ಬೀದಿ ನಾಯಿ ಕಚ್ಚಿದ್ದರಿಂದ ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ!

ಕಾನ್ಪುರದಲ್ಲಿ ಭಯಾನಕ ಘಟನೆ ನಡೆದಿದೆ. ಬೀದಿ ನಾಯಿಗಳು 21 ವರ್ಷದ ವಿದ್ಯಾರ್ಥಿನಿಯ ಮೇಲೆ ಹಲ್ಲೆ ನಡೆಸಿದ್ದು, ಇದರಿಂದ ಆಕೆಯ ಮುಖಕ್ಕೆ 17 ಹೊಲಿಗೆಗಳು ಬಿದ್ದಿವೆ. ಮೈ ತುಂಬ ಹಲವು ಗಾಯಗಳಾಗಿವೆ. 21 ವರ್ಷದ ವಿದ್ಯಾರ್ಥಿನಿಯೊಬ್ಬಳು ಕಾಲೇಜಿನಿಂದ ಮನೆಗೆ ಹಿಂದಿರುಗುತ್ತಿದ್ದಾಗ ಬೀದಿ ನಾಯಿಗಳು ಅವಳ ಮುಖದ ಮೇಲೆ ತೀವ್ರವಾದ ದಾಳಿ ನಡೆಸಿವೆ. ಇದರಿಂದ ಆಕೆಯ ಮುಖಕ್ಕೆ 17 ಹೊಲಿಗೆಗಳನ್ನು ಹಾಕಲಾಗಿದೆ.
ಕಾನ್ಪುರ: ಕಾನ್ಪುರದಲ್ಲಿ 21 ವರ್ಷದ ಬಿಬಿಎ ವಿದ್ಯಾರ್ಥಿನಿಯ ಮೇಲೆ ಬೀದಿ ನಾಯಿಗಳು ಕ್ರೂರವಾಗಿ ದಾಳಿ ಮಾಡಿವೆ. ಆಕೆಯ ಮುಖಕ್ಕೆ ತೀವ್ರ ಗಾಯಗಳು ಉಂಟಾಗಿದ್ದು, 17 ಹೊಲಿಗೆಗಳನ್ನು ಹಾಕಲಾಗಿದೆ. ಕಾಲೇಜಿನಿಂದ ಮನೆಗೆ ಮರಳುತ್ತಿದ್ದ 21 ವರ್ಷದ ಯುವತಿಯ ಮೇಲೆ ಬೀದಿ ನಾಯಿಗಳು ಕ್ರೂರವಾಗಿ ದಾಳಿ ಮಾಡಿವೆ. ಈ ದಾಳಿಯಿಂದ ಆಕೆಯ ಮುಖದ ಮೇಲೆ ಆಳವಾದ ಗಾಯಗಳಾಗಿದ್ದು, ವೈದ್ಯರು ಆಕೆಯ ಕೆನ್ನೆಗೆ 17 ಹೊಲಿಗೆಗಳನ್ನು ಹಾಕಿದ್ದಾರೆ. ಬೀದಿ ನಾಯಿಗಳು ಅವಳನ್ನು ನೆಲಕ್ಕೆ ಎಳೆದುಕೊಂಡು ಮುಖ ಮತ್ತು ದೇಹದ ಮೇಲೆ ಕ್ರೂರವಾಗಿ ದಾಳಿ ಮಾಡಿವೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ನಾಯಿ ಕಚ್ಚಿ ಎಳೆದಿದ್ದರಿಂದ ಆಕೆಯ ಬಲ ಕೆನ್ನೆ ಎರಡು ಭಾಗವಾಗಿದ್ದು, ಆಕೆಯ ಮೂಗಿನ ಮೇಲೆ, ದೇಹದ ಇತರ ಭಾಗಗಳ ಮೇಲೆ ಗಂಭೀರವಾದ ಗಾಯಗಳಾಗಿವೆ. ಆಗಸ್ಟ್ 20ರಂದು ಆಕೆ ಮನೆಗೆ ಹಿಂದಿರುಗುತ್ತಿದ್ದಾಗ ಬೀದಿ ನಾಯಿಗಳು ಆ 21 ವರ್ಷದ ಕಾಲೇಜು ವಿದ್ಯಾರ್ಥಿನಿಯ ಮೇಲೆ ದಾಳಿ ನಡೆಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ದಾಳಿಯಲ್ಲಿ ಆಕೆಗೆ ಹಲವು ಬಾರಿ ಕಚ್ಚಿ ಗಾಯಗಳಾಗಿದ್ದು, ವೈದ್ಯರು ಆಕೆಯ ಕೆನ್ನೆ ಮತ್ತು ಮೂಗಿನ ಮೇಲೆ 17 ಹೊಲಿಗೆಗಳನ್ನು ಹಾಕಬೇಕಾಯಿತು. ಅಲೆನ್ ಹೌಸ್ ರುಮಾ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಬಿಎ ವಿದ್ಯಾರ್ಥಿನಿ ವೈಷ್ಣವಿ ಸಾಹು ಎಂದು ಗುರುತಿಸಲ್ಪಟ್ಟ ಯುವತಿ ಶ್ಯಾಮ್ ನಗರದ ಮೂಲಕ ನಡೆದುಕೊಂಡು ಹೋಗುತ್ತಿದ್ದಾಗ ಬೀದಿ ನಾಯಿಗಳು ಮತ್ತು ಕೋತಿಗಳ ನಡುವೆ ಜಗಳ ನಡೆದಿತ್ತು. ಈ ವೇಳೆ ಅವುಗಳ ಜಗಳದಲ್ಲಿ ಕೋಪಗೊಂಡಿದ್ದ ಮೂರು ನಾಯಿಗಳು ಇದ್ದಕ್ಕಿದ್ದಂತೆ ಆಕೆಯ ಮೇಲೆ ದಾಳಿ ಮಾಡಿದವು. ಪ್ರತ್ಯಕ್ಷದರ್ಶಿಗಳ ಪ್ರಕಾರ, ಪ್ರಾಣಿಗಳು ಆಕೆಯನ್ನು ನೆಲಕ್ಕೆ ಎಳೆದುಕೊಂಡು ಹೋಗಿ, ಆಕೆಯ ಮುಖ ಮತ್ತು ದೇಹವನ್ನು ಕಚ್ಚಿದವು. ಆಕೆಯ ಬಲ ಕೆನ್ನೆ ಎರಡು ಭಾಗಗಳಾಗಿ ಹರಿದುಹೋಗಿತ್ತು.ಆಕೆ ತಪ್ಪಿಸಿಕೊಳ್ಳಲು ಪ್ರಯತ್ನಿಸಿದರೂ ಆವೇಶದಲ್ಲಿದ್ದ ಬೀದಿ ನಾಯಿಗಳು ಮತ್ತೆ ಆಕೆಯ ಮೇಲೆ ದಾಳಿ ಮಾಡಿ ರಸ್ತೆಗೆ ಎಳೆದುಕೊಂಡು ಹೋದವು. ಆಕೆಯ ಕೂಗು ಕೇಳಿ, ಸ್ಥಳೀಯರು ಕೋಲುಳಿಂದ ಹೊಡೆದು ನಾಯಿಗಳನ್ನು ಓಡಿಸಿದರು. ಅಷ್ಟರಲ್ಲಿ ಆ ಯುವತಿಯ ದೇಹದಿಂದ ರಕ್ತಸ್ರಾವವಾಗುತ್ತಿತ್ತು. ವಿಷಯ ತಿಳಿದ ಕೂಡಲೆ ಆಕೆಯ ಕುಟುಂಬ ಸದಸ್ಯರು ತಕ್ಷಣ ಆಕೆಯನ್ನು ಕಾನ್ಶಿರಾಮ್ ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ವೈದ್ಯರು ಆಕೆಯ ಗಾಯಗಳನ್ನು ಹೊಲಿದರು.

ಸುಪ್ರೀಂ ಕೋರ್ಟ್ ಇತ್ತೀಚೆಗೆ ದೆಹಲಿಯ ಬೀದಿ ನಾಯಿಗಳನ್ನು ಸಂತಾನಹರಣ ಚಿಕಿತ್ಸೆ ನಡೆಸಬೇಕು ಮತ್ತು ಆಶ್ರಯ ತಾಣಗಳಿಗೆ ಸ್ಥಳಾಂತರಿಸಬೇಕು ಎಂಬ ಕುರಿತು ನೀಡಿದ ತೀರ್ಪಿನ ಕುರಿತು ದೇಶಾದ್ಯಂತ ತೀವ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿರುವ ನಡುವೆಯೇ ಈ ದಾಳಿ ನಡೆದಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!