4 ವರ್ಷದ ಬಳಿಕ ಕಮ್​ಬ್ಯಾಕ್ ಮಾಡ್ತಾರಾ ABD?

 

ಹೋಗುತ್ವೆ. ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಡಿವಿಲಿಯರ್ಸ್​ ಡೆಡ್ಲಿ ಬ್ಯಾಟಿಂಗ್​​​ನಾ, ಕ್ರಿಕೆಟ್ ಫ್ಯಾನ್ಸ್ ಮರೆಯೋಕೆ ಸಾಧ್ಯನೆ ಇಲ್ಲ.

ಆರ್​ಸಿಬಿಯ ರಿಯಲ್ ಟ್ರಬಲ್ ಶೂಟರ್ ಆಗಿದ್ದ ಎಬಿ ಡಿವಿಲಿಯರ್ಸ್​, ಸಿಂಗಲ್ ಶೇರ್​ನಂತೆ ಘರ್ಜಿಸುತ್ತಾ ಮ್ಯಾಚ್ ಗೆಲ್ಲಿಸುತ್ತಿದ್ದ ವೀರ. ಈ ಡೆಡ್ಲಿ ಬ್ಯಾಟರ್ ಕ್ರಿಕೆಟ್ ಮೈದಾನದಿಂದ ದೂರ ಸರಿದು ವರ್ಷಗಳೇ ಉರುಳಿವೆ. ಆದ್ರೀಗ ಇದೇ ಎಬಿ ಡಿವಿಲಿಯರ್ಸ್​, ಅಭಿಮಾನಿಗಳಲ್ಲಿ ಹೊಸ ಭರವಸೆ ಹುಟ್ಟಿಹಾಕಿದ್ದಾರೆ. ಒಂದೇ ಒಂದು ಮಾತಿನಿಂದ ಆರ್​ಸಿಬಿಗೆ ಮರಳುವ ಕನಸು ಬಿಚ್ಚಿಟ್ಟಿದ್ದಾರೆ.

ಭವಿಷ್ಯದಲ್ಲಿ ನಾನು ಬೇರೆ ಯಾವುದಾದರೂ ಪಾತ್ರದಲ್ಲಿ ಐಪಿಎಲ್‌ಗೆ ಸೇರಬಹುದು. ಆದರೆ ಒಬ್ಬ ವೃತ್ತಿಪರ ಆಟಗಾರನಾಗಿ ಇಡೀ ಸೀಸನ್ ಆಡುವುದು ಸ್ವಲ್ಪ ಕಷ್ಟ. ಆ ದಿನಗಳು ಮುಗಿದು ಹೋಗಿವೆ ಎಂದು ಭಾವಿಸುತ್ತೇನೆ. ನನ್ನ ಹೃದಯ ಆರ್‌ಸಿಬಿ ಜೊತೆಗಿದೆ. ಯಾವಾಗಲೂ ಇರುತ್ತದೆ. ಆದ್ದರಿಂದ ಫ್ರಾಂಚೈಸಿ ನನಗೆ ಒಂದು ಪಾತ್ರ ಇದೆ ಎಂದು ಭಾವಿಸಿದರೆ, ಇದಕ್ಕೆ ಪೂರಕವಾಗಿ ಸಮಯ ಕೂಡಿ ಬಂದರೆ ನಾನು ಖಂಡಿತವಾಗಿಯೂ ಆರ್‌ಸಿಬಿಯಲ್ಲಿ ಇರುತ್ತೇನೆ.

ಎಬಿ ಡಿವಿಲಿಯರ್ಸ್, ಮಾಜಿ ಕ್ರಿಕೆಟರ್​

ಐಪಿಎಲ್​ ಆರಂಭದಲ್ಲಿ ಐಪಿಎಲ್​​ಗೆ ಎಂಟ್ರಿ ನೀಡಿದ್ದ ಡಿವಿಲಿಯರ್ಸ್​, ಡೆಲ್ಲಿ ಡೇರ್ ಡೆವಿಲ್ಸ್​ ತಂಡದ ಪರ ಆಡಿದ್ದರು. ಆದ್ರೆ, ಈ ಬಳಿಕ ಆರ್​ಸಿಬಿಗೆ ಎಂಟ್ರಿ ನೀಡಿದ ಎಬಿಡಿಗೆ ಬೆಂಗಳೂರೇ 2ನೇ ತವರಾಗಿತ್ತು. 2011ರಲ್ಲಿ ಆರ್​ಸಿಬಿ ಪಾಲಿನ ಆಪತ್ಬಾಂಧವನಾಗಿ ಬಂದ ಎಬಿ ಡಿವಿಲಿಯರ್ಸ್​, ಬರೋಬ್ಬರಿ 11 ವರ್ಷಗಳ ಕಾಲ ರೆಡ್ ಆರ್ಮಿಯ ರಿಯಲ್ ಮ್ಯಾಚ್ ವಿನ್ನರ್ & ಗೇಮ್ ಚೇಂಜರ್ ಆಗಿದ್ದರು. ಆದ್ರೆ, 2021ರಲ್ಲಿ ಎಲ್ಲಾ ಮಾದರಿಯಿಂದ ದೂರ ಸರಿದಿದ್ದ ಎಬಿಡಿ, ಈಗ ಮತ್ತೆ ಆರ್​ಸಿಬಿಗೆ ಕಮ್​ಬ್ಯಾಕ್ ಮಾಡುವ ಆಸೆ ಬಿಚ್ಚಿಟ್ಟಿದ್ದಾರೆ. ಆದ್ರೆ, ಆಟಗಾರನಾಗಿ ಅಲ್ಲ.

