ನಾಡಿನೆಲ್ಲೆಡೆ ಗೌರಿ ಗಣೇಶ ಹಬ್ಬದ ಸಂಭ್ರಮ.. !

ಇಂದು ನಾಡಿನೆಲ್ಲೆಡೆ ಗೌರಿಗಣೇಶ ಹಬ್ಬವನ್ನು ಭಕ್ತಿಯಿಂದ ಸಡಗರ, ಸಂಭ್ರಮದಿಂದ ಆಚರಿಸಲಾಗುತ್ತಿದೆ. ಎಲ್ಲರ ಮನೆಮನೆಗಳಲ್ಲಿ ವಿನಾಯಕನ ವಿಗ್ರಹ ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ಗಣಪತಿಯ ಆರಾಧನೆ ಶ್ರೆದ್ಧೆ, ಭಕ್ತಿಯಿಂದ ನಡೆಯುತ್ತಿದೆ. ಗಣೇಶನ ಮೂರ್ತಿ ನೋಡಿ ಫುಲ್ ಖುಷಿಯಲ್ಲಿರುವ ಮಕ್ಕಳು ಹೊಸ ಉಡುಪುಗಳಲ್ಲಿ ಕಂಗೊಳಿಸುತ್ತಿದ್ದಾರೆ.

ಉದ್ಯಾನ ನಗರಿಯಲ್ಲೂ ಯಾವುದಕ್ಕೂ ಏನು ಕಡಿಮೆ ಇಲ್ಲದಂತೆ ಬೀದಿ ಬೀದಿಗಳಲ್ಲೂ ವಿಘ್ನ ನಿವಾರಕ, ವಿಘ್ನವಿನಾಶಕ, ಮೂಷಿಕ ವಾಹನ, ಮೋದಕ ಪ್ರಿಯ, ವಿನಾಯಕ, ಗಣೇಶನ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗುತ್ತಿದೆ. ಇಂದೇ ಹಬ್ಬವಾಗಿದ್ದರಿಂದ ಬಹುತೇಕ ಕಡೆ ಹೆಚ್ಚು ಗಣಪತಿ ಮೂರ್ತಿಗಳನ್ನ ಯುವಕರು ಪ್ರತಿಷ್ಠಾಪನೆ ಮಾಡುತ್ತಾರೆ. ಬೆಂಗಳೂರಿನ ದೊಡ್ಡ ಗಣೇಶ ದೇಗುಲದಲ್ಲಿ ಹಬ್ಬರ ಸಡಗರ ಕಳೆಗಟ್ಟಿದೆ.

ದೊಡ್ಡ ಗಣೇಶ ದೇವಾಲಯದಲ್ಲಿ ಮುಂಜಾನೆಯಿಂದಲೇ ವಿವಿಧ ಪೂಜೆ ಪುನಸ್ಕಾರ, ಹೋಮ ನಡೆಯುತ್ತಿದ್ದು, ಗಣೇಶನ ದರ್ಶನಕ್ಕೆ ಭಕ್ತರು ಬೆಳಗ್ಗೆಯಿಂದಲೇ ಕ್ಯೂನಲ್ಲಿ ನಿಂತು ದರ್ಶನ ಪಡೆಯುತ್ತಿದ್ದಾರೆ. ಭಕ್ತರಿಗೆ ಪ್ರಸಾದ ನೀಡಲಾಗುತ್ತಿದೆ. ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ರಾತ್ರಿಯಿಂದಲೇ ದೇವಾಲಯದಲ್ಲಿ ಪೂಜೆ ಸಂಬಂಧ ಕೆಲಸಗಳು, ದೇಗುಲದ ಅಲಂಕಾರ ಸೇರಿ ಎಲ್ಲವನ್ನು ಮಾಡಲಾಗಿತ್ತು.

ಇನ್ನು ಮಾರುಕಟ್ಟೆಗಳಲ್ಲಿ ಗಣೇಶನ ಮೂರ್ತಿ, ಹೂವು, ಹಣ್ಣುಗಳು ಮತ್ತು ಪೂಜಾ ಸಾಮಗ್ರಿಗಳನ್ನು ಖರೀದಿಸಲು ಜನಸಂದಣಿ ಹೆಚ್ಚಿದೆ, ನಗರಗಳಲ್ಲಿ ಸಂಚಾರ ದಟ್ಟಣೆಯೂ ಏರ್ಪಟ್ಟಿದೆ. ಕೆಲವೆಡೆ ಬೆಳಗಿನ ಜಾವಾ ತುಂತುರು ಮಳೆಯಾಗಿದ್ದು ಚಳಿ ಕೂಡ ಮೈಕೊರೆಯುತ್ತಿತ್ತು. ಹಬ್ಬವಾಗಿದ್ದರಿಂದ ಜನರು ಯಾವುದನ್ನೂ ಲೆಕ್ಕಿಸದೇ ವಿನಾಯಕನ ಪೂಜೆಗಳಲ್ಲಿ ತೊಡಗಿಕೊಳ್ಳುತ್ತಾರೆ.

Related Posts

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!