ಸ್ಟಾರ್ ಹೀರೋ ಜೊತೆ ಸುಕ್ಕಾ ಸೂರಿ ಹೊಸ ಸಿನಿಮಾ, ಶೀಘ್ರವೇ ಪ್ರಾರಂಭ…..!

ಸುಕ್ಕಾ ಸೂರಿ ಕನ್ನಡ ಚಿತ್ರರಂಗದ ಭಿನ್ನ ದನಿಯ ನಿರ್ದೇಶಕ. ಅವರ ಸಿನಿಮಾ ಕಟ್ಟುವ ರೀತಿಗೆ, ಕತೆ ಹೇಳುವ ಪರಿಗೆ ದೊಡ್ಡ ಅಭಿಮಾನಿ ವರ್ಗವಿದೆ. ಆದರೆ ಯಾಕೋ ಇತ್ತೀಚೆಗೆ ಯಶಸ್ಸು ಸುಕ್ಕಾ ಸೂರಿಯ ಕೈ ಹಿಡಿದಿಲ್ಲ. ಸೂರಿ ನಿರ್ದೇಶಿಸಿದ್ದ ಈ ಹಿಂದಿನ ಸಿನಿಮಾ ‘ಬ್ಯಾಡ್ ಮ್ಯಾನರ್ಸ್’ ಫ್ಲಾಪ್ ಆಯ್ತು. ಭಾರಿ ನಿರೀಕ್ಷೆಯನ್ನು ಅಭಿಮಾನಿಗಳು ಈ ಸಿನಿಮಾ ಮೇಲಿರಿಸಿದ್ದರು. ಆದರೆ ಸಿನಿಮಾ ನಿರೀಕ್ಷಿತ ಯಶಸ್ಸು ಗಳಿಸಲಿಲ್ಲ. ಇದೀಗ ಸೂರಿ ಹೊಸ ಸಿನಿಮಾಕ್ಕೆ ಕೈ ಹಾಕಿದ್ದು, ಕನ್ನಡದ ಸ್ಟಾರ್ ನಟರೊಬ್ಬರೊಟ್ಟಿಗೆ ಮಾತುಕತೆ ಚಾಲ್ತಿಯಲ್ಲಿದೆ.

ಪ್ಯಾನ್ ಇಂಡಿಯಾ ನಟನಾಗಿ ಗುರುತಿಸಿಕೊಳ್ಳುತ್ತಿರುವ ಧ್ರುವ ಸರ್ಜಾ ಅವರೊಟ್ಟಿಗೆ ಸಿನಿಮಾ ಮಾಡಲು ಸೂರಿ ಮುಂದಾಗಿದ್ದಾರೆ. ಕೆಲ ಮೂಲಗಳ ಪ್ರಕಾರ ಇಬ್ಬರ ನಡುವೆ ಒಂದು ಹಂತದ ಮಾತುಕತೆ ಪೂರ್ಣವಾಗಿದೆಯಂತೆ. ಧ್ರುವ ಅವರ ಇಮೇಜಿಗೆ ತಕ್ಕಂತೆ ಆಕ್ಷನ್ ಸಿನಿಮಾ ನಿರ್ದೇಶಿಸಲು ಸೂರಿ ಮುಂದಾಗಿದ್ದಾರೆ. ಸೂರಿಯ ಭಿನ್ನ ಸಿನಿಮಾ ಮೇಕಿಂಗ್ ಮತ್ತು ಧ್ರುವ ಅವರ ಪವರ್ ಹೌಸ್ ಆಕ್ಷನ್ ಇಮೇಜು ಎರಡಕ್ಕೂ ಹೊಂದಿಕೆ ಆಗುವ ಕತೆ ತೆರೆಯ ಮೇಲೆ ಬರಲಿದೆ ಎನ್ನಲಾಗುತ್ತಿದೆ.

ಸೂರಿ ಅವರು ಯುವ ರಾಜ್​ಕುಮಾರ್ ಅವರಿಗಾಗಿ ಸಿನಿಮಾ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ‘ಎಕ್ಕ’ ಸಿನಿಮಾದ ಬಿಡುಗಡೆ ಬಳಿಯ ಸೂರಿ ಮತ್ತು ಯುವರಾಜ್ ಕುಮಾರ್ ಅವರ ಸಿನಿಮಾ ಸೆಟ್ಟೇರಲಿದೆ ಎನ್ನಲಾಗಿತ್ತು. ಆದರೆ ಆ ಸಿನಿಮಾ ಕಾರಣಾಂತರಗಳಿಂದಾಗಿ ಮುಂದೆ ಹೋಗಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಯುವ ರಾಜ್​ಕುಮಾರ್ ಅವರ ಬೇರೆ ಸಿನಿಮಾದ ಕಮಿಟ್​ಮೆಂಟ್​ ನಿಂದಾಗಿ ಸೂರಿ ಜೊತೆಗಿನ ಸಿನಿಮಾ ಮುಂದೂಡಲ್ಪಟ್ಟಿದೆ ಎಂಬ ಸುದ್ದಿ ಇದೆ.

ಇನ್ನು ಧ್ರುವ ಸರ್ಜಾ ಪ್ರಸ್ತುತ ‘ಕೆಡಿ’ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಪ್ರೇಮ್ ನಿರ್ದೇಶನ ಮಾಡುತ್ತಿರುವ ಈ ಸಿನಿಮಾ ಪ್ಯಾನ್ ಇಂಡಿಯಾ ಲೆವೆಲ್​​ನಲ್ಲಿ ಬಿಡುಗಡೆ ಆಗಲಿದೆ. ಸಿನಿಮಾನಲ್ಲಿ ಸಂಜಯ್ ದತ್, ರಮೇಶ್ ಅರವಿಂದ್, ಶಿಲ್ಪಾ ಶೆಟ್ಟಿ, ರವಿಚಂದ್ರನ್, ರೀಷ್ಮಾ ನಾಣಯ್ಯ, ಅಭಿಜಿತ್ ಇನ್ನೂ ಕೆಲವು ಪ್ರಮುಖ ನಟರುಗಳು ನಟಿಸಿದ್ದಾರೆ. ಸಿನಿಮಾ ಕೆಲವೇ ತಿಂಗಳಲ್ಲಿ ಬಿಡುಗಡೆ ಆಗಲಿದೆ.

‘ದುನಿಯಾ’, ‘ಟಗರು’, ‘ಅಣ್ಣಾ ಬಾಂಡ್’, ‘ಜಾಕಿ’, ‘ಕಡ್ಡಿಪುಡಿ’, ‘ಜಂಗ್ಲಿ’, ‘ಕೆಂಡಸಂಪಿಗೆ’, ‘ಪಾಪ್ ಕಾರ್ನ್ ಮಂಕಿ ಟೈಗರ್’ ಅಂಥಹಾ ಸಿನಿಮಾಗಳನ್ನು ನೀಡಿರುವ ಸೂರಿಗೆ ‘ಬ್ಯಾಡ್ ಮ್ಯಾನರ್ಸ್’ ಸಿನಿಮಾದ ಸೋಲಿನಿಂದ ಸಣ್ಣ ಹಿನ್ನಡೆ ಆಗಿದ್ದು, ಈಗ ಮತ್ತೊಂದು ಹಿಟ್ ಮೂಲಕ ರೀಎಂಟ್ರಿಗೆ ಸಜ್ಜಾಗುತ್ತಿದ್ದಾರೆ.

 

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು