ಬಾಕ್ಸ್ ​​ಆಫೀಸ್​​ನಲ್ಲಿ ಹೊಸ ದಾಖಲೆ ಸೃಷ್ಟಿಸಿದ ‘ಮಹಾವತಾರ್ ನರಸಿಂಹ’

ಹೊಂಬಾಳೆ ಫಿಲಮ್ಸ್ ಪ್ರಸ್ತುತ ಪಡಿಸಿ, ದೇಶದಾದ್ಯಂತ ವಿತರಣೆ ಸಹ ಮಾಡಿರುವ ‘ಮಹಾವತಾರ್ ನರಸಿಂಹ’ ಅನಿಮೇಷನ್ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಹೊಸ ದಾಖಲೆ ಬರೆದಿದೆ. ಜುಲೈ 25 ರಂದು ಬಿಡುಗಡೆ ಆಗಿದ್ದ ಈ ಸಿನಿಮಾ ‘ಕೂಲಿ’, ‘ವಾರ್ 2‘, ‘ಸು ಫ್ರಂ ಸೋ’, ‘ಕಿಂಗ್ಡಮ್’ ಇನ್ನೂ ಕೆಲ ಸಿನಿಮಾಗಳ ಎದುರು ಗಟ್ಟಿಯಾಗಿ ನಿಂತು ಬಾಕ್ಸ್ ಆಫೀಸ್​​ನಲ್ಲಿ ಭಾರಿ ದೊಡ್ಡ ಗೆಲುವನ್ನು ತನ್ನದಾಗಿಸಿಕೊಂಡಿದೆ.
‘ಕೂಲಿ’, ‘ವಾರ್ 2’ ಅದಕ್ಕೂ ಮುಂಚೆ ‘ಕಿಂಗ್ಡಮ್’, ‘ಸು ಫ್ರಂ ಸೋ’ ಸಿನಿಮಾಗಳ ಅಬ್ಬರಗಳ ಎದುರು ಅಲುಗದೆ ನಿಂತ ‘ಮಹಾವತಾರ್ ನರಸಿಂಹ’ ಸಿನಿಮಾ ಭಾರತೀಯ ಬಾಕ್ಸ್ ಆಫೀಸ್​​ನಲ್ಲಿ ಹೊಸ ಮೈಲಿಗಲ್ಲಿ ಸ್ಥಾಪನೆ ಮಾಡಿದೆ. ಹಿಂದೆಂದೂ ಯಾವ ಅನಿಮೇಷನ್ ಸಿನಿಮಾ ಸಹ ಸೃಷ್ಟಿಸದ ದಾಖಲೆಯೊಂದನ್ನು ಸೃಷ್ಟಿಸಿದೆ ಈ ಸಿನಿಮಾ.

‘ಮಹಾವತಾರ್ ನರಸಿಂಹ’ ಸಿನಿಮಾ ಜುಲೈ 25 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿತ್ತು. ಹೊಂಬಾಳೆ ಫಿಲಮ್ಸ್​ನವರ ಬೆಂಬಲದಿಂದಾಗಿ ಸಿನಿಮಾ ಕನ್ನಡ, ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ದೇಶದೆಲ್ಲೆಡೆ ಪ್ರಮುಖ ನಗರಗಳಲ್ಲಿ ಬಿಡುಗಡೆ ಆಯ್ತು. ಆರಂಭದಲ್ಲಿ ಹೆಚ್ಚು ಸದ್ದು ಮಾಡದಿದ್ದರೂ ಕೇವಲ ಒಂದೇ ವಾರದಲ್ಲಿ ತನ್ನ ಕಂಟೆಂಟ್ ಹಾಗೂ ಹೊಂಬಾಳೆಯು ಶಕ್ತಿಯುತ ಮಾರ್ಕೆಟಿಂಗ್​​ನಿಂದಾಗಿ ಪ್ರೇಕ್ಷಕರನ್ನು ಸೆಳೆಯಲು ಆರಂಭಿಸಿತು.

