ಕಂಪನಿಗಳ ಮೇಲಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!