ಖ್ಯಾತ ನಟ ಮತ್ತು ರಂಗಭೂಮಿ ಕಲಾವಿದ ದಿನೇಶ್ ಮಂಗಳೂರು ನಿಧನ !

ರಂಗಭೂಮಿ ಹಿನ್ನೆಲೆಯಿಂದ ಚಿತ್ರರಂಗಕ್ಕೆ ಬಂದಿದ್ದ ನಟ ದಿನೇಶ್ ಮಂಗಳೂರು ಅವರು ಇನ್ನಿಲ್ಲ. ನಟನಾಗಿ, ಕಲಾ ನಿರ್ದೇಶಕನಾಗಿ ಅವರು ಗುರುತಿಸಿಕೊಂಡಿದ್ದರು. ಕನ್ನಡ ಚಿತ್ರರಂಗದಲ್ಲಿ ಅವರಿಗೆ ಬಹಳ ಬೇಡಿಕೆ ಇತ್ತು. ಕುಂದಾಪುರದಲ್ಲಿ ಅವರು ಕೊನೆಯುಸಿರು ಎಳೆದಿದ್ದಾರೆ. ದಿನೇಶ್ ಮಂಗಳೂರು ನಿಧನದಿಂದ ಚಿತ್ರರಂಗಕ್ಕೆ ದೊಡ್ಡ ನಷ್ಟವಾಗಿದೆ.

ಕನ್ನಡ ಚಿತ್ರರಂಗಕ್ಕೆ ಇದು ನೋವಿನ ಸುದ್ದಿ. ನಟ, ಕಲಾ ನಿರ್ದೇಶಕ ದಿನೇಶ್ ಮಂಗಳೂರು  ಅವರು ನಿಧನರಾಗಿದ್ದಾರೆ. ಇಂದು (ಆಗಸ್ಟ್ 25) ಕುಂದಾಪುರದಲ್ಲಿ ಬೆಳಗಿನ‌ಜಾವ ಅವರು ಕೊನೆಯುಸಿರು ಎಳೆದಿದ್ದಾರೆ. ಮನೆಯಲ್ಲೇ ಅವರು ನಿಧನರಾದರು. ‘ಆ ದಿನಗಳು’, ‘ಕೆಜಿಎಫ್’ (KGF), ‘ಉಳಿದವರು ಕಂಡಂತೆ’, ‘ಕಿಚ್ಚ’, ‘ಕಿರಿಕ್ ಪಾರ್ಟಿ’ ಮುಂತಾದ ಸಿನಿಮಾಗಳಲ್ಲಿ ದಿನೇಶ್ ಮಂಗಳೂರು ಅವರು ನಟಿಸಿದ್ದರು. ಕನ್ನಡ ಚಿತ್ರರಂಗದಲ್ಲಿ ಅವರು ಬಹುಬೇಡಿಕೆಯ ಪೋಷಕ ನಟನಾಗಿ ಅವರು ಗುರುತಿಸಿಕೊಂಡಿದ್ದರು. ದಿನೇಶ್ ಮಂಗಳೂರು ನಿಧನಕ್ಕೆ ಚಿತ್ರರಂಗದ ಅನೇಕರು ಕಂಬನಿ ಮಿಡಿಯುತ್ತಿದ್ದಾರೆ.
ಬಣ್ಣದ ಲೋಕದಲ್ಲಿ ದಿನೇಶ್ ಮಂಗಳೂರು ಅವರು ಅಪಾರ ಅನುಭವ ಹೊಂದಿದ್ದರು. ‘ಕಾಂತಾರ’ ಚಿತ್ರದ ಶೂಟಿಂಗ್​ ವೇಳೆ ಅವರಿಗೆ ಪಾರ್ಶ್ವವಾಯು ಆಗಿತ್ತು. ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಆದರೆ ಒಂದು ವಾರದ ಹಿಂದೆ ಅವರು ಮತ್ತೆ ಅಸ್ವಸ್ಥರಾಗಿದ್ದರು. ಅಂಕದಕಟ್ಟೆ ಸರ್ಜನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ನಟ ಮಂಗಳೂರು ದಿನೇಶ್​ ಮರಣ ಹೊಂದಿದ್ದಾರೆ.

ಮಂಗಳೂರು ದಿನೇಶ್ ಅವರ ಅಗಲಿಕೆಯಿಂದ ಅಭಿಮಾನಿಗಳಿಗೆ, ಆಪ್ತರಿಗೆ, ಕುಟುಂಬದವರಿಗೆ ತೀವ್ರ ನೋವುಂಟಾಗಿದೆ. ‘ಕಲಾ ನಿರ್ದೇಶಕ, ಕಲಾವಿದ, ನಿರ್ಮಾಪಕ, ಸನ್ಮಿತ್ರ ದಿನೇಶ್ ಮಂಗ್ಳುರ್ ಇನ್ನಿಲ್ಲ. ಹೋಗಿ ಬಾ ಮಿತ್ರಾ’ ಎಂದು ನಿರ್ದೇಶಕ ಪಿ. ಶೇಷಾದ್ರಿ ಅವರು ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

Related Posts

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

Yash: ಮುಂಬೈನಲ್ಲಿ ಪತ್ನಿ ರಾಧಿಕಾ ಪಂಡಿತ್ ಜೊತೆ ಕಾಣಿಸಿಕೊಂಡ ಯಶ್ ಅವರ ಹೊಸ ಅವತಾರ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ. ಯಶ್ ಭಾರತೀಯ ಸಿನೆಮಾ ಲೋಕವೇ ಹಿಂತಿರುಗಿ ನೋಡುವಂತೆ ಮಾಡಿದ ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್ ಸಿನಿಮಾದ ಬಳಿಕ…

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ ಮೈಸೂರು ಜಿಲ್ಲೆಯ ಕಣಗಾಲ್‌ ಗ್ರಾಮದಲ್ಲಿರುವ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ಮನೆಯನ್ನು ಮ್ಯೂಸಿಯಂ ಆಗಿ ಪರಿವರ್ತಿಸುತ್ತಿರುವುದು ಇದೇ ಮೊದಲು. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!