 

ಇದೀಗ ಸಿನಿಮಾ ಬಿಡುಗಡೆ ಆಗಿ 30 ದಿನಗಳ ಬಳಿಕ ‘ಮಹಾವತಾರ್ ನರಸಿಂಹ’ ಸಿನಿಮಾ 300 ಕೋಟಿ ರೂಪಾಯಿಗೆ ಹೆಚ್ಚಿನ ಗಳಿಕೆ ಮಾಡಿದೆ. ಭಾರತದ ಇನ್ಯಾವುದೇ ಅನಿಮೇಷನ್ ಸಿನಿಮಾ ಸಹ ಇಷ್ಟು ದೊಡ್ಡ ಮೊತ್ತದ ಹಣವನ್ನು ಈ ವರೆಗೆ ಗಳಿಕೆ ಮಾಡಿಲ್ಲ. ಭಾರತದ ಅನಿಮೇಷನ್ ಸಿನಿಮಾಗಳು ಮಾತ್ರವೇ ಅಲ್ಲದೆ. ವಿದೇಶದ ಅನಿಮೇಷನ್ ಸಿನಿಮಾಗಳು ಸಹ ಭಾರತದಲ್ಲಿ ಇಷ್ಟು ದೊಡ್ಡ ಮೊತ್ತದ ಗಳಿಕೆ ಮಾಡಿಲ್ಲ. ಕಳೆದೆರಡು ವರ್ಷಗಳಲ್ಲಿ ಬಿಡುಗಡೆ ಆದ ‘ಸ್ಪೈಡರ್​​ಮ್ಯಾನ್’, ‘ಡಾಕ್ಟರ್ ಸ್ಟ್ರೇಂಜ್’, ‘ಥಾರ್’, ‘ಅವತಾರ್’ ಸಿನಿಮಾಗಳೂ ಸಹ ಇಷ್ಟು ದೊಡ್ಡ ಮೊತ್ತದ ಹಣವನ್ನು ಭಾರತದ ಬಾಕ್ಸ್ ಆಫೀಸ್​​ನಲ್ಲಿ ಗಳಿಕೆ ಮಾಡಿಲ್ಲ ಎಂಬುದು ಗಮನಿಸಬೇಕಾದ ಅಂಶ.

‘ಮಹಾವತಾರ್ ನರಸಿಂಹ’ ಸಿನಿಮಾನಲ್ಲಿ ವಿಷ್ಣುವಿನ ನರಸಿಂಹ ಅವತಾರದ ಕತೆಯನ್ನು ಅನಿಮೇಷನ್ ಮೂಲಕ ಹೇಳಲಾಗಿದೆ. ‘ಮಹಾವತಾರ: ನರಸಿಂಹ’ ಸಿನಿಮಾವನ್ನು ಅಶ್ವಿಕ್‌ ಕುಮಾರ್‌ ನಿರ್ದೇಶನ ಮಾಡಿದ್ದಾರೆ. ಶಿಲ್ಪಾ ಧವನ್, ಕುಶಾಲ್ ದೇಸಾಯಿ, ಚೈತನ್ಯ ದೇಸಾಯಿ ನಿರ್ಮಾಣ ಮಾಡಿದ್ದಾರೆ. ಕಡಿಮೆ ಬಜೆಟ್​ ಕಾರಣದಿಂದಾಗಿ ಈ ಸಿನಿಮಾ ನಿರ್ಮಾಣ ಮಾಡಲು ಅಶ್ವಿಕ್ ಅವರಿಗೆ ಬಹಳ ಸಮಯ ಹಿಡಿಯಿತಂತೆ. ಆದರೆ ಈ ಸಿನಿಮಾ ಹಣ ಮಾಡಿರುವ ಕಾರಣ ಮುಂದಿನ ಸಿನಿಮಾಗಳನ್ನು ಅತ್ಯುತ್ತಮ ಗುಣಮಟ್ಟದಲ್ಲಿ ಪ್ರೇಕ್ಷಕರ ಮುಂದೆ ತರುವುದಾಗಿ ಅಶ್ವಿಕ್ ಹೇಳಿದ್ದಾರೆ.

“ಮಹಾವತಾರ್” ಸಿನಿಮ್ಯಾಟಿಕ್ ಯೂನಿವರ್ಸ್​ ನಿರ್ಮಿಸಲು ಚಿತ್ರತಂಡ ಮುಂದಾಗಿದ್ದು, ಭಗವಾನ್ ವಿಷ್ಣುವಿನ ದಶಾವತಾರಗಳ ಆಧಾರದ ಮೇಲೆ ಬರಲಿರುವ ಸಿನಿಮಾ ಆಗಿರಲಿದೆ. ಮುಂದಿನ ಹತ್ತು ವರ್ಷಗಳಲ್ಲಿ ‘ಮಹಾವತಾರ್’ ಯೂನಿವರ್ಸ್​ನ ಏಳು ಸಿನಿಮಾಗಳು ತೆರೆಗೆ ಬರಲಿದೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು