ಹೋಮ್ ವರ್ಕ್​ ಮಾಡಿಲ್ಲ ಎಂದು ವಿದ್ಯಾರ್ಥಿನಿ ಆತ್ಮಹ*?

ಪ್ರೌಢಶಾಲೆ ವಿದ್ಯಾರ್ಥಿನಿಯಾಗಿದ್ದ ಬಾಲಕಿ ಸಾಕಷ್ಟು ಹೋಮ್ ವರ್ಕ್ ಮಾಡದೇ ಹಾಗೇ ಇಟ್ಟುಕೊಂಡಿದ್ದಳು. ಶಿಕ್ಷಕರು ಹೋಮ್ ವರ್ಕ್ ಕೇಳುತ್ತಾರೆ ಅನ್ನೋ ಭಯದಿಂದ ಮೊನ್ನೆ ಶಾಲೆ ಬಿಟ್ಟು ಮನೆಯಲ್ಲಿ ಉಳಿದಿದ್ದಳು.
ಬೆಂಗಳೂರು: 10ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬರು ನೇಣಿಗೆ ಶರಣಾಗಿದ್ದು ಶಾಲೆಯ ಹೋಮ್​ ವರ್ಕ್​​ ಒತ್ತಡದಿಂದ ಹೀಗೆ ಮಾಡಿಕೊಂಡಿದ್ದಾಳೆ ಎಂದು ಅನುಮಾನ ವ್ಯಕ್ತಪಡಿಸಲಾಗಿದೆ. ಬೆಂಗಳೂರು ಉತ್ತರ ತಾಲೂಕಿನ ದಾಸನಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ದಾಸನಪುರ ಗ್ರಾಮದ ನಿವಾಸಿ ರಾಮು ಮತ್ತು ಶೋಭ ದಂಪತಿಯ ಮಗಳು ಕುಸುಮ (15) ಜೀವ ಕಳೆದುಕೊಂಡವರು. ಮಾಕಳಿಯ ಸೃಷ್ಟಿ ಪ್ರೌಢಶಾಲೆಯ ವಿದ್ಯಾರ್ಥಿನಿಯಾಗಿದ್ದ ಕುಸುಮ ಸಾಕಷ್ಟು ಹೋಮ್ ವರ್ಕ್ ಮಾಡದೇ ಹಾಗೇ ಇಟ್ಟುಕೊಂಡಿದ್ದಳು. ಶಿಕ್ಷಕರು ಹೋಮ್ ವರ್ಕ್ ಕೇಳುತ್ತಾರೆ ಅನ್ನೋ ಭಯದಿಂದ ಮೊನ್ನೆ ಶಾಲೆ ಬಿಟ್ಟು ಮನೆಯಲ್ಲಿ ಉಳಿದಿದ್ದಳು.

ಹೋಮ್ ವರ್ಕ್ ಮಾಡಿಲ್ಲ ಅಂದರೆ ಟೀಚರ್ ಹೊಡೆಯುತ್ತಾರೆ ಎನ್ನುವ ಭಯ, ಶಾಲೆಗೆ ರಜೆ ಹಾಕಿದರೆ ಪೋಷಕರು ಬೈಯ್ಯುತ್ತಾರೆ ಎನ್ನುವ ಮನಸ್ಥಿತಿಯಲ್ಲಿ ಕುಸುಮ ಮನನೊಂದಿದ್ದಳು. ಹೀಗಾಗಿ ಮನೆಯಲ್ಲಿ ಯಾರು ಇಲ್ಲದ ವೇಳೆ ಬಾಲಕಿ ನೇಣಿನ ಕುಣಿಕೆಗೆ ಕೊರಳೊಡ್ಡಿದ್ದಾಳೆ. ಸದ್ಯ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತ ದೇಹ ಹಸ್ತಾಂತರ ಮಾಡಲಾಗಿದೆ.

ಸದ್ಯ ಈ ಸಂಬಂಧ ಶಾಲಾ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದ್ದು, ಎಲ್ಲಾ ಮಕ್ಕಳಿಗೂ ಒಂದೇ ರೀತಿ ಹೋಮ್ ವರ್ಕ್ ನೀಡಲಾಗಿದೆ. ಅವರ ಸಾವಿಗೆ ಬೇರೆ ಕಾರಣವೂ ಇರಬಹುದು. ಪೊಲೀಸರ ತನಿಖೆ ಬಳಿಕ ಸತ್ಯ ಹೊರ ಬರುತ್ತದೆ ಎಂದು ಘಟನೆ ಕುರಿತಂತೆ ಶಾಲೆಯ ಮುಖ್ಯ ಶಿಕ್ಷಕ ಅಶೋಕ್ ಅವರು ಹೇಳಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!