ಹಾಸನಾಂಬ ದೇವಿ ದರ್ಶನಕ್ಕೆ ವಿಐಪಿ ವಿವಿಐಪಿ ಪಾಸ್ ಗಳು ರದ್ದು…..!

ಹಾಸನಾಂಬಾ ದೇವಿ ದರ್ಶನ 2025
ಅಕ್ಟೋಬರ್ 10 ರಿಂದ 22 ರ ವರೆಗೆ ಸಾರ್ವಜನಿಕ ದರ್ಶನಕ್ಕೆ ಅವಕಾಶ ಈ ಬಾರಿ ವಿಐಪಿ, ವಿವಿಐಪಿ ಪಾಸ್‌ಗಳು ಸಂಪೂರ್ಣ ರದ್ದು ಹೊಸದಾಗಿ ಗೋಲ್ಡ್ ಪಾಸ್ ವಿತರಣೆ ಗೋಲ್ಡ್ ಕಾರ್ಡ್ ಪಡೆದರೆ ಮುಂಜಾನೆ 5 ರಿಂದ 11 ಗಂಟೆಯವರೆಗೆ ದರ್ಶನ ಗೋಲ್ಡ್ ಪಾಸ್ ನಲ್ಲಿ ಒಬ್ಬರಿಗೆ ಮಾತ್ರ ಅವಕಾಶ. ಹಾಸನಾಂಬೆ ಉತ್ಸವದಲ್ಲಿ ವಿಐಪಿ ಹಾಗೂ ವಿವಿಐಪಿ ಭಕ್ತರಿಂದ ಸಾಮಾನ್ಯ ಭಕ್ತರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಲು ದರ್ಶನಕ್ಕೆ ಸಮಯ ನಿಗದಿಪಡಿಸುವಂತೆ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ಸಲಹೆ ನೀಡಿದರು. “ಗೋಲ್ಡ್ ಕಾರ್ಡ್ ಭಕ್ತರಿಗೆ ಎರಡು ಗಂಟೆ, ಶಿಷ್ಟಾಚಾರ ಭಕ್ತರಿಗೆ ಎರಡು ಗಂಟೆ ಮಾತ್ರ ಅವಕಾಶ ನೀಡಿದರೆ ಸಾಮಾನ್ಯ ಜನರಿಗೆ ದರ್ಶನ ಸುಗಮವಾಗುತ್ತದೆ’ ಎಂದು ಅವರು ತಿಳಿಸಿದರು. ಹಾಸನದ ಜಿ.ಪಂ. ಸಭಾಂಗಣದಲ್ಲಿ ನಡೆದ ಉತ್ಸವದ ತಯಾರಿ ಸಭೆಯಲ್ಲಿ ಮಾತನಾಡಿದ ಸಚಿವರು, “ಹಾಸನಾಂಬೆ ಉತ್ಸವದ ವೇಳೆ ಒಂದೂವರೆ ತಿಂಗಳು ಇಲಾಖೆಯ ಬೇರೆ ಯಾವುದೇ ಕೆಲಸಗಳು ಆಗದೆ ನಿಂತುಹೋಗುತ್ತವೆ. ಕಳೆದ ವರ್ಷವೂ ಇದೇ ಪರಿಸ್ಥಿತಿ ಕಂಡಿದ್ದೆ. ಉತ್ಸವದ ಸಿದ್ಧತೆಯ ಜೊತೆಗೆ ಜನರ ಕೆಲಸವನ್ನೂ ನಿರ್ಲಕ್ಷಿಸಬಾರದು” ಎಂದು ಅಧಿಕಾರಿಗಳಿಗೆ ಸೂಚಿಸಿದರು.

ರಾಜ್ಯದ ಎಲ್ಲೆಡೆಗಳಿಂದ ಭಕ್ತರು ಹಾಸನಾಂಬೆ ದರ್ಶನಕ್ಕೆ ಬರುತ್ತಾರೆ. ಆದ್ದರಿಂದ ವಿಶೇಷ ಭಕ್ತರ ಸಂಸ್ಕೃತಿ ಸಾಮಾನ್ಯ ಜನರಿಗೆ ತೊಂದರೆ ತರಬಾರದು ಎಂದು ಸಚಿವರು ಮನವಿ ಮಾಡಿದರು. ಜನರ ಅನುಕೂಲಕ್ಕಾಗಿ ಬೇಕಾದ ಬದಲಾವಣೆಗಳನ್ನು ಅಳವಡಿಸಿಕೊಳ್ಳಲು ಸಭೆಯಲ್ಲಿ ಇಲಾಖೆಯ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!