11 ವರ್ಷ ಆರ್​ಸಿಬಿ ಪರ ಆಡಿರುವ ಎಬಿ ಡಿವಿಲಿಯರ್ಸ್​, ಮತ್ತೆ ಆರ್​ಸಿಬಿ ಗ್ಯಾಂಗ್ ಸೇರುವ ಇಚ್ಚೆ ಹೊಂದಿದ್ದಾರೆ. ಆದ್ರೆ, ಬ್ಯಾಟ್ಸ್​ಮನ್​ ಆಗಿ ಅಲ್ಲ. ಹೊಸ ರೋಲ್​ನಲ್ಲಿ ಅನ್ನೋದು ಸ್ವತಃ ಡಿವಿಲಿಯರ್ಸ್ ಹೇಳಿಕೊಂಡಿದ್ದಾರೆ. ಆರ್​ಸಿಬಿ ಯಶಸ್ಸಿನ ಭಾಗವಾಗುವ ಹೆಬ್ಬಯಕೆ ಹೊಂದಿರುವ ಡಿವಿಲಿಯರ್ಸ್​, ಬ್ಯಾಕ್ ಎಂಡ್​​ನಲ್ಲಿ ಕೆಲಸ ಮಾಡುವ ಹಿಂಟ್​ ಸಹ ನೀಡಿದ್ದಾರೆ. ಹೀಗಾಗಿ ಯಾವ ರೋಲ್​​ನಲ್ಲಿ ಮಿಸ್ಟರ್ 360 ಕಾಣಿಸಿಕೊಳ್ತಾರೆ ಎಂಬ ಕ್ಯೂರಿಯಾಸಿಟಿ ಅಭಿಮಾನಿಗಳಲ್ಲಿ ಮನೆ ಮಾಡಿದೆ.

ಆರ್​ಸಿಬಿ ಜೊತೆ ಉತ್ತಮ ಬಾಂಧವ್ಯ ಹೊಂದಿರುವ ಎಬಿ ಡಿವಿಲಿಯರ್ಸ್​, ರೆಡ್ ಜೆರ್ಸಿಯಲ್ಲಿ ಕಾಣಿಸಿಕೊಳ್ಳುವ ಕನಸು ಹೊಂದಿದ್ದಾರೆ ನಿಜ. ಆದ್ರೆ, ಆ ಕನಸು ಸಾಕಾರಗೊಳ್ಳಬೇಕಾದ್ರೆ, ಅದಕ್ಕೆ ಸಮಯ, ಸಂದರ್ಭ ಕೂಡಿ ಬರಬೇಕಿದೆ. ಇದಕ್ಕೆ ಮತ್ತಷ್ಟು ದಿನಗಳು ಕಾಯಬೇಕಿದೆ. ಆದ್ರೆ, ಎಬಿ ಡಿವಿಲಿಯರ್ಸ್ ಭವಿಷ್ಯದಲ್ಲಿ​ ಆರ್​ಸಿಬಿ ಸೇರೋದಂತೂ ಸತ್ಯ.

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.30ಕ್ಕೆ

Related Posts

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ರಾಜ್ಯದಲ್ಲಿ ಈ ತಿಂಗಳಿನಿಂದ ಆರಂಭವಾಗಲಿರುವ ಎಸ್‌ಐಆರ್ (ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ವಿಧಾನಸೌಧದಲ್ಲಿ ನಡೆದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, “ಕೇರಳದ ಮಾದರಿಯಲ್ಲಿ ನಮ್ಮಲ್ಲೂ ಈ…

ಕ್ವಾಲಿಫೈಯರ್ ಆಡದೆಯೇ ಆರ್‌ಸಿಬಿ ಫೈನಲ್ ತಲುಪಬಹುದು..!

ಐಪಿಎಲ್ 2026 ಕ್ವಾಲಿಫೈಯರ್ 1 ರಲ್ಲಿ ಆರ್‌ಸಿಬಿ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಧರ್ಮಶಾಲಾದಲ್ಲಿ ಸೆಣಸಾಡಲಿವೆ. ಈ ಪಂದ್ಯ ಮಳೆಯಿಂದ ರದ್ದಾದರೆ, ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಆರ್‌ಸಿಬಿ ನೇರವಾಗಿ ಫೈನಲ್‌ಗೆ ಅರ್ಹತೆ ಪಡೆಯುತ್ತದೆ. ಸೋತ ತಂಡಕ್ಕೆ ಕ್ವಾಲಿಫೈಯರ್ 2 ಆಡಲು ಮತ್ತೊಂದು ಅವಕಾಶವಿದ್ದರೂ,…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!