‘ಬುರುಡೆ’ ಗ್ಯಾಂಗ್​​ಗೆ ನೋಟಿಸ್ ಸಾಧ್ಯತೆ? ಇವರು ಮಾಡಿದ್ದು ಅಂತಿಂತಾ ಪ್ಲಾನ್ ಅಲ್ಲ, ಬಾಯ್ಬಿಟ್ಟ ಚಿನ್ನಯ್ಯ!

ಸುಳ್ಳಿನ ಕಥೆ ಕಟ್ಟಿರೋದಾಗಿ ಚಿನ್ನಯ್ಯ ತಪ್ಪೊಪ್ಪಿಕೊಂಡಿದ್ದಾನೆ ಎಂದು ವರದಿ ಆಗಿದೆ. ತಲೆ ಬುರುಡೆ ತಂದು ದೂರು ಕೊಟ್ಟ ಚಿನ್ನಯ್ಯನಿಗೆ ಆ ಬುರುಡೆ ತಂದು ಕೊಟ್ಟಿದ್ಯಾರು ಎನ್ನುವ ಬಗ್ಗೆ ಇಂದು ವಿಚಾರಣೆ ನಡೆಯುವ ಸಾಧ್ಯತೆ ಇದೆ ಎನ್ನಲಾಗ್ತಿದೆ.
ದಕ್ಷಿಣ ಕನ್ನಡ: ಧರ್ಮಸ್ಥಳದಲ್ಲಿ ಶವಗಳನ್ನ ಹೂತಿಟ್ಟ ಆರೋಪ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್​ಐಟಿ ದೂರದಾರನನ್ನು ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಿದೆ. ನಿನ್ನೆ ಭಾನುವಾರವಾದ ಹಿನ್ನೆಲೆ ಇಡಿ ವಿಚಾರಣೆ ನಡೆಸಿಲ್ಲ. ಇಂದು ತನಿಖೆ ಚುರುಕುಗೊಂಡಿದೆ. ಬೆಳ್ತಂಗಡಿ ಎಸ್ ಐ ಟಿ ಕಚೇರಿಗೆ ಎಸ್ ಪಿ ಜಿತೇಂದ್ರ ಕುಮಾರ್ ದಯಾಮ ಆಗಮಿಸಿದ್ದು, ಚಿನ್ನಯ್ಯನ ಬಳಿ ಮತ್ತಷ್ಟು ಸತ್ಯ ಹೊರಹಾಕಿಸಲು ಮುಂದಾಗಿದ್ದಾರೆ. ಇತ್ತ ಬುರುಡೆ ಗ್ಯಾಂಗ್​​ಗೂ ನೋಟಿಸ್​ ನೀಡುವ ಸಾಧ್ಯತೆ ಕೂಡ ಇದೆ ಎನ್ನಲಾಗ್ತಿದೆ.

ಎಸ್​ಐಟಿ ಕಚೇರಿಯಲ್ಲಿರುವ ಮಾಸ್ಕ್​ ಮ್ಯಾನ್​​ ಚಿನ್ನಯ್ಯನಿಗೆ ಫುಲ್ ಕ್ಲಾಸ್​ ತೆಗೆದುಕೊಳ್ಳಲು ಆಫೀಸರ್ಸ್​ ರೆಡಿಯಾಗಿದ್ದಾರೆ. ಸುಳ್ಳಿನ ಕಥೆ ಕಟ್ಟಿರೋದಾಗಿ ಚಿನ್ನಯ್ಯ ತಪ್ಪೊಪ್ಪಿಕೊಂಡಿದ್ದಾನೆ ಎಂದು ವರದಿ ಆಗಿದೆ. ತಲೆ ಬುರುಡೆ ತಂದು ದೂರು ಕೊಟ್ಟ ಚಿನ್ನಯ್ಯನಿಗೆ ಆ ಬುರುಡೆ ತಂದು ಕೊಟ್ಟಿದ್ಯಾರು ಎನ್ನುವ ಬಗ್ಗೆ ಇಂದು ವಿಚಾರಣೆ ನಡೆಯುವ ಸಾಧ್ಯತೆ ಇದೆ ಎನ್ನಲಾಗ್ತಿದೆ.
ಯಾರ್ಯಾರಿಗೆ ನೋಟಿಸ್​ ಸಾಧ್ಯತೆ, ಬೆಳ್ತಂಗಡಿ ಎಸ್ ಐ ಟಿ ಕಚೇರಿಯಲ್ಲಿ ಮಾಸ್ಕ್ ಮ್ಯಾನ್ ಚಿನ್ನಯ್ಯನ ತೀವ್ರ ವಿಚಾರಣೆ ನಡೆದಿದೆ. ಇಂದು ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಗಿರೀಶ್ ಮಟ್ಟಣ್ಣನವರ್‌ಗಳಿಗೆ ಎಸ್ ಐ ಟಿ ನೋಟಿಸ್ ಜಾರಿಯಾಗುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ತಿಮರೋಡಿ ಮತ್ತು ಮಟ್ಟಣ್ಣನವರ್‌ ಅವರ ಸಂಪರ್ಕದ ಬಗ್ಗೆ ಎಸ್ ಐ ಟಿ ತೀವ್ರ ವಿಚಾರಣೆ ನಡೆಸುತ್ತಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!