ನಾಡಿನೆಲ್ಲೆಡೆ ಗೌರಿ ಗಣೇಶ ಹಬ್ಬದ ಸಂಭ್ರಮ.. !

ಇಂದು ನಾಡಿನೆಲ್ಲೆಡೆ ಗೌರಿಗಣೇಶ ಹಬ್ಬವನ್ನು ಭಕ್ತಿಯಿಂದ ಸಡಗರ, ಸಂಭ್ರಮದಿಂದ ಆಚರಿಸಲಾಗುತ್ತಿದೆ. ಎಲ್ಲರ ಮನೆಮನೆಗಳಲ್ಲಿ ವಿನಾಯಕನ ವಿಗ್ರಹ ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ಗಣಪತಿಯ ಆರಾಧನೆ ಶ್ರೆದ್ಧೆ, ಭಕ್ತಿಯಿಂದ ನಡೆಯುತ್ತಿದೆ. ಗಣೇಶನ ಮೂರ್ತಿ ನೋಡಿ ಫುಲ್ ಖುಷಿಯಲ್ಲಿರುವ ಮಕ್ಕಳು ಹೊಸ ಉಡುಪುಗಳಲ್ಲಿ ಕಂಗೊಳಿಸುತ್ತಿದ್ದಾರೆ.

ಉದ್ಯಾನ ನಗರಿಯಲ್ಲೂ ಯಾವುದಕ್ಕೂ ಏನು ಕಡಿಮೆ ಇಲ್ಲದಂತೆ ಬೀದಿ ಬೀದಿಗಳಲ್ಲೂ ವಿಘ್ನ ನಿವಾರಕ, ವಿಘ್ನವಿನಾಶಕ, ಮೂಷಿಕ ವಾಹನ, ಮೋದಕ ಪ್ರಿಯ, ವಿನಾಯಕ, ಗಣೇಶನ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗುತ್ತಿದೆ. ಇಂದೇ ಹಬ್ಬವಾಗಿದ್ದರಿಂದ ಬಹುತೇಕ ಕಡೆ ಹೆಚ್ಚು ಗಣಪತಿ ಮೂರ್ತಿಗಳನ್ನ ಯುವಕರು ಪ್ರತಿಷ್ಠಾಪನೆ ಮಾಡುತ್ತಾರೆ. ಬೆಂಗಳೂರಿನ ದೊಡ್ಡ ಗಣೇಶ ದೇಗುಲದಲ್ಲಿ ಹಬ್ಬರ ಸಡಗರ ಕಳೆಗಟ್ಟಿದೆ.

ದೊಡ್ಡ ಗಣೇಶ ದೇವಾಲಯದಲ್ಲಿ ಮುಂಜಾನೆಯಿಂದಲೇ ವಿವಿಧ ಪೂಜೆ ಪುನಸ್ಕಾರ, ಹೋಮ ನಡೆಯುತ್ತಿದ್ದು, ಗಣೇಶನ ದರ್ಶನಕ್ಕೆ ಭಕ್ತರು ಬೆಳಗ್ಗೆಯಿಂದಲೇ ಕ್ಯೂನಲ್ಲಿ ನಿಂತು ದರ್ಶನ ಪಡೆಯುತ್ತಿದ್ದಾರೆ. ಭಕ್ತರಿಗೆ ಪ್ರಸಾದ ನೀಡಲಾಗುತ್ತಿದೆ. ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ರಾತ್ರಿಯಿಂದಲೇ ದೇವಾಲಯದಲ್ಲಿ ಪೂಜೆ ಸಂಬಂಧ ಕೆಲಸಗಳು, ದೇಗುಲದ ಅಲಂಕಾರ ಸೇರಿ ಎಲ್ಲವನ್ನು ಮಾಡಲಾಗಿತ್ತು.

ಇನ್ನು ಮಾರುಕಟ್ಟೆಗಳಲ್ಲಿ ಗಣೇಶನ ಮೂರ್ತಿ, ಹೂವು, ಹಣ್ಣುಗಳು ಮತ್ತು ಪೂಜಾ ಸಾಮಗ್ರಿಗಳನ್ನು ಖರೀದಿಸಲು ಜನಸಂದಣಿ ಹೆಚ್ಚಿದೆ, ನಗರಗಳಲ್ಲಿ ಸಂಚಾರ ದಟ್ಟಣೆಯೂ ಏರ್ಪಟ್ಟಿದೆ. ಕೆಲವೆಡೆ ಬೆಳಗಿನ ಜಾವಾ ತುಂತುರು ಮಳೆಯಾಗಿದ್ದು ಚಳಿ ಕೂಡ ಮೈಕೊರೆಯುತ್ತಿತ್ತು. ಹಬ್ಬವಾಗಿದ್ದರಿಂದ ಜನರು ಯಾವುದನ್ನೂ ಲೆಕ್ಕಿಸದೇ ವಿನಾಯಕನ ಪೂಜೆಗಳಲ್ಲಿ ತೊಡಗಿಕೊಳ್ಳುತ್ತಾರೆ.

Related Posts

2026 ರ ಬಜೆಟ್​​ನಲ್ಲಿ ರಾಜ್ಯದ ಜನರಿಗೆ ಏನೆಲ್ಲಾ ಸಿಕ್ತು?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಈ ಮಹತ್ವದ ಆಯವ್ಯಯ ಮಂಡಿಸುತ್ತಿದ್ದಾರೆ. ಇದು ಕೇವಲ ಬಜೆಟ್ ಮಾತ್ರವಲ್ಲ, ರಾಜ್ಯದ ಇತಿಹಾಸದಲ್ಲೇ ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ 17ನೇ ಬಜೆಟ್ ಆಗಿದ್ದು, ಇದೊಂದು ಹೊಸ ಮೈಲುಗಲ್ಲಾಗಿದೆ.ಕರುನಾಡಿನ ರಾಜಕೀಯ ಮತ್ತು ಆರ್ಥಿಕ ವಲಯದಲ್ಲಿ ಈಗ ಎಲ್ಲರ ಕಣ್ಣು…

ಎರಡೆರಡು ಇತಿಹಾಸ ನಿರ್ಮಿಸಲಿದೆ ಟೀಂ ಇಂಡಿಯಾ!

  2026ರ ಟಿ20 ವಿಶ್ವಕಪ್​ನ ಎರಡನೇ ಸೆಮಿಫೈನಲ್‌ನಲ್ಲಿ ಭಾರತ ಇಂಗ್ಲೆಂಡ್ ತಂಡವನ್ನು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಎದುರಿಸಲಿದೆ. ಹಾಲಿ ಚಾಂಪಿಯನ್ ಭಾರತ, ಸತತ ಎರಡನೇ ಬಾರಿಗೆ ಫೈನಲ್ ಪ್ರವೇಶಿಸಿ ಇತಿಹಾಸ ಸೃಷ್ಟಿಸುವ ಗುರಿಯಲ್ಲಿದೆ. ಹಿಂದಿನ ದಾಖಲೆಗಳನ್ನು ಮುರಿದು, ಸತತ ಫೈನಲ್ ತಲುಪುವ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!